ತಪ್ಪು ತಿದ್ದಿಕೊಳ್ಳದ ಸರ್ಕಾರದ ನಡೆ ಸರಿಯೆ? ನೀವೇ ಪ್ರತಿಕ್ರೀಯಿಸಿ….

BJP tweet against writers and congress

ಸಾಹಿತಿಗಳ ಪಠ್ಯ ವಾಪಸ್ ಸಮರ: ಬಿಜೆಪಿಯಿಂದ ‘ಟೂಲ್ ಕಿಟ್ ರಾಜೀನಾಮೆ ಸ್ವೀಕರಿಸಿ’ ಅಭಿಯಾನ

ಪಠ್ಯ ವಾಪಸ್ ಸಮರದ ವಿರುದ್ಧ ಬಿಜೆಪಿ ಮುಖಂಡರು ಕಿಡಿಕಾರಿದ್ದು, ಇದು ಕಾಂಗ್ರೆಸ್ ಕೃಪಾಪೋಷಿತ ಟೂಲ್ ಕಿಟ್ ರಾಜೀನಾಮೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಒಬ್ಬರ ಹಿಂದೆ ಒಬ್ಬರಂತೆ ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುತ್ತಿದ್ದಾರೆ. ಈ ಪಠ್ಯ ವಾಪಸ್ ಸಮರದ ವಿರುದ್ಧ ಬಿಜೆಪಿಯ ಮುಖಂಡರು ಕಿಡಿಕಾರಿದ್ದು, ಇದು ಕಾಂಗ್ರೆಸ್ ಕೃಪಾಪೋಷಿತ ಟೂಲ್ ಕಿಟ್ ರಾಜೀನಾಮೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಹಾಗೂ ಬಲಪಂಥೀಯರಿಂದ ಟೂಲ್ ಕಿಟ್ ರಾಜೀನಾಮೆ ಎಂದು ವ್ಯಾಖ್ಯಾನ ಮಾಡಿದ್ದು, ಇಂತಹ ಸಾಹಿತಿಗಳ ರಾಜೀನಾಮೆಯಿಂದ ರಾಜ್ಯ ಸರ್ಕಾರಕ್ಕೆ ಮರುಕವಿಲ್ಲ ಅಂತ ಟ್ವೀಟ್ ಮೂಲಕ ಸಚಿವ ಅಶ್ವತ್ಥ್ ನಾರಾಯಣ್ ಕಿಡಿಕಾರಿದ್ದಾರೆ. ಸುಳ್ಳಿನ ಕಥೆ ಹೆಣೆಯುವಲ್ಲಿ ಪಳಗಿರುವ ಕಾಂಗ್ರೆಸ್‌ ಕೃಪಾಪೋಷಿತ ಸಾಹಿತಿಗಳ ಬಳಗವಿಂದು ತಮ್ಮ ಬೇಳೆ ಬೇಯಿಸಿಕೊಳ್ಳಲಾಗದೇ ಕಂಪಿಸುತ್ತಿದೆ. #ToolkitResignation ತಂತ್ರ ಬಳಸಿ ಸಿಂಪತಿ ಗಿಟ್ಟಿಸಿಕೊಳ್ಳಬಯಸುವ ಇಂಥವರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಯಾವುದೇ ಮರುಕವಿಲ್ಲ. ಇವರಿಗೆ ನೂತನ ಪಠ್ಯಕ್ರಮ ಪಥ್ಯವಾಗದ ಮಾತ್ರಕ್ಕೆ ಬದಲಾಯಿಸಲಾಗದು ಎಂದು ಕಿಡಿಕಾರಿದ್ದಾರೆ.

  • ಸುಳ್ಳಿನ ಕಥೆ ಹಣೆಯುವಲ್ಲಿ ಪಳಗಿರುವ ಕಾಂಗ್ರೆಸ್‌ ಕೃಪಾಪೋಷಿತ ಸಾಹಿತಿಗಳ ಬಳಗವಿಂದು ತಮ್ಮ ಬೇಳೆ ಬೇಯಿಸಿಕೊಳ್ಳಲಾಗದೇ ಕಂಪಿಸುತ್ತಿದೆ.#ToolkitResignation ತಂತ್ರ ಬಳಸಿ ಸಿಂಪತಿ ಗಿಟ್ಟಿಸಿಕೊಳ್ಳಬಯಸುವ ಇಂಥವರ ಬಗ್ಗೆ @BJP4Karnataka ಸರ್ಕಾರಕ್ಕೆ ಯಾವುದೇ ಮರುಕವಿಲ್ಲ. ಇವರಿಗೆ ನೂತನ ಪಠ್ಯಕ್ರಮ ಪಥ್ಯವಾಗದ ಮಾತ್ರಕ್ಕೆ ಬದಲಾಯಿಸಲಾಗದು.— Dr. Ashwathnarayan C. N. (@drashwathcn) May 31, 2022

ಸಚಿವ ನಿರಾಣಿ ಕೂಡ ಸಾಹಿತಿಗಳು, ಕಾಂಗ್ರೆಸ್ ನಾಯಕರ ವಿರುದ್ಧ ಗರಂ ಆಗಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿ. ತುಷ್ಟೀಕರಣ, ತುಚ್ಛೀಕರಣಗಳಲ್ಲೇ ಮುಳುಗಿರುವವರ ಯೋಗ್ಯತೆಯೂ ಇಷ್ಟೇ. ಕರ್ನಾಟಕ ಬಿಜೆಪಿಗೆ ಇಂತಹ ಮುಲಾಜುಗಳಿಲ್ಲ. ಸತ್ಯವನ್ನು ಎತ್ತಿ ಹಿಡಿಯುವುದು ಮತ್ತು ಅದನ್ನು ಮಕ್ಕಳಿಗೆ ಕಲಿಸುವುದು ನಮ್ಮ ಸಂಕಲ್ಪ. #ToolkitResignation ಕೆಲಸವನ್ನು ಕಾಂಗ್ರೆಸ್ ಮುಂದುವರಿಸಲಿ‌ ಎಂದಿದ್ದಾರೆ.

  • ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿ. ತುಷ್ಟೀಕರಣ, ತುಚ್ಛೀಕರಣಗಳಲ್ಲೇ ಮುಳುಗಿರುವವರ ಯೋಗ್ಯತೆಯೂ ಇಷ್ಟೇ. @BJP4Karnataka ಕ್ಕೆ ಇಂತಹ ಮುಲಾಜುಗಳಿಲ್ಲ. ಸತ್ಯವನ್ನು ಎತ್ತಿ ಹಿಡಿಯುವುದು ಮತ್ತು ಅದನ್ನು ಮಕ್ಕಳಿಗೆ ಕಲಿಸುವುದು ನಮ್ಮ ಸಂಕಲ್ಪ. #ToolkitResignation ಕೆಲಸವನ್ನು ಕಾಂಗ್ರೆಸ್ ಮುಂದುವರೆಸಲಿ.— Dr. Murugesh R Nirani (@NiraniMurugesh) May 31, 2022

ಪಠ್ಯವಿರೋಧಿ ತಂತ್ರದ ಎಲ್ಲಾ ಸಾಧನಗಳೂ ಮುಗಿದು ದಿಕ್ಕೆಟ್ಟಿರುವ ಕಾಂಗ್ರೆಸ್ ಕೊನೆಯ ದಾಳವಾಗಿ ತಾನು ಪೋಷಿಸಿಕೊಂಡು ಬಂದಿರುವ ಸಾಹಿತಿಗಳನ್ನು ಈಗ ಛೂ ಬಿಟ್ಟಿದೆ. ಒಬ್ಬರ ಹಿಂದೆ ಒಬ್ಬರಂತೆ ಸಾಹಿತಿಗಳು ಕಾಂಗ್ರೆಸ್ ನೀಡಿದ್ದ ಪದವಿ ಭಿಕ್ಷೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ಸರ್ಕಾರ ಇದನ್ನು ಅಂಗೀಕರಿಸಬೇಕು! #AcceptToolkitResignation ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

AcceptToolkitResignation ಅಭಿಯಾನ ಶುರು: ಬಿಜೆಪಿ ಹಾಗೂ ಬಲಪಂಥೀಯರಿಂದ ಟೂಲ್ ಕಿಟ್ ರಾಜೀನಾಮೆ ಎಂದು ವ್ಯಾಖ್ಯಾನ ಬೆನ್ನಲ್ಲೇ, ರಾಜೀನಾಮೆಯನ್ನು ಅಂಗೀಕರಿಸಿ ಎಂದು ಅಭಿಯಾನ ಶುರುವಾಗಿದೆ. #AcceptToolkitResignation ಎಂದು ಅಭಿಯಾನ ಶುರುವಾಗಿದ್ದು, ಇದು ಟೂಲ್ ಕಿಟ್ ರಾಜೀನಾಮೆ ಎಂದು ಬಿಜೆಪಿ ಮುಖಂಡರು ಟೀಕಿಸಿದ್ದಾರೆ. ಸಿಎಂ ಹಾಗೂ ಶಿಕ್ಷಣ ಸಚಿವರ ಬೆನ್ನಿಗೆ ನಿಂತಿರುವ ಸಚಿವ ಸುಧಾಕರ್, ಸಚಿವ ಮುರುಗೇಶ್ ನಿರಾಣಿ, ಸಚಿವ ಅಶ್ವತ್ಥ್ ನಾರಾಯಣ್ ಪಠ್ಯ ಪರಿಷ್ಕರಣೆ ಸಂಬಂಧ ಸಮರ್ಥನೆ ಮಾಡಿಕೊಂಡಿದ್ದಾರೆ.https://25cdf39085263bd48737e0333a88ce60.safeframe.googlesyndication.com/safeframe/1-0-38/html/container.html

ಬೊಮ್ಮಾಯಿ ಸರ್ ನನ್ನದೊಂದು ಮನವಿ, ಕುವೆಂಪು ಪ್ರತಿಷ್ಠಾನಕ್ಕೆ ಯಾರೇ ರಾಜೀನಾಮೆ ನೀಡಿದರೂ ಅದನ್ನು ಅಂಗೀಕರಿಸಿ. ಆ ಸ್ಥಾನಕ್ಕೆ ಸೂಕ್ತ ಮತ್ತು ರಾಷ್ಟ್ರೀಯ ವಿಚಾರವುಳ್ಳ ವ್ಯಕ್ತಿಗಳನ್ನು ಆಯ್ಕೆ ಮಾಡಿ. ರಾಜೀನಾಮೆ ನಾಟಕಕ್ಕೆ ಬಗ್ಗದೇ ರೋಹಿತ್ ಹಾಗೂ ಸಚಿವ ಬಿ.ಸಿ ನಾಗೇಶ್ ಅವರ ಬೆನ್ನಿಗೆ ನಿಲ್ಲಿ. ಯಾವುದೇ ಕಾರಣಕ್ಕೂ ಎಡವಟ್ಟು ಪಂಥೀಯರಿಗೆ ಮಣಿಯಬೇಡಿ. ಏನೂ ಕೆಲಸ ಮಾಡದೇ, ಸಮಾಜಕ್ಕೆ ಯಾವುದೇ ಕೊಡುಗೆ ಕೊಡದೇ, ಕೇವಲ ಜಾತಿಯ ಆಧಾರದಲ್ಲಿ ಮತ್ತು ಕಾಂಗ್ರೆಸ್​ನ ಕೆಲವು ಮನೆತನಗಳ ಜೀತ ಮಾಡಿದ ಕಾರಣಕ್ಕೆ ಕೆಲವು ಪ್ರಾಧಿಕಾರ, ಪ್ರತಿಷ್ಠಾನಗಳ ಅಧ್ಯಕ್ಷ, ಸದಸ್ಯಗಿರಿಯ ಲಾಭ ಅಥವಾ ಭಿಕ್ಷೆ ಪಡೆದ ಸಾಹಿತ್ಯ ರಾಜಕಾರಣಿಗಳ ರಾಜೀನಾಮೆ ಇದು. ಮೀನಾಮೇಷ ಎಣಿಸಬೇಡಿ, ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸತ್ಯ ಅರಿಯಲಿ. ನಮ್ಮ ಜನರೇಷನ್ ತರ ಸುಳ್ಳಿನ ಕಂತೆ ಓದೋದು ತಪ್ಪಲಿ ಎಂದು ಹಲವರು ಟ್ವೀಟ್ ಮಾಡಿ ಆಕ್ರೋಶ ‌ಹೊರಹಾಕುತ್ತಿದ್ದಾರೆ.‌ (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *