ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ : ರಾಕಿಂಗ್ ಸ್ಟಾರ್ ಯಶ್‌ರ ಯಶೋ ಮಾರ್ಗದಿಂದ ಪುನಶ್ಚೇತನ

Thumbnail image

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ದಾರ ಕಾರ್ಯಕ್ಕೆ ಕೈ ಹಾಕಲಾಗಿತ್ತು. ಸರಸ್ಸುವಿನಲ್ಲಿ ಗಿಡ-ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ದಾರ ಮಾಡಲಾಗಿದೆ.

ಶಿವಮೊಗ್ಗ : ಪಾಳು ಬಿದ್ದು ಸುಸೈಡ್ ಪಾಯಿಂಟ್ ಆಗಿದ್ದ ಕೆಳದಿ ಅರಸರಿಂದ ನಿರ್ಮಾಣದ ಚಂಪಕ ಸರಸ್ಸುವನ್ನು ನಟ ಯಶ್ ಅವರ ಯಶೋ ಮಾರ್ಗದ ಮೂಲಕ ಜೀರ್ಣೋದ್ಧಾರ ನಡೆಸಿ ಲೋಕಾರ್ಪಣೆ ಮಾಡಲಾಯಿತು. ಸಾಗರ ತಾಲೂಕು ಆನಂದಪುರಂ ಬಳಿ ಚಂಪಕ ಸರಸ್ಸು ಕೆರೆಯನ್ನು ಕೆಳದಿಯ ಸೋಮಶೇಖರ ನಾಯ್ಕ ನಿರ್ಮಿಸಿದರು ಎಂದು ಇತಿಹಾಸ ತಿಳಿಸುತ್ತದೆ. ಸಾಮ್ರಾಜ್ಯ ವಿಸ್ತರಣೆಗಾಗಿ ಬಂದಾಗ ಆನಂದಪುರಂ ಬಳಿ ಮಹಿಳೆಗೆ ಮನಸೋತು ಆಕೆಯನ್ನು ಪ್ರೀತಿಸುತ್ತಾನೆ. ಆಕೆಯ‌ ನೆನಪಿಗೆ ಈ ಚಂಪಕ ಸರಸ್ಸು ನಿರ್ಮಿಸಿದರು ಎಂದು ತಿಳಿದು ಬರುತ್ತದೆ.

ಇದು ಚೌಕಾಕಾರದ ಒಂದು ಸುಂದರ ಕೊಳವಾಗಿದೆ. ಕಲ್ಲಿನಿಂದ ನಿರ್ಮಿಸಲಾದ ಇಲ್ಲಿ ಸುಂದರ ಕೆತ್ತನೆಯನ್ನು ಒಳಗೊಂಡಿದೆ. ಚಂಪಕ ಸರಸ್ಸು ಮುಂಭಾಗ ಎರಡು ಆನೆಗಳು ಸ್ವಾಗತ ನೀಡುತ್ತವೆ. ಇದರ ಮಧ್ಯ ಭಾಗದಲ್ಲಿ ಶಿವನ ಲಿಂಗವಿದೆ. ಅಲ್ಲಿಗೆ ಸಾಗಲು ಕಲ್ಲಿನ ದಾರಿ ಇದೆ. ಅತ್ಯಂತ ಸುಂದರವಾದ ಚಂಪಕ ಸರಸ್ಸು ಆಡಳಿತ ನಡೆಸುವವರ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು.

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದರು. ಸರಸ್ಸುವಿನಲ್ಲಿ ಗಿಡ ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ಧಾರ ಮಾಡಲಾಗಿದೆ. ಈ ಚಂಪಕ ಸರಸ್ಸುವನ್ನು ಇಂದು ಜಲತಜ್ಞರಾದ ಶಿವಾನಂದ ಕಳವೆ ಅವರು ಉದ್ಘಾಟಿಸಿದರು. ಸರಸ್ಸು ಆವರಣದಲ್ಲಿ ಕೆಳದಿ ಅರಸ ಇತಿಹಾಸಗಾರರಾದ ಗುಂಡಾಜೋಯಿಸ ಅವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ

ಯಶ್ ಅವರ ದೂರದೃಷ್ಟಿ ಹಾಗೂ ಪರಿಸರ, ಜಲಮೂಲಗಳ ರಕ್ಷಣೆಯ ಬಗ್ಗೆ ಆಸಕ್ತಿಯಿಂದ ಚಂಪಕ ಸರಸ್ಸು ಮತ್ತೆ ನಮಗೆ ಲಭ್ಯವಾಗಿದೆ ಎಂದು ಶಿವಾನಂದ ಕಳವೆ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರಕ್ಕೆ ಸಹಕಾರ ನೀಡಿದ ಇತಿಹಾಸ ಪರಂಪರೆ ಉಳಿಸಿ ಸಮಿತಿ ಅವರಿಗೆ ಸನ್ಮಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಯಶ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸತೀಶ್ ಶಿವಣ್ಣ, ಯಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಜೇಂದ್ರ ಗೌಡ, ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ನ ರವಿಕುಮಾರ್ ಬಿ ಡಿ ಇತರರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *