ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ : ರಾಕಿಂಗ್ ಸ್ಟಾರ್ ಯಶ್‌ರ ಯಶೋ ಮಾರ್ಗದಿಂದ ಪುನಶ್ಚೇತನ

Thumbnail image

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ದಾರ ಕಾರ್ಯಕ್ಕೆ ಕೈ ಹಾಕಲಾಗಿತ್ತು. ಸರಸ್ಸುವಿನಲ್ಲಿ ಗಿಡ-ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ದಾರ ಮಾಡಲಾಗಿದೆ.

ಶಿವಮೊಗ್ಗ : ಪಾಳು ಬಿದ್ದು ಸುಸೈಡ್ ಪಾಯಿಂಟ್ ಆಗಿದ್ದ ಕೆಳದಿ ಅರಸರಿಂದ ನಿರ್ಮಾಣದ ಚಂಪಕ ಸರಸ್ಸುವನ್ನು ನಟ ಯಶ್ ಅವರ ಯಶೋ ಮಾರ್ಗದ ಮೂಲಕ ಜೀರ್ಣೋದ್ಧಾರ ನಡೆಸಿ ಲೋಕಾರ್ಪಣೆ ಮಾಡಲಾಯಿತು. ಸಾಗರ ತಾಲೂಕು ಆನಂದಪುರಂ ಬಳಿ ಚಂಪಕ ಸರಸ್ಸು ಕೆರೆಯನ್ನು ಕೆಳದಿಯ ಸೋಮಶೇಖರ ನಾಯ್ಕ ನಿರ್ಮಿಸಿದರು ಎಂದು ಇತಿಹಾಸ ತಿಳಿಸುತ್ತದೆ. ಸಾಮ್ರಾಜ್ಯ ವಿಸ್ತರಣೆಗಾಗಿ ಬಂದಾಗ ಆನಂದಪುರಂ ಬಳಿ ಮಹಿಳೆಗೆ ಮನಸೋತು ಆಕೆಯನ್ನು ಪ್ರೀತಿಸುತ್ತಾನೆ. ಆಕೆಯ‌ ನೆನಪಿಗೆ ಈ ಚಂಪಕ ಸರಸ್ಸು ನಿರ್ಮಿಸಿದರು ಎಂದು ತಿಳಿದು ಬರುತ್ತದೆ.

ಇದು ಚೌಕಾಕಾರದ ಒಂದು ಸುಂದರ ಕೊಳವಾಗಿದೆ. ಕಲ್ಲಿನಿಂದ ನಿರ್ಮಿಸಲಾದ ಇಲ್ಲಿ ಸುಂದರ ಕೆತ್ತನೆಯನ್ನು ಒಳಗೊಂಡಿದೆ. ಚಂಪಕ ಸರಸ್ಸು ಮುಂಭಾಗ ಎರಡು ಆನೆಗಳು ಸ್ವಾಗತ ನೀಡುತ್ತವೆ. ಇದರ ಮಧ್ಯ ಭಾಗದಲ್ಲಿ ಶಿವನ ಲಿಂಗವಿದೆ. ಅಲ್ಲಿಗೆ ಸಾಗಲು ಕಲ್ಲಿನ ದಾರಿ ಇದೆ. ಅತ್ಯಂತ ಸುಂದರವಾದ ಚಂಪಕ ಸರಸ್ಸು ಆಡಳಿತ ನಡೆಸುವವರ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು.

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದರು. ಸರಸ್ಸುವಿನಲ್ಲಿ ಗಿಡ ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ಧಾರ ಮಾಡಲಾಗಿದೆ. ಈ ಚಂಪಕ ಸರಸ್ಸುವನ್ನು ಇಂದು ಜಲತಜ್ಞರಾದ ಶಿವಾನಂದ ಕಳವೆ ಅವರು ಉದ್ಘಾಟಿಸಿದರು. ಸರಸ್ಸು ಆವರಣದಲ್ಲಿ ಕೆಳದಿ ಅರಸ ಇತಿಹಾಸಗಾರರಾದ ಗುಂಡಾಜೋಯಿಸ ಅವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ

ಯಶ್ ಅವರ ದೂರದೃಷ್ಟಿ ಹಾಗೂ ಪರಿಸರ, ಜಲಮೂಲಗಳ ರಕ್ಷಣೆಯ ಬಗ್ಗೆ ಆಸಕ್ತಿಯಿಂದ ಚಂಪಕ ಸರಸ್ಸು ಮತ್ತೆ ನಮಗೆ ಲಭ್ಯವಾಗಿದೆ ಎಂದು ಶಿವಾನಂದ ಕಳವೆ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರಕ್ಕೆ ಸಹಕಾರ ನೀಡಿದ ಇತಿಹಾಸ ಪರಂಪರೆ ಉಳಿಸಿ ಸಮಿತಿ ಅವರಿಗೆ ಸನ್ಮಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಯಶ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸತೀಶ್ ಶಿವಣ್ಣ, ಯಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಜೇಂದ್ರ ಗೌಡ, ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ನ ರವಿಕುಮಾರ್ ಬಿ ಡಿ ಇತರರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *