rss ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ. (naanu gouri)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *