ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ

ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ

ಒಂದರಿಂದ ಐದನೇ ತರಗತಿರವರೆಗೆ ಇರುವ ಈ ಶಾಲೆಯಲ್ಲಿ ಮಕ್ಕಳೇ ತರಕಾರಿ ಹಣ್ಣು ಬೆಳೆಯುವ ಮೂಲಕ ಪರಿಸರದ ಪಠ್ಯದೊಂದಿಗೆ ಪ್ರಾಯೋಗಿಕ ಕಲಿಕೆಯನ್ನು ಕಲಿಯುತ್ತಿದ್ದಾರೆ. ಬೆಳೆದ ತರಕಾರಿಗಳನ್ನು ಬಿಸಿಯೂಟಕ್ಕೆ ಬಳಸಲಾಗುತ್ತಿದೆ. ಪೋಷಕರು ಮತ್ತು ಗ್ರಾಮಸ್ಥರ ನೆರವಿನಿಂದ ಶಾಲೆ ಉತ್ತಮವಾಗಿ ನಡೆಯುತ್ತಿದೆ. ಆದರೆ ಖಾಯಂ ಶಿಕ್ಷಕರಿಲ್ಲದ ಕೊರತೆ ಶಾಲೆಯನ್ನು ಕಾಡುತ್ತಿದೆ.

ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕುಂಬಾರವಾಡ ಪಂಚಾಯತ್ ವ್ಯಾಪ್ತಿಯ ಡೇರಿಯಾ ಅನ್ನೋ ಪುಟ್ಟ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5ನೇ ತರಗತಿಗಳು ನಡೆಯುತ್ತಿವೆ. ಈ ಶಾಲೆಯಲ್ಲಿ 18 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಶಾಲೆಗೆ ಪ್ರವೇಶ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಗಿಡವನ್ನ ನೆಟ್ಟು ಪೋಷಣೆ ಮಾಡಬೇಕು.

ಶಾಲೆಯ ವ್ಯಾಪ್ತಿಯಲ್ಲಿರುವ ಒಂದೂವರೆ ಎಕರೆ ಪ್ರದೇಶದಲ್ಲಿ ಕಳೆದ 14 ವರ್ಷದಲ್ಲಿ ಇಲ್ಲಿ ಕಲಿತ ವಿದ್ಯಾರ್ಥಿಗಳು ನೆಟ್ಟ ಮಾವು, ಹಲಸು, ತೆಂಗಿನ ಮರಗಳು ಇಂದು ಫಲ ನೀಡುತ್ತಿರುವುದಲ್ಲದೆ, ಶಾಲೆಯ ಅಂದವನ್ನು ಸಹ ಹೆಚ್ಚಿಸಿವೆ. ಶಾಲೆಯಲ್ಲಿ ಜೇನುಸಾಕಾಣಿಕೆ, ಗೆಡ್ಡೆ ಗೆಣಸು ಹಾಗೂ ತೋಟಗಾರಿಕಾ ಬೆಳೆಗಳನ್ನ ಸಹ ಬೆಳೆಯಲಾಗುತ್ತಿದೆ. ಇಲ್ಲಿ ಮಕ್ಕಳೇ ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಾರೆ. ಜೊತೆಗೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಆರೈಕೆ ಹೇಗೆ ಮಾಡಬೇಕು ಅನ್ನೋದನ್ನ ತೋರಿಸಿಕೊಡುತ್ತಾರೆ.

ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ

ಕಳೆದ 14 ವರ್ಷಗಳ ಹಿಂದೆ ಈ ಶಾಲೆಗೆ ಶಿಕ್ಷಕರಾಗಿ ಆಗಮಿಸಿದ್ದ ಲೀಲಾದರ್ ಮೊಗೇರ್ ಅನ್ನೋರು ಮಕ್ಕಳಿಗೆ ಕೃಷಿ ಬಗ್ಗೆ ಪಾಠ ಮಾಡುವ ಹಾಗೂ ಶಾಲೆಯಲ್ಲಿ ಮಕ್ಕಳಿಂದಲೇ ತೋಟ ನಿರ್ಮಿಸುವ ಕಾರ್ಯವನ್ನು ಮೊದಲು ಪ್ರಾರಂಭಿಸಿದ್ದರು. ಅವರು ವರ್ಗಾವಣೆಯಾಗಿ 3 ವರ್ಷಗಳಾದರೂ ಇದುವರೆಗೂ ಯಾವುದೇ ಖಾಯಂ ಶಿಕ್ಷಕರನ್ನ ಈ ಶಾಲೆಗೆ ನೇಮಿಸಿಲ್ಲ. ಓರ್ವ ಅತಿಥಿ ಶಿಕ್ಷಕರಿಂದ ಮಾತ್ರ ಸದ್ಯ ಶಾಲೆ ನಡೆಯುತ್ತಿದೆ.

ಜೊತೆಗೆ ಪೋಷಕರೂ ಸಹ ಸಾಕಷ್ಟು ಸಹಕಾರ ನೀಡುತ್ತಿದ್ದು, ಮಕ್ಕಳಿಗೆ ಕೃಷಿ ಪಾಠ ನಿರಂತರವಾಗಿರುವಂತೆ ನೋಡಿಕೊಳ್ಳಲಾಗುತ್ತಿದೆ. ಮಕ್ಕಳೇ ಬೆಳೆದ ತರಕಾರಿಗಳನ್ನ ಬಿಸಿಯೂಟಕ್ಕೆ ಬಳಸಲಾಗುತ್ತದೆ. ಅಲ್ಲದೇ ಶಾಲಾ ಆವರಣದಲ್ಲಿ ಬೆಳೆದ ಹಣ್ಣುಗಳನ್ನ ಮಕ್ಕಳಿಗೆ ನೀಡಿ, ಉಳಿದದ್ದನ್ನ ಮಾರಾಟ ಮಾಡಿ ಬಂದ ಹಣವನ್ನ ಮಕ್ಕಳಿಗಾಗೇ ಬಳಸಲಾಗುತ್ತಿದೆ. ಈ ಶಾಲೆಗೆ ಹಸಿರು ಶಾಲೆ ಎಂಬ ರಾಜ್ಯ ಪ್ರಶಸ್ತಿ ಸಹ ದೊರೆತಿದ್ದು, ಈ ಮೂಲಕ ಮಾದರಿ ಎನಿಸಿದೆ ಅಂತಾರೆ ಪಾಲಕರು.

Karwar government junior primary school

ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ

ಒಟ್ಟಾರೆ ಶಾಲೆ ಎಂದಾಕ್ಷಣ ಶಿಕ್ಷಕರ ಪಾಠಕ್ಕೆ ಮಾತ್ರ ಸೀಮಿತವಾಗಿರುವ ಇಂದಿನ ದಿನದಲ್ಲಿ ಮಕ್ಕಳಿಗೆ ಕೃಷಿ ಹಾಗೂ ಪರಿಸರದ ಕುರಿತು ಪ್ರಾಯೋಗಿಕವಾಗಿಯೇ ಜ್ಞಾನ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *