ಉತ್ತರಕನ್ನಡ ನೆರೆ ನಿರಾಶ್ರಿತರಿಗೆ ಹುಸಿಯಾದ ಭರವಸೆ: ಮತ್ತೆ ಶುರುವಾದ ಆತಂಕ

ಕಳೆದ ಮೂರು ವರ್ಷಗಳಲ್ಲಿ ಸುರಿದ ಮಳೆ, ಉಂಟಾದ ನೆರೆ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಮನೆಗಳನ್ನು ಕಳೆದುಕೊಂಡಿದ್ದರು. ಸರ್ಕಾರದಿಂದ ನೆರವು ಸಿಗುವ ನಿರೀಕ್ಷೆಯಲ್ಲೇ ಬಾಡಿಗೆ ಮನೆಗಳಲ್ಲಿ ಉಳಿದುಕೊಂಡಿದ್ದರು. ಆದ್ರೆ ಇದೀಗ ಮತ್ತೆ ಮಳೆಗಾಲ ಆರಂಭವಾಗಲಿದ್ದು, ಈವರೆಗೂ ಸಹ ಸಾಕಷ್ಟು ಕುಟುಂಬಗಳಿಗೆ ಸರ್ಕಾರದಿಂದ ಮನೆಯಾಗಲಿ, ಸೂಕ್ತ ಪರಿಹಾರವಾಗಲಿ ಲಭಿಸಿಲ್ಲ.

ಕಾರವಾರ(ಉತ್ತರಕನ್ನಡ): 2019. ಈ ವರ್ಷದಲ್ಲಿ ಉತ್ತರಕನ್ನಡ ಜಿಲ್ಲೆ ಕಂಡು ಕೇಳರಿಯದ ಧಾರಾಕಾರ ಮಳೆಗೆ ಸಾಕ್ಷಿಯಾಗಿತ್ತು. ಹಲವೆಡೆ ವಾರಗಳ ಕಾಲ ನೆರೆ ಪರಿಸ್ಥಿತಿ ಆವರಿಸಿತ್ತು. 2020ರಲ್ಲಿ ಅಷ್ಟು ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿಲ್ಲವಾದರೂ ಕೆಲವೆಡೆ ಸುರಿದ ಮಳೆ ಸಾಕಷ್ಟು ಹಾನಿ ಉಂಟುಮಾಡಿದೆ. ಆದ್ರೆ ಕಳೆದ 2021ರಲ್ಲಿ ಸುರಿದ ಭಾರಿ ಮಳೆಗೆ ಕಾಳಿ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಕಾರವಾರ ತಾಲೂಕಿನ ಕದ್ರಾ ಜಲಾಶಯದಿಂದ ಹೊರಬಿಟ್ಟ ನೀರಿನಿಂದಾಗಿ ನದಿ ಪಾತ್ರದ ಸಾಕಷ್ಟು ಮನೆಗಳು ಕೊಚ್ಚಿ ಹೋಗಿದ್ದವು. ಏಕಾಏಕಿ ಜಲಾಶಯದಿಂದ ನೀರು ಹೊರಬಿಟ್ಟಿದ್ದು ಜನರು ಸರ್ವಸ್ವವನ್ನೂ ಕಳೆದುಕೊಳ್ಳುವಂತಾಯಿತು. ಘಟನೆ ನಡೆದು ವರ್ಷ ಕಳೆಯುತ್ತಾ ಬಂದರೂ ಈವರೆಗೂ ಅವರಿಗೆ ಮನೆ ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ.

ಆ ಸಂದರ್ಭದಲ್ಲಿ ಜಿಲ್ಲಾಡಳಿತ ನೆರೆ ನಿರಾಶ್ರಿತರಿಗೆ ಪರಿಹಾರದ ಜೊತೆಗೆ ಮನೆ ಕಟ್ಟಿಕೊಳ್ಳಲು ಪರ್ಯಾಯ ಜಾಗ ನೀಡುವುದಾಗಿ ಭರವಸೆ ನೀಡಿತ್ತು. ಘಟನೆ ನಡೆದು ವರ್ಷ ಕಳೆಯುತ್ತಾ ಬಂದಿದ್ದು ಈವರೆಗೂ ಹಲವು ನಿರಾಶ್ರಿತರಿಗೆ ಪರಿಹಾರ ಕೈಸೇರಿಲ್ಲ. ಮನೆ ಕಟ್ಟಿಕೊಳ್ಳಲು ಜಾಗವನ್ನೂ ನೀಡಿಲ್ಲ.

ಜಲಾಶಯದಿಂದ ಹೊರಬಿಟ್ಟ ನೀರಿನಿಂದಾಗಿ ಜಲಾಶಯ ವ್ಯಾಪ್ತಿಯ ಕದ್ರಾ, ಮಲ್ಲಾಪುರ, ಗಾಂಧಿನಗರ, ಕುರ್ನಿಪೇಟ್ ಸೇರಿದಂತೆ ಸಾಕಷ್ಟು ಪ್ರದೇಶಗಳಲ್ಲಿ ನೆರೆ ಹಾನಿ ಸಂಭವಿಸಿದೆ. ಅದರಲ್ಲೂ ಜಲಾಶಯದ ಬುಡದಲ್ಲೇ ಇರುವ ಗಾಂಧಿನಗರ ಭಾಗದ ಇಪ್ಪತ್ತಕ್ಕೂ ಅಧಿಕ ಮನೆಗಳು ಸಂಪೂರ್ಣವಾಗಿ ಮುಳುಗಡೆಯಾಗಿ ಪ್ರವಾಹಕ್ಕೆ ಕೊಚ್ಚಿಹೋಗಿದ್ದವು.

ಪರಿಣಾಮ, ನೂರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಸದ್ಯ ಬಾಡಿಗೆ ಮನೆಗಳಲ್ಲೇ ಜೀವನ ನಡೆಸುತ್ತಿದ್ದಾರೆ. ಇನ್ನೇನು ಮಲೆಗಾಲ ಆರಂಭವಾಗಲಿದ್ದು ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಅಂತಾರೆ ಸ್ಥಳೀಯರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *