ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,ಪಾಠ ಬಿಟ್ಟುಚುನಾವಣಾ ಪ್ರಚಾರಕ್ಕೆ ಬಂದ ಶಿಕ್ಷಕರು!

ಪಶ್ಚಿಮ ಶಿಕ್ಷಕ ಮತದಾರರ ವಿಧಾನಪರಿಷತ್‌ ಚುನಾವಣೆಯ ನೀತಿಸಂಹಿತೆ ನಡುವೆ ಶಿರಸಿ-ಸಿದ್ದಾಪುರಗಳ ಶಾಲಾ-ಕಾಲೇಜು ಶಿಕ್ಷಕರು ಬಿ.ಜೆ.ಪಿ. ಅಭ್ಯರ್ಥಿ ಬಸವರಾಜ್‌ ಹೊರಟ್ಟಿಯವರ ಚುನಾವಣಾ ಪ್ರಚಾರದ ಸಂವಾದ ಸಭೆಯಲ್ಲಿ ಪಾಲ್ಗೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಪ್ರಕರಣ ನಡೆದಿದೆ.

ಜೂನ್‌೧೩ ರಂದು ನಡೆಯಲಿರುವ ಚುನಾವಣೆಯ ಪ್ರಚಾರದ ಸಭೆಗಳು ಇಂದು ಶಿರಸಿ-ಸಿದ್ದಾಪುರಗಳಲ್ಲಿ ನಡೆದವು. ಮುಂಜಾನೆ ಹತ್ತು ಗಂಟೆಯ ಸಮಯಕ್ಕೆ ಸಿದ್ಧಾಪುರ ಹಾಳದಕಟ್ಟಾ ಶಾಲೆ ಕಾಲೇಜುಗಳಿಗೆ ಭೇಟಿ ನೀಡಿದ ನಿಕಟಪೂರ್ವ ವಿಧಾನಪರಿಷತ್‌ ಸಭಾಪತಿ ಹೊರಟ್ಟಿ ಮತಯಾಚನೆ ಮಾಡಿದರು. ನಂತರ ಸಿದ್ದಾಪುರ ಎಂಜಿಸಿ ಕಾಲೇಜಿನಲ್ಲಿ ನೂರಾರು ಶಿಕ್ಷಕರನ್ನು ಸೇರಿಸಿ ಚುನಾವಣಾ ಪ್ರಚಾರದ ಸಂವಾದ ಸಭೆಯನ್ನು ನಡೆಸಲಾಯಿತು. ಎರಡು ತಾಸುಗಳಿಗೂ ಹೆಚ್ಚು ಸಮಯ ನಡೆದ ಈ ಪ್ರಚಾರ ಸಭೆಗೆ ಸಿದ್ದಾಪುರ ತಾಲೂಕಿನ ಗ್ರಾಮೀಣ ಭಾಗದಿಂದ ಬಂದ ನೂರಾರು ಶಿಕ್ಷಕರು ಸೇರಿ ಸಭೆ, ಸಂವಾದ ನಡೆಸಿದರು. ಇದೇ ರೀತಿ ಶಿರಸಿಯಲ್ಲಿ ಕೂಡಾ ಬಸವರಾಜ್‌ ಹೊರಟ್ಟಿ ಶಿಕ್ಷಕರ ಸಭೆ-ಸಂವಾದ ನಡೆಸಿರುವ ಮಾಹಿತಿ ಬಂದಿದೆ.

ಚುನಾವಣೆ ಪ್ರಚಾರ ಸಭೆಯಲ್ಲಿ ಶಿಕ್ಷಕರು

ಬೆಳಗಾವಿ ಪ್ರಾದೇಶಿಕ ಕಾರ್ಯಾಲಯದಿಂದ ಮತ ಯಾಚನೆಯ ಅನುಮತಿ ಪತ್ರ ಪಡೆದಿದ್ದ ಬಸವರಾಜ್‌ ಹೊರಟ್ಟಿ ಸಭೆ-ಸಂವಾದ ಕಾರ್ಯಕ್ರಮಗಳಿಗೆ ಪರವಾನಗಿ ಪಡೆದಿರಲಿಲ್ಲ. ಈ ಚುನಾವಣಾ ಪ್ರಚಾರ ಸಭೆಯ ಚತ್ರೀಕರಣ ಮಾಡಿದ ತಾಲೂಕಾ ಚುನಾವಣಾತಂಡ ಶಿಕ್ಷಕರು, ಅಭ್ಯರ್ಥಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಕ್ರಮ ಜರುಗಿಸಿದ ಮಾಹಿತಿ ಇಲ್ಲ.

ಇತ್ತೀಚೆಗೆ ಬಿ.ಜೆ.ಪಿ. ಸೇರಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಬಸವರಾಜ್‌ ಹೊರಟ್ಟಿ ಸ್ಥಳಿಯ ಜೆ.ಡಿ.ಎಸ್.‌ ಮುಖಂಡ ಶಶಿಭೂಷಣ ಹೆಗಡೆಯವರ ಕಾಲೇಜಿನ ಆವರಣದಲ್ಲಿ ಪ್ರಚಾರ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಆಕ್ಷೇಪಗಳಿದ್ದು ಬಿ.ಜೆ.ಪಿ. ಅಭ್ಯರ್ಥಿ ಜೆ.ಡಿ.ಎಸ್.‌ ಮುಖಂಡರ ನೇತೃತ್ವದ ಸಂಸ್ಥೆಯಲ್ಲಿ ಸ್ಥಳಾವಕಅಶ ಪಡೆದು ಕಾರ್ಯಕ್ರಮ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಾರೆಂದರೆ ಅದರ ಹಿಂದಿನ ಹೊಂದಾಣಿಕೆ ಏನು? ಎನ್ನುವ ಪ್ರಶ್ನೆ ಎದ್ದಿದೆ.

ಚುನಾವಣೆ ನೀತಿ ಸಂಹಿತೆ ಸಮಯದಲ್ಲಿ ಶಾಲಾ ಅವಧಿಯಲ್ಲಿ ಶಿಕ್ಷಕರು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವಂತಿಲ್ಲ ಆದರೆ ಕೆಲವು ಅನುದಾನಿತ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರು ಹೊರಟ್ಟಯವರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಇಲಾಖೆಯಿಂದ ಶಿಸ್ತು ಕ್ರಮವಾಗುವ ಬಗ್ಗೆ ಮಾಹಿತಿ ಲಭಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *