ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ full details-01

ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ – ವಯಸ್ಸಿನ ಮಿತಿ ಹೆಚ್ಚಳಕ್ಕೆ ಮುಂದಾದ ಕೇಂದ್ರ

ಅಗ್ನಿಪಥ ಬಹಳ ಉತ್ತಮ ಯೋಜನೆ, ಇದರಡಿ ತರಬೇತಿ ಪಡೆದವರನ್ನು ಪೊಲೀಸ್ ಇಲಾಖೆಗೂ ನೇಮಿಸಿಕೊಳ್ಳಬಹುದು: ಆರಗ ಜ್ಞಾನೇಂದ್ರ

ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಎಸಿಬಿ ಕಡೆಯಿಂದ ಆಗಾಗ ಆಗುತ್ತಿರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

Aaraga Jnanedra

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಎಸಿಬಿ ಕಡೆಯಿಂದ ಆಗಾಗ ಆಗುತ್ತಿರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ಬಗ್ಗೆ ಕೇಳಿಬರುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದರು.

ಭವಿಷ್ಯದಲ್ಲಿ ಏನೋ ಆಗುತ್ತದೆ ಎಂದು ಈಗ ಬೆಂಕಿ ಹಚ್ಚುವ ಕೆಲಸ ಯಾರೂ ಮಾಡಬಾರದು. ಅಗ್ನಿಪಥ ಕೇಂದ್ರ ಸರ್ಕಾರದ ಉತ್ತಮವಾದ ಯೋಜನೆ. ಸಮಾಜದಲ್ಲಿ ಪರಿವರ್ತನೆಯಾಗಲು ಬಿಡುವುದಿಲ್ಲ ಎಂದು ಹೇಳುವ ಕೆಲವು ವರ್ಗಗಳಿವೆ. ಅಂತವರು ಇದರ ಬಗ್ಗೆ ಪ್ರತಿಭಟನೆ, ಅಪಪ್ರಚಾರ ಮಾಡುತ್ತಿದ್ದಾರೆ. ಈ ಯೋಜನೆ ಇನ್ನೂ ಜಾರಿಯಾಗಿಲ್ಲ, ಜಾರಿ ಮಾಡುತ್ತೇವೆ ಎಂದು ಹೇಳಿದಾಗಲೇ ಇಷ್ಟೆಲ್ಲಾ ಪ್ರತಿಭಟನೆ, ವಿರೋಧ ಏಕೆ ಎಂದು ಪ್ರಶ್ನಿಸಿದರು.

ಅಗ್ನಿಪಥ ತುಂಬಾ ಉತ್ತಮ ಯೋಜನೆ, ಇಸ್ರೇಲ್ ನಂತಹ ದೇಶಗಳಲ್ಲಿ ಕಡ್ಡಾಯವಾಗಿ ಮಿಲಿಟರಿ ತರಬೇತಿ ಪಡೆದಿರಬೇಕೆಂಬ ನಿಯಮವಿದೆ. ನಮ್ಮ ದೇಶದಲ್ಲಿ ಅಗ್ನಿಪಥ ಯೋಜನೆಯಡಿ ನಾಲ್ಕು ವರ್ಷ ತರಬೇತಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ವೇತನ, ನಾಲ್ಕನೇ ವರ್ಷದಲ್ಲಿ ನಿವೃತ್ತಿಯಾದ ನಂತರ ಪ್ರೋತ್ಸಾಹಕ ಧನ, ಶೇಕಡಾ 25ರಷ್ಟನ್ನು ಮಿಲಿಟರಿಗೆ ತೆಗೆದುಕೊಳ್ಳಲಾಗುತ್ತದೆ. ಅಲ್ಲದೆ ನಾಲ್ಕು ವರ್ಷ ತರಬೇತಿ ಪಡೆದವರನ್ನು ಪೊಲೀಸ್ ಇಲಾಖೆಗೂ ಸೇರಿಸಲು ಅನುಕೂಲವಾಗುತ್ತದೆ, ಲಕ್ಷಾಂತರ ಯುವಕರಿಗೆ ಉದ್ಯೋಗ ದೊರಕುತ್ತದೆ ಎಂದರು. (kpc)

ಕೇಂದ್ರ ಸರ್ಕಾರ ಹೊಸದಾಗಿ ಘೋಷಿಸಿದ ಸೇನಾ ನೇಮಕಾತಿ ಕುರಿತ ಅಗ್ನಿಪಥ್ ಯೋಜನೆಗೆ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಉದ್ಯೋಗಾಕಾಂಕ್ಷಿ ಯುವಜನರು ಸಿಡಿದೆದ್ದಿದ್ದು 7 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತಡೆಯಲು ಪೊಲೀಸರು ಲಾಠೀ ಚಾರ್ಜ್ ಮಾಡಿದ್ದರಿಂದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಇದುವರೆಗೂ ದೇಶಾದ್ಯಂತ ಒಂದು ಸಾವು ಸಂಭವಿಸಿದ್ದು, 8 ಜನರ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತೆಲಂಗಾಣಕ್ಕೂ ಪ್ರತಿಭಟನೆಯ ಕಿಚ್ಚು ವ್ಯಾಪಿಸಿದ್ದು ಸಿಕಂದರಾಬಾದ್‌ ರೈಲ್ವೇ ನಿಲ್ದಾಣದಲ್ಲಿ ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಒಬ್ಬ ಯುವಕ ಸಾವನಪ್ಪಿದ್ದಾನೆ. ತದನಂತರ ಸಿಟ್ಟಿಗೆದ್ದ ಯುವಜನರು ರೈಲು ಬೋಗಿಗಳಿಗೆ ಕಲ್ಲು ತೂರಿ, ಸಾರ್ವಜನಿಕ ಬಸ್‌ಗಳನ್ನು ಜಖಂಗೊಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಬಿಹಾರ-ಉತ್ತರ ಪ್ರದೇಶದಲ್ಲಿ ಮೂರನೇ ದಿನವೂ ಪ್ರತಿಭಟನೆಗಳು ಹೆಚ್ಚಾಗುತ್ತಿವೆ. ರಸ್ತೆ ತಡೆ- ರೈಲು ತಡೆಗಳು ಸಾಮಾನ್ಯವಾಗಿವೆ. ಉತ್ತರ ಬಿಹಾರದ ಚಂಪಾರಣ್ ಜಿಲ್ಲೆಯಲ್ಲಿ ಉಪ ಮುಖ್ಯಮಂತ್ರಿ ರೇಣು ದೇವಿ ಮೇಲೆ ಪ್ರತಿಭಾನಾಕಾ ರರು ದಾಳಿ ನಡೆಸಿದ್ದಾರೆ.

ಪ್ರತಿಭಟನೆಗಳು ತೀವ್ರವಾಗುತ್ತಿದ್ದಂತ ಕೇಂದ್ರ ಸರ್ಕಾರ ನೇಮಕಾತಿಗೆ ಇದ್ದ ವಯಸ್ಸಿನ ಮಿತಿಯನ್ನು ಈ ವರ್ಷಕ್ಕೆ ಮಾತ್ರ ಅನ್ವಯವಾಗುವಂತೆ 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿದೆ. ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕರೋನಾ ಸಾಂಕ್ರಾಮಿಕದಿಂದಾಗಿ ಸೇನೆಯಲ್ಲಿನ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ.
‘ಅಗ್ನಿಪಥ್ ಯೋಜನೆ’ಯಲ್ಲಿ ಆ ಯುವಕರ ಕಾಳಜಿಗಾಗಿ ಮೊದಲ ವರ್ಷದಲ್ಲಿ ಎರಡು ವರ್ಷಗಳ ರಿಯಾಯಿತಿ ನೀಡುವ ಮೂಲಕ ವಯೋಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸುವ ಸೂಕ್ಷ್ಮ ನಿರ್ಧಾರವನ್ನು ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. (nAnoo gouri)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *