ಪಶ್ಚಿಮ ಶಿಕ್ಷಕರ ಕ್ಷೇತ್ರ-ಬಸವರಾಜ ಹೊರಟ್ಟಿ; ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಗೆಲುವು

Thumbnail image

ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟಗೊಂಡಿದೆ.

ಬೆಂಗಳೂರು: ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ ಎಂದು ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿದೆ. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದು, ಅದೇ ರೀತಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಕಾಶ್ ಹುಕ್ಕೇರಿ ಅವರು ಗೆಲುವು ಸಾಧಿಸಿದ್ದಾರೆ ಎಂದು ಆಯೋಗ ಘೋಷಿಸಿದೆ.

ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರದ ವಿವರ: ಕರ್ನಾಟಕ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಕಾಶ ಹುಕ್ಕೇರಿ ಅವರು 11,460 ಪ್ರಥಮ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ‌ ಅಭ್ಯರ್ಥಿ ಅರುಣ ಶಹಾಪೂರ ಅವರು 6,405 ಮತಗಳನ್ನು ಪಡೆದುಕೊಂಡಿದ್ದಾರೆ. ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಒಟ್ಟು 21,402 ಮತಗಳು ಚಲಾವಣೆಯಾಗಿದ್ದು, ಅದರಲ್ಲಿ 1,270 ಮತಗಳು ಅಸಿಂಧುವಾಗಿವೆ ಮತ್ತು 20,132 ಮತಗಳು ಸಿಂಧುವಾಗಿತ್ತು. ಅಭ್ಯರ್ಥಿ ಗೆಲುವಿಗೆ 10,067 ಮತಗಳ ಕೋಟಾ ನಿಗದಿಪಡಿಸಲಾಗಿತ್ತು.

ಅಭ್ಯರ್ಥಿಗಳು ಪಡೆದ ಮತಗಳ ವಿವರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪ್ರಕಾಶ ಹುಕ್ಕೇರಿಯವರು 11460 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅರುಣ ಶಹಾಪೂರ ಅವರು 6405 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಲೋಣಿ 544 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ಅಪ್ಪಾಸಾಹೇಬ ಕುರಣೆ- 9, ಚಂದ್ರಶೇಖರ ಗುಡಸೆ- 101, ದೇಸಾಯಿ ಜಯಪಾಲ ರಾಜಾರಾಮ- 10, ಬನ್ನೂರು ಎನ್. ಬಿ -1009, ಬಸಪ್ಪ ಮಣಿಗಾರ -39, ಶ್ರೀಕಾಂತ ಪಾಟೀಲ- 19, ಶ್ರೀನಿವಾಸಗೌಡ ಗೌಡರ- 524, ಶ್ರೇನಿಕ್ ಅಣ್ಣಾಸಾಹೇಬ್ ಜಂಗಟೆ -8 ಹಾಗೂ ಚಿಕ್ಕನಾರಗುಂದ ಸಂಗಮೇಶ- 4 ಮತಗಳನ್ನು ಪಡೆದಿದ್ದಾರೆ ಎಂದು ಹೇಳಿದೆ.

ಕರ್ನಾಟಕ ಪಶ್ಚಿಮ‌ ಶಿಕ್ಷಕರ ಮತಕ್ಷೇತ್ರದ ವಿವರ: ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ಅವರು 9266 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಸವರಾಜ ಗುರಿಕಾರ ಅವರು 4597 ಮತಗಳನ್ನು ಪಡೆದುಕೊಂಡರು. ಒಟ್ಟು 15,583 ಮತಗಳು‌ ಚಲಾವಣೆಗೊಂಡಿದ್ದು, ಅದರಲ್ಲಿ 1,223 ಮತಗಳು ಅಸಿಂಧುವಾಗಿವೆ ಮತ್ತು 14,360 ಸಿಂಧು ಮತಗಳಿದ್ದವು. ಗೆಲುವಿಗೆ 7,181 ಮತಗಳ ಕೋಟಾವನ್ನು ನಿಗದಿಪಡಿಸಲಾಗಿತ್ತು.

ಅಭ್ಯರ್ಥಿಗಳು ಪಡೆದ ಮತಗಳ ವಿವರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಹೊರಟ್ಟಿ 9,266 ಮತಗಳು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಸವರಾಜ ಗುರಿಕಾರ 4,597, ಶ್ರೀಶೈಲ ಗಡದನ್ನಿ-273, ಎಂ. ಪಿ ಕರಬಸಪ್ಪ -60, ಕೃಷ್ಣವಾಣಿ- 58, ಪ್ರೊ.ಎಫ್.ವಿ ಕಲ್ಲನ ಗೌಡರ- 27 ಹಾಗೂ ವೆಂಕನಗೌಡ ರಂಗನಗೌಡ ಗೋವಿಂದಗೌಡರ ಅವರು 79 ಮತಗಳನ್ನು ಪಡೆದಿದ್ದಾರೆ.

ಮೂರೂ ಮತಕ್ಷೇತ್ರಗಳ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ನೇತೃತ್ವದಲ್ಲಿ ಬೆಳಗಾವಿ ವಿಭಾಗದ ಏಳೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಸೇರಿದಂತೆ ನೂರಾರು ಅಧಿಕಾರಿಗಳು ಮತ್ತು ಸಿಬ್ಬಂದಿ ಮತ ಎಣಿಕೆ ಪ್ರಕ್ರಿಯಲ್ಲಿ ಭಾಗವಹಿಸಿದ್ದರು. ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಪೊಲೀಸ್ ಬಂದೋಬಸ್ತ್ ನೇತೃತ್ವ ವಹಿಸಿದ್ದರು. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ವಿಜೇತ ಅಭ್ಯರ್ಥಿಯಾಗಿರುವ ಬಿಜೆಪಿಯ ಬಸವರಾಜ ಹೊರಟ್ಟಿ ಅವರಿಗೆ ಚುನಾವಣಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಮಾಣಪತ್ರವನ್ನು ವಿತರಿಸಿದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *