ತಪ್ಪು ತಿದ್ದಿಕೊಳ್ಳದ ಸರ್ಕಾರದ ನಡೆ ಸರಿಯೆ? ನೀವೇ ಪ್ರತಿಕ್ರೀಯಿಸಿ….

BJP tweet against writers and congress

ಸಾಹಿತಿಗಳ ಪಠ್ಯ ವಾಪಸ್ ಸಮರ: ಬಿಜೆಪಿಯಿಂದ ‘ಟೂಲ್ ಕಿಟ್ ರಾಜೀನಾಮೆ ಸ್ವೀಕರಿಸಿ’ ಅಭಿಯಾನ

ಪಠ್ಯ ವಾಪಸ್ ಸಮರದ ವಿರುದ್ಧ ಬಿಜೆಪಿ ಮುಖಂಡರು ಕಿಡಿಕಾರಿದ್ದು, ಇದು ಕಾಂಗ್ರೆಸ್ ಕೃಪಾಪೋಷಿತ ಟೂಲ್ ಕಿಟ್ ರಾಜೀನಾಮೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಒಬ್ಬರ ಹಿಂದೆ ಒಬ್ಬರಂತೆ ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುತ್ತಿದ್ದಾರೆ. ಈ ಪಠ್ಯ ವಾಪಸ್ ಸಮರದ ವಿರುದ್ಧ ಬಿಜೆಪಿಯ ಮುಖಂಡರು ಕಿಡಿಕಾರಿದ್ದು, ಇದು ಕಾಂಗ್ರೆಸ್ ಕೃಪಾಪೋಷಿತ ಟೂಲ್ ಕಿಟ್ ರಾಜೀನಾಮೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಹಾಗೂ ಬಲಪಂಥೀಯರಿಂದ ಟೂಲ್ ಕಿಟ್ ರಾಜೀನಾಮೆ ಎಂದು ವ್ಯಾಖ್ಯಾನ ಮಾಡಿದ್ದು, ಇಂತಹ ಸಾಹಿತಿಗಳ ರಾಜೀನಾಮೆಯಿಂದ ರಾಜ್ಯ ಸರ್ಕಾರಕ್ಕೆ ಮರುಕವಿಲ್ಲ ಅಂತ ಟ್ವೀಟ್ ಮೂಲಕ ಸಚಿವ ಅಶ್ವತ್ಥ್ ನಾರಾಯಣ್ ಕಿಡಿಕಾರಿದ್ದಾರೆ. ಸುಳ್ಳಿನ ಕಥೆ ಹೆಣೆಯುವಲ್ಲಿ ಪಳಗಿರುವ ಕಾಂಗ್ರೆಸ್‌ ಕೃಪಾಪೋಷಿತ ಸಾಹಿತಿಗಳ ಬಳಗವಿಂದು ತಮ್ಮ ಬೇಳೆ ಬೇಯಿಸಿಕೊಳ್ಳಲಾಗದೇ ಕಂಪಿಸುತ್ತಿದೆ. #ToolkitResignation ತಂತ್ರ ಬಳಸಿ ಸಿಂಪತಿ ಗಿಟ್ಟಿಸಿಕೊಳ್ಳಬಯಸುವ ಇಂಥವರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಯಾವುದೇ ಮರುಕವಿಲ್ಲ. ಇವರಿಗೆ ನೂತನ ಪಠ್ಯಕ್ರಮ ಪಥ್ಯವಾಗದ ಮಾತ್ರಕ್ಕೆ ಬದಲಾಯಿಸಲಾಗದು ಎಂದು ಕಿಡಿಕಾರಿದ್ದಾರೆ.

  • ಸುಳ್ಳಿನ ಕಥೆ ಹಣೆಯುವಲ್ಲಿ ಪಳಗಿರುವ ಕಾಂಗ್ರೆಸ್‌ ಕೃಪಾಪೋಷಿತ ಸಾಹಿತಿಗಳ ಬಳಗವಿಂದು ತಮ್ಮ ಬೇಳೆ ಬೇಯಿಸಿಕೊಳ್ಳಲಾಗದೇ ಕಂಪಿಸುತ್ತಿದೆ.#ToolkitResignation ತಂತ್ರ ಬಳಸಿ ಸಿಂಪತಿ ಗಿಟ್ಟಿಸಿಕೊಳ್ಳಬಯಸುವ ಇಂಥವರ ಬಗ್ಗೆ @BJP4Karnataka ಸರ್ಕಾರಕ್ಕೆ ಯಾವುದೇ ಮರುಕವಿಲ್ಲ. ಇವರಿಗೆ ನೂತನ ಪಠ್ಯಕ್ರಮ ಪಥ್ಯವಾಗದ ಮಾತ್ರಕ್ಕೆ ಬದಲಾಯಿಸಲಾಗದು.— Dr. Ashwathnarayan C. N. (@drashwathcn) May 31, 2022

ಸಚಿವ ನಿರಾಣಿ ಕೂಡ ಸಾಹಿತಿಗಳು, ಕಾಂಗ್ರೆಸ್ ನಾಯಕರ ವಿರುದ್ಧ ಗರಂ ಆಗಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿ. ತುಷ್ಟೀಕರಣ, ತುಚ್ಛೀಕರಣಗಳಲ್ಲೇ ಮುಳುಗಿರುವವರ ಯೋಗ್ಯತೆಯೂ ಇಷ್ಟೇ. ಕರ್ನಾಟಕ ಬಿಜೆಪಿಗೆ ಇಂತಹ ಮುಲಾಜುಗಳಿಲ್ಲ. ಸತ್ಯವನ್ನು ಎತ್ತಿ ಹಿಡಿಯುವುದು ಮತ್ತು ಅದನ್ನು ಮಕ್ಕಳಿಗೆ ಕಲಿಸುವುದು ನಮ್ಮ ಸಂಕಲ್ಪ. #ToolkitResignation ಕೆಲಸವನ್ನು ಕಾಂಗ್ರೆಸ್ ಮುಂದುವರಿಸಲಿ‌ ಎಂದಿದ್ದಾರೆ.

  • ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿ. ತುಷ್ಟೀಕರಣ, ತುಚ್ಛೀಕರಣಗಳಲ್ಲೇ ಮುಳುಗಿರುವವರ ಯೋಗ್ಯತೆಯೂ ಇಷ್ಟೇ. @BJP4Karnataka ಕ್ಕೆ ಇಂತಹ ಮುಲಾಜುಗಳಿಲ್ಲ. ಸತ್ಯವನ್ನು ಎತ್ತಿ ಹಿಡಿಯುವುದು ಮತ್ತು ಅದನ್ನು ಮಕ್ಕಳಿಗೆ ಕಲಿಸುವುದು ನಮ್ಮ ಸಂಕಲ್ಪ. #ToolkitResignation ಕೆಲಸವನ್ನು ಕಾಂಗ್ರೆಸ್ ಮುಂದುವರೆಸಲಿ.— Dr. Murugesh R Nirani (@NiraniMurugesh) May 31, 2022

ಪಠ್ಯವಿರೋಧಿ ತಂತ್ರದ ಎಲ್ಲಾ ಸಾಧನಗಳೂ ಮುಗಿದು ದಿಕ್ಕೆಟ್ಟಿರುವ ಕಾಂಗ್ರೆಸ್ ಕೊನೆಯ ದಾಳವಾಗಿ ತಾನು ಪೋಷಿಸಿಕೊಂಡು ಬಂದಿರುವ ಸಾಹಿತಿಗಳನ್ನು ಈಗ ಛೂ ಬಿಟ್ಟಿದೆ. ಒಬ್ಬರ ಹಿಂದೆ ಒಬ್ಬರಂತೆ ಸಾಹಿತಿಗಳು ಕಾಂಗ್ರೆಸ್ ನೀಡಿದ್ದ ಪದವಿ ಭಿಕ್ಷೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ಸರ್ಕಾರ ಇದನ್ನು ಅಂಗೀಕರಿಸಬೇಕು! #AcceptToolkitResignation ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

AcceptToolkitResignation ಅಭಿಯಾನ ಶುರು: ಬಿಜೆಪಿ ಹಾಗೂ ಬಲಪಂಥೀಯರಿಂದ ಟೂಲ್ ಕಿಟ್ ರಾಜೀನಾಮೆ ಎಂದು ವ್ಯಾಖ್ಯಾನ ಬೆನ್ನಲ್ಲೇ, ರಾಜೀನಾಮೆಯನ್ನು ಅಂಗೀಕರಿಸಿ ಎಂದು ಅಭಿಯಾನ ಶುರುವಾಗಿದೆ. #AcceptToolkitResignation ಎಂದು ಅಭಿಯಾನ ಶುರುವಾಗಿದ್ದು, ಇದು ಟೂಲ್ ಕಿಟ್ ರಾಜೀನಾಮೆ ಎಂದು ಬಿಜೆಪಿ ಮುಖಂಡರು ಟೀಕಿಸಿದ್ದಾರೆ. ಸಿಎಂ ಹಾಗೂ ಶಿಕ್ಷಣ ಸಚಿವರ ಬೆನ್ನಿಗೆ ನಿಂತಿರುವ ಸಚಿವ ಸುಧಾಕರ್, ಸಚಿವ ಮುರುಗೇಶ್ ನಿರಾಣಿ, ಸಚಿವ ಅಶ್ವತ್ಥ್ ನಾರಾಯಣ್ ಪಠ್ಯ ಪರಿಷ್ಕರಣೆ ಸಂಬಂಧ ಸಮರ್ಥನೆ ಮಾಡಿಕೊಂಡಿದ್ದಾರೆ.https://25cdf39085263bd48737e0333a88ce60.safeframe.googlesyndication.com/safeframe/1-0-38/html/container.html

ಬೊಮ್ಮಾಯಿ ಸರ್ ನನ್ನದೊಂದು ಮನವಿ, ಕುವೆಂಪು ಪ್ರತಿಷ್ಠಾನಕ್ಕೆ ಯಾರೇ ರಾಜೀನಾಮೆ ನೀಡಿದರೂ ಅದನ್ನು ಅಂಗೀಕರಿಸಿ. ಆ ಸ್ಥಾನಕ್ಕೆ ಸೂಕ್ತ ಮತ್ತು ರಾಷ್ಟ್ರೀಯ ವಿಚಾರವುಳ್ಳ ವ್ಯಕ್ತಿಗಳನ್ನು ಆಯ್ಕೆ ಮಾಡಿ. ರಾಜೀನಾಮೆ ನಾಟಕಕ್ಕೆ ಬಗ್ಗದೇ ರೋಹಿತ್ ಹಾಗೂ ಸಚಿವ ಬಿ.ಸಿ ನಾಗೇಶ್ ಅವರ ಬೆನ್ನಿಗೆ ನಿಲ್ಲಿ. ಯಾವುದೇ ಕಾರಣಕ್ಕೂ ಎಡವಟ್ಟು ಪಂಥೀಯರಿಗೆ ಮಣಿಯಬೇಡಿ. ಏನೂ ಕೆಲಸ ಮಾಡದೇ, ಸಮಾಜಕ್ಕೆ ಯಾವುದೇ ಕೊಡುಗೆ ಕೊಡದೇ, ಕೇವಲ ಜಾತಿಯ ಆಧಾರದಲ್ಲಿ ಮತ್ತು ಕಾಂಗ್ರೆಸ್​ನ ಕೆಲವು ಮನೆತನಗಳ ಜೀತ ಮಾಡಿದ ಕಾರಣಕ್ಕೆ ಕೆಲವು ಪ್ರಾಧಿಕಾರ, ಪ್ರತಿಷ್ಠಾನಗಳ ಅಧ್ಯಕ್ಷ, ಸದಸ್ಯಗಿರಿಯ ಲಾಭ ಅಥವಾ ಭಿಕ್ಷೆ ಪಡೆದ ಸಾಹಿತ್ಯ ರಾಜಕಾರಣಿಗಳ ರಾಜೀನಾಮೆ ಇದು. ಮೀನಾಮೇಷ ಎಣಿಸಬೇಡಿ, ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸತ್ಯ ಅರಿಯಲಿ. ನಮ್ಮ ಜನರೇಷನ್ ತರ ಸುಳ್ಳಿನ ಕಂತೆ ಓದೋದು ತಪ್ಪಲಿ ಎಂದು ಹಲವರು ಟ್ವೀಟ್ ಮಾಡಿ ಆಕ್ರೋಶ ‌ಹೊರಹಾಕುತ್ತಿದ್ದಾರೆ.‌ (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *