ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು. – ಹೆಚ್.ವಿಶ್ವನಾಥ್

ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕ ಬದಲಾಯಿಸುವುದು ಸರಿಯಲ್ಲ.. ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್

ಕೇವಲ ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕವನ್ನು ಬದಲಾಯಿಸುವುದು ಸರಿಯಲ್ಲ. ಮಕ್ಕಳು ಎಂದೂ ಏಕ ಪಕ್ಷದ ದೃಷ್ಟಿಕೋನದಲ್ಲಿ ಬೆಳೆಯಬಾರದು. ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಹೆಚ್​.ವಿಶ್ವನಾಥ್​ ಆಗ್ರಹಿಸಿದ್ದಾರೆ..

ಬೆಂಗಳೂರು : ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ರದ್ದುಗೊಳಿಸಿ, ಶಿಕ್ಷಣವನ್ನು ಕೇಸರಿಕರಣ ಮಾಡುವುದರಿಂದ ತಪ್ಪಿಸಬೇಕು ಎಂದು ಶಿಕ್ಷಣ ಸಚಿವರಿಗೆ ವಿಧಾನ ಪರಿಷತ್​ ಸದಸ್ಯ ಅಡುಗೂರು ಹೆಚ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಮಂಗಳವಾರ ಪ್ರೆಸ್​ಕ್ಲಬ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು.

ಅವರಲ್ಲಿ ಯಾರು ಸರಿಯಾದ ಶಿಕ್ಷಣ ತಜ್ಞರಲ್ಲ. ಅಲ್ಲದೇ, ಆ ಸಮಿತಿಯನ್ನು ಸ್ಥಾಪಿಸುವಾಗ ಆಗಲಿ ಅಥವಾ ಪುಸ್ತಕ ಪರಿಷ್ಕರಣೆ ಮಾಡುವಾಗ ಆಗಲಿ ಯಾವುದೇ ನಿಯಮಗಳನ್ನು ಪಾಲಿಸಿಲ್ಲ ಎಂದು ದೂರಿದರು.

.ಎಂಎಲ್​ಸಿ ಹೆಚ್​ ವಿಶ್ವನಾಥ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವುದು..

ಕೇವಲ ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕವನ್ನು ಬದಲಾಯಿಸುವುದು ಸರಿಯಲ್ಲ. ಇದು ಮಕ್ಕಳ ಭವಿಷ್ಯದ ಪ್ರಶ್ನೆ. ಮಕ್ಕಳು ಎಂದೂ ಏಕ ಪಕ್ಷಾ ದೃಷ್ಟಿಕೋನದಲ್ಲಿ ಬೆಳೆಯಬಾರದು. ಅದು ಉತ್ತಮ ಬೆಳವಣಿಗೆ ಅಲ್ಲ. ಹಾಗಾಗಿ, ಈ ಪಠ್ಯವನ್ನು ರದ್ದುಗೊಳಿಸಬೇಕು ಎಂದರು.

ಪಠ್ಯ ಪುಸ್ತಕಗಳ ಪರಿಕ್ಷರಣೆ ತಪ್ಪಲ್ಲ: ಹಿಂದಿನ ಪಠ್ಯ ಪುಸ್ತಕಗಳು ಸಂಪೂರ್ಣವಾಗಿ ಸರಿ ಇದೆ ಎಂದು ಹೇಳುವುದಿಲ್ಲ. ಅದರಲ್ಲಿಯೂ ಅನೇಕ ತಪ್ಪಿತ್ತು. ಆದರೆ, ಅನೇಕ ಚರ್ಚೆಗಾಗಿ ನಂತರ ಆ ಪಠ್ಯ ಪುಸ್ತಕಗಳನ್ನು ಜಾರಿಗೆ ತರಲಾಗಿತ್ತು. ಇಲ್ಲಿ ಯಾವುದೇ ಒಂದು ನಿಯಮ, ಎನ್‌ಸಿಆರ್‌ಟಿ ವಿಷಯಗಳನ್ನು ಅನುಸರಿಸಿಲ್ಲ. ಅದು ತಪ್ಪು. ಹಾಗಾಗಿ, ಈ ಸಮಿತಿಯನ್ನು ರದ್ದು ಮಾಡಿ, ಉನ್ನತ ಮಟ್ಟದ ಸಮಿತಿ ರಚಿಸಿ ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡಲಿ ಎಂದು ಆಗ್ರಹಿಸಿದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *