ಪ್ರಗತಿಪರರದ್ದು ಭ್ರಮೆ,ಪ್ರತಿಭಟನೆಗೆ ಅರ್ಥವಿಲ್ಲ ಎಂದು ಚಾಣಕ್ಯರನ್ನು ಉಲ್ಲೇಖಿಸಿ ಹೊಸ ವಿವಾದ ಹುಟ್ಟುಹಾಕಿದ ಪೂಜಾರಿ

ಪಠ್ಯ ವಾಪಸ್‌,ಪ್ರಶಸ್ತಿ ವಾಪಸ್‌ ಇವುಗಳೆಲ್ಲ ಅರ್ಥವಿಲ್ಲದ ಪ್ರತಿಭಟನೆಗಳು ಎಂದು ಲೇವಡಿಮಾಡಿರುವ ರಾಜ್ಯ ಸಮಾಜಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಪಠ್ಯಪರಿಷ್ಕರಣೆಯ ವಿವಾದ ಮುಗಿದ ವಿಷಯವಾಗಿದ್ದು ಶಾಲೆಗಳಿಗೆ ಪಠ್ಯಗಳನ್ನು ವಿತರಿಸುತಿದ್ದೇವೆ. ಈ ಬಗ್ಗೆ ಪ್ರತಿಭಟನೆಗಳಿಗೆ ಅರ್ಥವಿಲ್ಲ ಅಂಥ ಪ್ರತಿಭಟನೆಗಳನ್ನು ಲೆಕ್ಕಿಸುವುದೂ ಇಲ್ಲ ಎಂದು ಕಡಕ್‌ ಆಗಿ ಪ್ರತಿಕ್ರೀಯಿಸಿದ್ದಾರೆ

.
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಮಾತನಾಡಿದ ಅವರು ಗಡ್ಡ ಬಿಟ್ಟು ಚೀಲ ಹಾಕಿಕೊಂಡು ಸಮಾಜ ಬದಲಾಯಿಸುತ್ತೇವೆ ಎನ್ನುವ ಪ್ರಗತಿಪರರ ಭ್ರಮೆ ಸತ್ಯವಾಗುವುದಿಲ್ಲ. ಪ್ರಗತಿಪರರು ಸರ್ಕಾರ ವ್ಯವಸ್ಥೆಯನ್ನು ವಿರೋಧ ಮಾಡಿದರೆ ರಾಜ,ಮಂತ್ರಿ,ವ್ಯವಸ್ಥೆ ಸರಿದಾರಿಯಲ್ಲಿದೆ ಎಂದು ತಿಳಿಯಬೇಕು ಎಂದು ಪ್ರಗತಿಪರರನ್ನು ಕಾಲೆಳೆದಿರುವ ಪೂಜಾರಿ ಚಾಣಕ್ಯರ ಮಾತನ್ನು ಉಲ್ಲೇಖಿಸಿದ್ದಾರೆ. ಇದರಿಂದ ಪಠ್ಯಪರಿಷ್ಕರಣೆಯ ವಿವಾದದ ಹಿನ್ನೆಲೆಯಲ್ಲಿ ಪ್ರಗತಿಪರರ ಬಗ್ಗೆ ಲೇವಡಿ ಮಾಡಿ ಹೊಸ ವಿವಾದ ಹುಟ್ಟುಹಾಕಿದಂತಾಗಿದೆ.
ಪಠ್ಯಪರಿಷ್ಕರಣೆ,ಕಾಂಗ್ರೆಸ್‌ ನಾಯಕರ ಮೇಲಿನ ತನಿಖೆ ಈ ವಿಚಾರಗಳಲ್ಲಿ ರಾಜಕೀಯ ನಡೆಯುತ್ತಿದೆ ಎಂದಿರುವ ಸಚಿವರು ಇವನ್ನೆಲ್ಲಾ ಲೆಕ್ಕಿಸದೆ ಮೋದಿ ನೇತೃತ್ವದಲ್ಲಿ ಸರ್ಕಾರ ಸುಸ್ಥಿರವಾಗಿದೆ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *