Ranji Trophy 2022: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; 9 ಮಂದಿ ಕನಿಷ್ಠ ಅರ್ಧ ಶತಕ!!

2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 

Bengal script a unique record against Jharkhand

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಪರೂಪದ ದಾಖಲೆ ನಿರ್ಮಿಸಿದ ಬಂಗಾಳ, 7 ಅರ್ಧಶತಕ, 2 ಶತಕ!!

ಬೆಂಗಳೂರು: 2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 


ಹೌದು.. 2022ರ ರಣಜಿ ಟ್ರೋಫಿಯ ಮೊದಲ ಕ್ವಾರ್ಟರ್ ಫೈನಲ್ ನಲ್ಲಿ ಜಾರ್ಖಂಡ್ ತಂಡದ ವಿರುದ್ಧದ ಪಂದ್ಯದಲ್ಲಿ ಬಂಗಾಳ ತಂಡ ಈ ದಾಖಲೆ ನಿರ್ಮಿಸಿದ್ದು, ತಮ್ಮ ಒಂಬತ್ತು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸುವುದರೊಂದಿಗೆ ಬಂಗಾಳ ಕ್ರಿಕೆಟ್ ತಂಡವು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಬೆಂಗಳೂರಿನಲ್ಲಿ ನಡೆದ ಜಾರ್ಖಂಡ್ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಂಗಾಳ ತಂಡ 7 ವಿಕೆಟ್ ನಷ್ಟಕ್ಕೆ 773ರನ್ ಗಳಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ತಂಡದ ಈ ಮ್ಯಾರಥಾನ್ ರನ್ ಗಳಿಕೆಯಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ಸೇರಿದ್ದವು. ಅವಕಾಶ ಪಡೆದು ಅಂಗಳಕ್ಕಿಳಿದ ಬಂಗಾಳ ತಂಡದ ಎಲ್ಲಾ ಬ್ಯಾಟರ್‌ಗಳು ಕನಿಷ್ಠ ತಲಾ ಅರ್ಧಶತಕ ಬಾರಿಸಿದರು. ನಂ. 3 ಬ್ಯಾಟರ್ ಸುದೀಪ್ ಘರಾಮಿ (186) ಮತ್ತು ನಂ. 4 ಅನುಸ್ತುಪ್ ಮಜುಂದಾರ್ (117) ಮೂರಂಕಿ ಸ್ಕೋರ್ ತಲುಪಿದರು. 

ಪ್ರಥಮ ದರ್ಜೆ ಇನ್ನಿಂಗ್ಸ್ ನಲ್ಲಿ ಒಂಬತ್ತು ಬ್ಯಾಟ್ಸ್ ಮನ್‌ಗಳು ತಲಾ ಅರ್ಧಶತಕ ಸಿಡಿಸಿದ್ದು ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು. ಈ ಹಿಂದೆ ಮೊದಲ ದರ್ಜೆಯ ಇನ್ನಿಂಗ್ಸ್ ನಲ್ಲಿ ತಂಡವೊಂದರ ಎಂಟು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸಿದ್ದು 1893 ರಲ್ಲಿ ಘಟಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಪೋರ್ಟ್ಸ್‌ಮೌತ್‌ನಲ್ಲಿ ನಡೆದ ಆ ಪಂದ್ಯದಲ್ಲಿ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯಗಳ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡದ ಎಂಟು ಸದಸ್ಯರು ಕನಿಷ್ಠ ತಲಾ ಅರ್ಧಶತಕ ಗಳಿಸಿದ್ದರು.

ಅಂದಹಾಗೆ ಹಾಲಿ ಪಂದ್ಯದಲ್ಲಿ ಬಂಗಾಳ ನೀಡಿರುವ ಬೃಹತ್ ರನ್ ಅನ್ನು ಬೆನ್ನು ಹತ್ತಿರುವ ಜಾರ್ಖಂಡ್ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 139ರನ್ ಗಳಿಸಿ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿ ಸಿಲುಕಿದೆ. 17 ರನ್ ಗಳಿಸಿರುವ ವಿರಾಟ್ ಸಿಂಗ್ ಮತ್ತು ದಿನದಾಟದ ಕೊನೆಯ ಹಂತದಲ್ಲಿ ಕ್ರೀಸ್ ಗೆ ಇಳಿದ ಅನುಕುಲ್ ರಾಯ್ 1 ರನ್ ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *