ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ : ರಾಕಿಂಗ್ ಸ್ಟಾರ್ ಯಶ್‌ರ ಯಶೋ ಮಾರ್ಗದಿಂದ ಪುನಶ್ಚೇತನ

Thumbnail image

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ದಾರ ಕಾರ್ಯಕ್ಕೆ ಕೈ ಹಾಕಲಾಗಿತ್ತು. ಸರಸ್ಸುವಿನಲ್ಲಿ ಗಿಡ-ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ದಾರ ಮಾಡಲಾಗಿದೆ.

ಶಿವಮೊಗ್ಗ : ಪಾಳು ಬಿದ್ದು ಸುಸೈಡ್ ಪಾಯಿಂಟ್ ಆಗಿದ್ದ ಕೆಳದಿ ಅರಸರಿಂದ ನಿರ್ಮಾಣದ ಚಂಪಕ ಸರಸ್ಸುವನ್ನು ನಟ ಯಶ್ ಅವರ ಯಶೋ ಮಾರ್ಗದ ಮೂಲಕ ಜೀರ್ಣೋದ್ಧಾರ ನಡೆಸಿ ಲೋಕಾರ್ಪಣೆ ಮಾಡಲಾಯಿತು. ಸಾಗರ ತಾಲೂಕು ಆನಂದಪುರಂ ಬಳಿ ಚಂಪಕ ಸರಸ್ಸು ಕೆರೆಯನ್ನು ಕೆಳದಿಯ ಸೋಮಶೇಖರ ನಾಯ್ಕ ನಿರ್ಮಿಸಿದರು ಎಂದು ಇತಿಹಾಸ ತಿಳಿಸುತ್ತದೆ. ಸಾಮ್ರಾಜ್ಯ ವಿಸ್ತರಣೆಗಾಗಿ ಬಂದಾಗ ಆನಂದಪುರಂ ಬಳಿ ಮಹಿಳೆಗೆ ಮನಸೋತು ಆಕೆಯನ್ನು ಪ್ರೀತಿಸುತ್ತಾನೆ. ಆಕೆಯ‌ ನೆನಪಿಗೆ ಈ ಚಂಪಕ ಸರಸ್ಸು ನಿರ್ಮಿಸಿದರು ಎಂದು ತಿಳಿದು ಬರುತ್ತದೆ.

ಇದು ಚೌಕಾಕಾರದ ಒಂದು ಸುಂದರ ಕೊಳವಾಗಿದೆ. ಕಲ್ಲಿನಿಂದ ನಿರ್ಮಿಸಲಾದ ಇಲ್ಲಿ ಸುಂದರ ಕೆತ್ತನೆಯನ್ನು ಒಳಗೊಂಡಿದೆ. ಚಂಪಕ ಸರಸ್ಸು ಮುಂಭಾಗ ಎರಡು ಆನೆಗಳು ಸ್ವಾಗತ ನೀಡುತ್ತವೆ. ಇದರ ಮಧ್ಯ ಭಾಗದಲ್ಲಿ ಶಿವನ ಲಿಂಗವಿದೆ. ಅಲ್ಲಿಗೆ ಸಾಗಲು ಕಲ್ಲಿನ ದಾರಿ ಇದೆ. ಅತ್ಯಂತ ಸುಂದರವಾದ ಚಂಪಕ ಸರಸ್ಸು ಆಡಳಿತ ನಡೆಸುವವರ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು.

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದರು. ಸರಸ್ಸುವಿನಲ್ಲಿ ಗಿಡ ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ಧಾರ ಮಾಡಲಾಗಿದೆ. ಈ ಚಂಪಕ ಸರಸ್ಸುವನ್ನು ಇಂದು ಜಲತಜ್ಞರಾದ ಶಿವಾನಂದ ಕಳವೆ ಅವರು ಉದ್ಘಾಟಿಸಿದರು. ಸರಸ್ಸು ಆವರಣದಲ್ಲಿ ಕೆಳದಿ ಅರಸ ಇತಿಹಾಸಗಾರರಾದ ಗುಂಡಾಜೋಯಿಸ ಅವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ

ಯಶ್ ಅವರ ದೂರದೃಷ್ಟಿ ಹಾಗೂ ಪರಿಸರ, ಜಲಮೂಲಗಳ ರಕ್ಷಣೆಯ ಬಗ್ಗೆ ಆಸಕ್ತಿಯಿಂದ ಚಂಪಕ ಸರಸ್ಸು ಮತ್ತೆ ನಮಗೆ ಲಭ್ಯವಾಗಿದೆ ಎಂದು ಶಿವಾನಂದ ಕಳವೆ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರಕ್ಕೆ ಸಹಕಾರ ನೀಡಿದ ಇತಿಹಾಸ ಪರಂಪರೆ ಉಳಿಸಿ ಸಮಿತಿ ಅವರಿಗೆ ಸನ್ಮಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಯಶ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸತೀಶ್ ಶಿವಣ್ಣ, ಯಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಜೇಂದ್ರ ಗೌಡ, ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ನ ರವಿಕುಮಾರ್ ಬಿ ಡಿ ಇತರರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *