ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಲೇಖಕರು, ರಾಜಕೀಯ ನಾಯಕರು, ಸಾಹಿತಿಗಳಿಂದ ಒತ್ತಡ

ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.

Rohith Chakrathirtha

ಬೆಂಗಳೂರು: ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ. 

ಆದಿಚುಂಚನಗಿರಿ ಮಠದ ಮುಖ್ಯಸ್ಥ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ‘ರಾಷ್ಟ್ರಕವಿ’ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ಅವಮಾನ ಮಾಡಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 

ಕುವೆಂಪು ಅವರು ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ಕನ್ನಡ ಮತ್ತು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಸರ್ಕಾರ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವಿಸುವುದರ ಜೊತೆಗೆ ಅವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಸ್ಥಾಪಿಸಿತು. ಆದರೆ, ಅವರನ್ನು ಅವಮಾನ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಜವಾಬ್ದಾರಿಯುತ ಹುದ್ದೆ ನೀಡಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಈ ನಡುವೆ ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಹಂಪ ನಾಗರಾಜಯ್ಯ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಈ ಬೆಳವಣಿಗೆಯಲ್ಲಿ ಸರಕಾರ ಮೂಕಪ್ರೇಕ್ಷಕರಾಗಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ, ನಾಡಗೀತೆಯನ್ನು ಅವಮಾನಿಸುವವರಿಗೆ ಸರಕಾರಿ ಸಮಿತಿಗಳ ಸದಸ್ಯರಾಗಿ ಅವಕಾಶ ಸಿಗುತ್ತದೆ ಎಂಬ ತಪ್ಪು ಸಂದೇಶ ರವಾನಿಸಲಾಗುತ್ತಿದೆ. “ವ್ಯಕ್ತಿಗಳ ಮೇಲಿನ ದಾಳಿಯನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಭರವಸೆ ವ್ಯರ್ಥವಾಯಿತು, ಮತ್ತು ಕುವೆಂಪು ಮತ್ತು ನಾಡಗೀತೆಯ ಅವಮಾನವಾಗುತ್ತಿದ್ದರೂ ಮೌನವಾಗಿರುವುದು ನನ್ನಿಂದ ಸಾಧ್ಯವಿಲ್ಲ. ಹೀಗಾಗಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾನೆ. ಮುಖ್ಯಮಂತ್ರಿಗಳು ಈ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ನಾಗರಾಜಯ್ಯ ಹೇಳಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *