ಸುಪ್ರಿಯಾ ಇಂಟರ್‌ ನ್ಯಾಶನಲ್‌ ಉದ್ಘಾಟನೆ, ಭೀಮಣ್ಣ ನಾಯ್ಕರಿಗೆ ಶ್ಲಾಘನೆ

ರೈತ ಸಾಧನೆ ಮೂಲಕ ಬೆಳೆಯಬೇಕು ಎಂದು ಪ್ರತಿಪಾದಿಸಿರುವ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ರೈತನಾಗಿ ಬೆಳೆದುಬಂದ ಭೀಮಣ್ಣ ನಾಯ್ಕ ಇಂಥ ಸುಸಜ್ಜಿತ ಹೋಟೆಲ್‌, ಉದ್ಯಮದ ಗೆಲುವಿನೊಂದಿಗೆ ಮಾಡಿದ ಸಾಧನೆ ಹೆಚ್ಚು ಜನರಿಗೆ ತಿಳಿಯಬೇಕು ಆಗ ರೈತನಿಗೆ ಆತ್ಮವಿಶ್ವಾಸ ಮೂಡುತ್ತದೆ ಎಂದರು. ಶಿರಸಿಯಲ್ಲಿ ಇಂದು ಲೋಕಾರ್ಪಣೆಗೊಂಡ ಸುಪ್ರಿಯಾ ಇಂಟರ್‌ ನ್ಯಾಶನಲ್‌ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ನಾವು ನಮ್ಮ ಸಾಧನೆಯಿಂದಲೇ ಪರಿಚಯವಾಗುವುದು ಹೆಚ್ಚು ಶ್ರೇಯಸ್ಕರ ಎಂದು ಮಾರ್ಮಿಕವಾಗಿ ನುಡಿದರು.‌

ಭೀಮಣ್ಣ ನಾಯ್ಕ ಮಿತಭಾಷಿ ರಾಜಕೀಯ ಅವರಿಗೆ ಕೈ ಹಿಡಿಯದಿದ್ದರೂ ಉದ್ಯಮ ಕ್ಷೇತ್ರದಲ್ಲಿ ಅವರು ಯಶಸ್ಸು ಸಾಧಿಸಿದ್ದಾರೆ. ಅವರ ಪ್ರೀತಿ-ವಿಶ್ವಾಸಗಳ ಕಾರಣಕ್ಕೆ ತಾನು ಮೈಸೂರಿನಿಂದ ಹೆಲಿಕಾಪ್ಟರ್‌ ನಲ್ಲಿ ಬಂದು ಈ ಸಮಾರಂಭದಲ್ಲಿ ಪಾಲ್ಗೊಂಡೆ ಎಂದರು.

ಭೀಮಣ್ಣ ಮೌನ ಸಾಧಕ ಎಂದು ಅಭಿನಂದಿಸಿದ ಡಾ. ಶಿವರಾಜ್‌ ಕುಮಾರ ಭೀಮಣ್ಣ ಏನನ್ನೂ ಹೇಳಿಕೊಳ್ಳದೆ ಅಂದುಕೊಂಡದ್ದನ್ನು ಸಾಧಿಸುತ್ತಾರೆ ಅವರ ಒಡನಾಟ, ಸೌಜನ್ಯ ನಮಗೆ ಹೆಮ್ಮೆಯ ಭಾವನೆ ಮೂಡಿಸುತ್ತದೆ ಎಂದು ಶ್ಲಾಘಿಸಿದರು.

ಭೀಮಣ್ಣರನ್ನು ಅಭಿನಂದಿಸಿದ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಮತ್ತು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೀಮಣ್ಣ ಎಂಥ ಸಾಧಕ ಎನ್ನುವುದು ಈಗ ಸಾಬೀತಾಗಿದೆ. ಅವರ ಕುಟುಂಬ ಇದರ ಹಿಂದಿರುವ ಶಕ್ತಿ ಎಂದರು. ಕಾರ್ಯಕ್ರಮದ ಅತಿಥಿಯಾಗಿ ಪಾಲ್ಗೊಂಡ ಮಧು ಬಂಗಾರಪ್ಪ ಮಾತನಾಡಿ ʼನಮ್ಮ ತಂದೆ-ತಾಯಿ ನಂತರ ಇಲ್ಲಿರುವ ಹಿರಿಯರೆಲ್ಲಾ ಅವರ ಹಿತೈಶಿ,ಪ್ರತಿನಿಧಿಗಳಾಗಿ ನಮ್ಮನ್ನು ಹರಿಸುತ್ತಿರುವುದಕ್ಕೆ ನಮಗೆಲ್ಲಾ ಖುಷಿ-ಸಂಬ್ರಮ ಎಂದು ನೆನೆದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಸೂರಜ್ ರೇವಣ್ಣ ಹಾಸನ: ಅಸಹಜ ಲೈಂಗಿಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *