ಸಿದ್ದಾಪುರ: ತಾಲೂಕಿನ ಹೆರವಳ್ಳಿಯ ಸ್ನೇಹ ಜೀವಿ, ಮಾಜಿ ಮುಖ್ಯ ಮಂತ್ರಿ ಬಂಗಾರಪ್ಪನವರ ಕಟ್ಟಾ ಅಭಿಮಾನಿ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಎಲ್ಲರ ಪ್ರೀತಿಯ ವಿಟಿಗೌಡ ಎಂದೇ ಪ್ರಸಿದ್ಧರಾಗಿದ್ದ ವೆಂಕಟೇಶ ತಿಮ್ಮಾ ಗೌಡ (75) ರವಿವಾರ ನಿಧನರಾದರು.
ಅವರು ಹೆರವಳ್ಳಿಯ ಶ್ರೀರಾಮ ಭಜನಾ ಮಂಡಳಿಯ ಸಂಸ್ಥಾಪಕ ಅಧ್ಯಕ್ಷರಾಗಿ ಗ್ರಾಮದಲ್ಲಿ ರಾಮ ಭಜನೆಗಳಿಗೆ ಪ್ರೋತ್ಸಾಹಿಸಿದ್ದರು. ಗ್ರಾಮ ಪಂಚಾಯತಿ ಸದಸ್ಯರಾಗಿ, ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಎಲ್ಲಾ ವಯೋಮಾನದವರಲ್ಲೂ ಅವರಂತೆಯೇ ಬೆರೆಯುತ್ತಾ ಎಲ್ಲರ ಪ್ರೀತಿ ಗಳಿಸಿದ್ದರು. ಅವರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧುಗಳು, ಸ್ನೇಹಿತರನ್ನು ಅಗಲಿದ್ದಾರೆ.