ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,ಪಾಠ ಬಿಟ್ಟುಚುನಾವಣಾ ಪ್ರಚಾರಕ್ಕೆ ಬಂದ ಶಿಕ್ಷಕರು!

ಪಶ್ಚಿಮ ಶಿಕ್ಷಕ ಮತದಾರರ ವಿಧಾನಪರಿಷತ್‌ ಚುನಾವಣೆಯ ನೀತಿಸಂಹಿತೆ ನಡುವೆ ಶಿರಸಿ-ಸಿದ್ದಾಪುರಗಳ ಶಾಲಾ-ಕಾಲೇಜು ಶಿಕ್ಷಕರು ಬಿ.ಜೆ.ಪಿ. ಅಭ್ಯರ್ಥಿ ಬಸವರಾಜ್‌ ಹೊರಟ್ಟಿಯವರ ಚುನಾವಣಾ ಪ್ರಚಾರದ ಸಂವಾದ ಸಭೆಯಲ್ಲಿ ಪಾಲ್ಗೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಪ್ರಕರಣ ನಡೆದಿದೆ.

ಜೂನ್‌೧೩ ರಂದು ನಡೆಯಲಿರುವ ಚುನಾವಣೆಯ ಪ್ರಚಾರದ ಸಭೆಗಳು ಇಂದು ಶಿರಸಿ-ಸಿದ್ದಾಪುರಗಳಲ್ಲಿ ನಡೆದವು. ಮುಂಜಾನೆ ಹತ್ತು ಗಂಟೆಯ ಸಮಯಕ್ಕೆ ಸಿದ್ಧಾಪುರ ಹಾಳದಕಟ್ಟಾ ಶಾಲೆ ಕಾಲೇಜುಗಳಿಗೆ ಭೇಟಿ ನೀಡಿದ ನಿಕಟಪೂರ್ವ ವಿಧಾನಪರಿಷತ್‌ ಸಭಾಪತಿ ಹೊರಟ್ಟಿ ಮತಯಾಚನೆ ಮಾಡಿದರು. ನಂತರ ಸಿದ್ದಾಪುರ ಎಂಜಿಸಿ ಕಾಲೇಜಿನಲ್ಲಿ ನೂರಾರು ಶಿಕ್ಷಕರನ್ನು ಸೇರಿಸಿ ಚುನಾವಣಾ ಪ್ರಚಾರದ ಸಂವಾದ ಸಭೆಯನ್ನು ನಡೆಸಲಾಯಿತು. ಎರಡು ತಾಸುಗಳಿಗೂ ಹೆಚ್ಚು ಸಮಯ ನಡೆದ ಈ ಪ್ರಚಾರ ಸಭೆಗೆ ಸಿದ್ದಾಪುರ ತಾಲೂಕಿನ ಗ್ರಾಮೀಣ ಭಾಗದಿಂದ ಬಂದ ನೂರಾರು ಶಿಕ್ಷಕರು ಸೇರಿ ಸಭೆ, ಸಂವಾದ ನಡೆಸಿದರು. ಇದೇ ರೀತಿ ಶಿರಸಿಯಲ್ಲಿ ಕೂಡಾ ಬಸವರಾಜ್‌ ಹೊರಟ್ಟಿ ಶಿಕ್ಷಕರ ಸಭೆ-ಸಂವಾದ ನಡೆಸಿರುವ ಮಾಹಿತಿ ಬಂದಿದೆ.

ಚುನಾವಣೆ ಪ್ರಚಾರ ಸಭೆಯಲ್ಲಿ ಶಿಕ್ಷಕರು

ಬೆಳಗಾವಿ ಪ್ರಾದೇಶಿಕ ಕಾರ್ಯಾಲಯದಿಂದ ಮತ ಯಾಚನೆಯ ಅನುಮತಿ ಪತ್ರ ಪಡೆದಿದ್ದ ಬಸವರಾಜ್‌ ಹೊರಟ್ಟಿ ಸಭೆ-ಸಂವಾದ ಕಾರ್ಯಕ್ರಮಗಳಿಗೆ ಪರವಾನಗಿ ಪಡೆದಿರಲಿಲ್ಲ. ಈ ಚುನಾವಣಾ ಪ್ರಚಾರ ಸಭೆಯ ಚತ್ರೀಕರಣ ಮಾಡಿದ ತಾಲೂಕಾ ಚುನಾವಣಾತಂಡ ಶಿಕ್ಷಕರು, ಅಭ್ಯರ್ಥಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಕ್ರಮ ಜರುಗಿಸಿದ ಮಾಹಿತಿ ಇಲ್ಲ.

ಇತ್ತೀಚೆಗೆ ಬಿ.ಜೆ.ಪಿ. ಸೇರಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಬಸವರಾಜ್‌ ಹೊರಟ್ಟಿ ಸ್ಥಳಿಯ ಜೆ.ಡಿ.ಎಸ್.‌ ಮುಖಂಡ ಶಶಿಭೂಷಣ ಹೆಗಡೆಯವರ ಕಾಲೇಜಿನ ಆವರಣದಲ್ಲಿ ಪ್ರಚಾರ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಆಕ್ಷೇಪಗಳಿದ್ದು ಬಿ.ಜೆ.ಪಿ. ಅಭ್ಯರ್ಥಿ ಜೆ.ಡಿ.ಎಸ್.‌ ಮುಖಂಡರ ನೇತೃತ್ವದ ಸಂಸ್ಥೆಯಲ್ಲಿ ಸ್ಥಳಾವಕಅಶ ಪಡೆದು ಕಾರ್ಯಕ್ರಮ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಾರೆಂದರೆ ಅದರ ಹಿಂದಿನ ಹೊಂದಾಣಿಕೆ ಏನು? ಎನ್ನುವ ಪ್ರಶ್ನೆ ಎದ್ದಿದೆ.

ಚುನಾವಣೆ ನೀತಿ ಸಂಹಿತೆ ಸಮಯದಲ್ಲಿ ಶಾಲಾ ಅವಧಿಯಲ್ಲಿ ಶಿಕ್ಷಕರು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವಂತಿಲ್ಲ ಆದರೆ ಕೆಲವು ಅನುದಾನಿತ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರು ಹೊರಟ್ಟಯವರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಇಲಾಖೆಯಿಂದ ಶಿಸ್ತು ಕ್ರಮವಾಗುವ ಬಗ್ಗೆ ಮಾಹಿತಿ ಲಭಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *