Ranji Trophy 2022: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; 9 ಮಂದಿ ಕನಿಷ್ಠ ಅರ್ಧ ಶತಕ!!

2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 

Bengal script a unique record against Jharkhand

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಪರೂಪದ ದಾಖಲೆ ನಿರ್ಮಿಸಿದ ಬಂಗಾಳ, 7 ಅರ್ಧಶತಕ, 2 ಶತಕ!!

ಬೆಂಗಳೂರು: 2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 


ಹೌದು.. 2022ರ ರಣಜಿ ಟ್ರೋಫಿಯ ಮೊದಲ ಕ್ವಾರ್ಟರ್ ಫೈನಲ್ ನಲ್ಲಿ ಜಾರ್ಖಂಡ್ ತಂಡದ ವಿರುದ್ಧದ ಪಂದ್ಯದಲ್ಲಿ ಬಂಗಾಳ ತಂಡ ಈ ದಾಖಲೆ ನಿರ್ಮಿಸಿದ್ದು, ತಮ್ಮ ಒಂಬತ್ತು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸುವುದರೊಂದಿಗೆ ಬಂಗಾಳ ಕ್ರಿಕೆಟ್ ತಂಡವು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಬೆಂಗಳೂರಿನಲ್ಲಿ ನಡೆದ ಜಾರ್ಖಂಡ್ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಂಗಾಳ ತಂಡ 7 ವಿಕೆಟ್ ನಷ್ಟಕ್ಕೆ 773ರನ್ ಗಳಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ತಂಡದ ಈ ಮ್ಯಾರಥಾನ್ ರನ್ ಗಳಿಕೆಯಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ಸೇರಿದ್ದವು. ಅವಕಾಶ ಪಡೆದು ಅಂಗಳಕ್ಕಿಳಿದ ಬಂಗಾಳ ತಂಡದ ಎಲ್ಲಾ ಬ್ಯಾಟರ್‌ಗಳು ಕನಿಷ್ಠ ತಲಾ ಅರ್ಧಶತಕ ಬಾರಿಸಿದರು. ನಂ. 3 ಬ್ಯಾಟರ್ ಸುದೀಪ್ ಘರಾಮಿ (186) ಮತ್ತು ನಂ. 4 ಅನುಸ್ತುಪ್ ಮಜುಂದಾರ್ (117) ಮೂರಂಕಿ ಸ್ಕೋರ್ ತಲುಪಿದರು. 

ಪ್ರಥಮ ದರ್ಜೆ ಇನ್ನಿಂಗ್ಸ್ ನಲ್ಲಿ ಒಂಬತ್ತು ಬ್ಯಾಟ್ಸ್ ಮನ್‌ಗಳು ತಲಾ ಅರ್ಧಶತಕ ಸಿಡಿಸಿದ್ದು ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು. ಈ ಹಿಂದೆ ಮೊದಲ ದರ್ಜೆಯ ಇನ್ನಿಂಗ್ಸ್ ನಲ್ಲಿ ತಂಡವೊಂದರ ಎಂಟು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸಿದ್ದು 1893 ರಲ್ಲಿ ಘಟಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಪೋರ್ಟ್ಸ್‌ಮೌತ್‌ನಲ್ಲಿ ನಡೆದ ಆ ಪಂದ್ಯದಲ್ಲಿ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯಗಳ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡದ ಎಂಟು ಸದಸ್ಯರು ಕನಿಷ್ಠ ತಲಾ ಅರ್ಧಶತಕ ಗಳಿಸಿದ್ದರು.

ಅಂದಹಾಗೆ ಹಾಲಿ ಪಂದ್ಯದಲ್ಲಿ ಬಂಗಾಳ ನೀಡಿರುವ ಬೃಹತ್ ರನ್ ಅನ್ನು ಬೆನ್ನು ಹತ್ತಿರುವ ಜಾರ್ಖಂಡ್ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 139ರನ್ ಗಳಿಸಿ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿ ಸಿಲುಕಿದೆ. 17 ರನ್ ಗಳಿಸಿರುವ ವಿರಾಟ್ ಸಿಂಗ್ ಮತ್ತು ದಿನದಾಟದ ಕೊನೆಯ ಹಂತದಲ್ಲಿ ಕ್ರೀಸ್ ಗೆ ಇಳಿದ ಅನುಕುಲ್ ರಾಯ್ 1 ರನ್ ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *