ಪೊಲೀಸ್‌ ಹವಾಲ್ಧಾರ ಜನಸ್ನೇಹಿ ಪೊಲೀಸಿಂಗ್‌ ಗೆ ಕಂಡುಕೊಂಡ ದಾನದ ಮಾರ್ಗಕ್ಕೆ ಜನಮೆಚ್ಚುಗೆ


ಮನಸ್ಸಿದ್ದರೆ ಕರ್ತವ್ಯದೊಂದಿಗೆ ಜನಸೇವೆ ಮಾಡುತ್ತಾ ಜನಸ್ನೇಹಿ ಪೊಲೀಸ್‌ ಆಗಬಹುದೆನ್ನುವುದನ್ನು ಸಾಬೀತು ಮಾಡಿದ ಹವಾಲ್ಧಾರ್ ರಾಘವೇಂದ್ರ ನಾಯ್ಕ

ಜನಸ್ನೇಹಿ  ಬೀಟ್‌, ಜನಸ್ನೇಹಿ ಪೊಲೀಸ್‌ ಎನ್ನುವುದೊಂದು ಗುರಿ ಮತ್ತು ಧ್ಯೇಯ. ಪೊಲೀಸ್‌ ಇಲಾಖೆ ಇಂಥ ಘೋಷಣೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕ ಸಂಪರ್ಕವನ್ನು ಸಾಧಿಸುವ ಗುರಿ ಹೊಂದಿದೆ. ಆದರೆ ಪೊಲೀಸ್‌ ಎಂದರೆ ಈಗಲೂ ಜನಮಾನಸದಲ್ಲಿ ಭಯ ಉಳಿದುಕೊಂಡಿದೆ. ಪೊಲೀಸ್‌ ಎಂದರೆ ಭಯ ಅಲ್ಲ ಭರವಸೆ ಎನ್ನುವ ಕಲ್ಪನೆಯನ್ನು ಸಾಕಾರಮಾಡಲು ಪೊಲೀಸರು ಶ್ರಮಿಸುತಿದ್ದಾರೆ.


ಇಲ್ಲೊಂದು ಜನಪರ ಪೊಲೀಸಿಂಗ್‌ ನ ಉದಾಹರಣೆ ‌ನಮ್ಮ ಮುಂದೇ ಇದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ಹವಾಲ್ಧಾರ್‌ ಆಗಿ ಕೆಲಸ ಮಾಡುತ್ತಿರುವ ರಾಘವೇಂದ್ರ ನಾಯ್ಕ ಪ್ರತಿವರ್ಷ ತಮ್ಮ ಬೀಟ್‌ ನಲ್ಲಿ ಒಂದೆರಡು ಕಾರ್ಯಕ್ರಮ ಮಾಡಿ ಅಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುತಿದ್ದಾರೆ. ರಾಘವೇಂದ್ರ ನಾಯ್ಕ ತಮ್ಮ ಬೀಟ್‌ ನ ಒಂದೆರಡು ಶಾಲೆಗಳಿಗೆ ಪ್ರತಿವರ್ಷ ನೋಟ್ ಪುಸ್ತಕ, ಲೇಖನಿ ವಿತರಿಸುತ್ತಾರೆ. ಮೊದಮೊದಲು ತಾವೊಬ್ಬರೇ ಮಾಡುತಿದ್ದ ಈ ಪೊಲೀಸ್‌ ಜನಸ್ನೇಹಿ ಕೆಲಸಕ್ಕೆ ಈಗ ಅವರ ಸಮಾನ ಮನಸ್ಕ ಗೆಳೆಯರ ಸಹಕಾರ ಸಿಗುತ್ತಿದೆ.

ಮಕ್ಕಳಿಗೆ ಪೊಲೀಸರ ಕೆಲಸದ ಅರಿವು ಮೂಡಬೇಕು.ಶಾಲೆಯಲ್ಲಿ ಜನಸ್ನೇಹಿ ಪೊಲೀಸ್‌ ಕಾರ್ಯಕ್ರಮ ಮಾಡುವ ಮೂಲಕ ಮಕ್ಕಳೊಂದಿಗೆ ಪಾಲಕರು ಸೇರಬೇಕು.  ಮಕ್ಕಳ ಮೂಲಕ ಹಿರಿಯರು ಸಾರ್ವಜನಿಕರ ಸಂಪರ್ಕ ಹಿತಕಾರಿಯಾಗಿರಬೇಕು ಇದರಿಂದ ಪೊಲೀಸ್‌ ಕೆಲಸವೂ ಸರಳವಾಗುತ್ತದೆ. ಪೊಲೀಸರು ಮತ್ತು ಸಾರ್ವಜನಿಕರ ಸಂಪರ್ಕ ಸುಗಮವಾಗುತ್ತದೆ ಎನ್ನುವ ರಾಘವೇಂದ್ರ ನಾಯ್ಕ ತಮ್ಮ ಪೊಲೀಸ್‌ ಕೆಲಸದ ಜೊತೆಗೆ ಅಸಹಾಯಕ ಮಕ್ಕಳಿಗೆ ನೆರವೂ ನೀಡುತಿದ್ದಾರೆ.


ವಿದ್ಯಾರ್ಥಿಗಳಿಗೆ ಎಲ್ಲರಿಗೂ ಸಮನಾದ ಅನುಕೂಲ ಸೌಲಭ್ಯಗಳಿರುವುದಿಲ್ಲ ಆ ಕೊರತೆ ನೀಗಿಸುವ ಹಿನ್ನೆಲೆಯಲ್ಲಿ ತಮ್ಮ ಪುಟ್ಟ ಪ್ರಯತ್ನ ಎನ್ನುವ ಈ ಪೊಲೀಸ್‌ ತಮ್ಮ ಶಾಲಾದಿನಗಳಲ್ಲಿತಾವು ನೋಡಿದ ಅನುಭವಿಸಿದ ಕಷ್ಟಗಳ ಹಿನ್ನೆಲೆಯಲ್ಲಿ ಮಕ್ಕಳಿಗೆ ನೋಟ್‌ ಬುಕ್‌ ಪೆನ್ನು ವಿತರಿಸುವ ಮೂಲಕ ಈ ಕೆಲಸ ಇತರರಿಗೂ ಪ್ರೇರಣೆಯಾದರೆ ಯಾವ ವಿದ್ಯಾರ್ಥಿಗೂ ತನ್ನ ಕೊರತೆ, ಅಸಹಾಯಕತೆ ಎನಿಸುವುದಿಲ್ಲ ಎನ್ನುತ್ತಾರೆ ರಾಘವೇಂದ್ರ ನಾಯ್ಕ.

ಸಿದ್ದಾಪುರ ಪೊಲೀಸ್‌ ಠಾಣೆಯ ವ್ಯಾಪ್ತಿಯ ತಮ್ಮ ಕೆಲವು ಬೀಟ್‌ ಗಳಲ್ಲಿ ಹಲವು ಶಾಲೆಗಳ ವಿದ್ಯಾರ್ಥಿಗಳಿಗೆ ಪಟ್ಟಿ ಪೆನ್‌ ವಿತರಿಸಿ ಶಾಲೆಗಳಲ್ಲೇ ಜನಸ್ನೇಹಿ ಪೊಲೀಸ್‌ ಬೀಟ್‌ ಕಾರ್ಯಕ್ರಮ ಮಾಡಿದ್ದಾರೆ. ಪೊಲೀಸ್‌ ಹುದ್ದೆಯಿಂದ ಹವಾಲ್ಧಾರರಾಗಿ ಪದೋನ್ನತಿ ಹೊಂದಿರುವ  ರಾ ಘವೇಂದ್ರ ನಾಯ್ಕರ ಈ ಜನಸ್ನೇಹಿ ಪೊಲೀಸಿಂಗ್‌ ಗೆ ಅಪಾರ ಜನಬೆಂಬಲವೂ ವ್ಯಕ್ತವಾಗಿದೆ. ಪೊಲೀಸ್‌ ಪೇದೆಯೊಬ್ಬರ ಈ ಸಮಾಜಮುಖಿ ಮನಸ್ಥಿತಿ, ಜನಪರ ಕಾಳಜಿಗೆ ಅವರ ಹಿರಿಯ ಅಧಿಕಾರಿಗಳ ಬೆಂಬಲವೂ ದೊರೆಯುತಿದ್ದು ಇಲಾಖೆ ಈ ಪೊಲೀಸ್‌ ಬಗ್ಗೆ ಅಭಿಮಾನವನ್ನೂ ವ್ಯಕ್ತಮಾಡುತ್ತಿದೆ.
ರಾಘವೇಂದ್ರ ನಾಯ್ಕರ ಈ ಜನಸ್ನೇಹಿ ಕೆಲಸ ಇತರ ಪೊಲೀಸ್‌ ರಿಗೂ ಮಾದರಿಯಾಗಿದ್ದು ಸಮಾಜಮುಖಿ ಯಾದ ಯಾವುದೇ ಕೆಲಸಕ್ಕೆ ಜನಬೆಂಬಲ ದೊರೆಯುತ್ತದೆನ್ನುವ ದೃಷ್ಟಾಂತಕ್ಕೆ ಈ ಪೊಲೀಸರ ಜನಸ್ನೇಹಿ ಬೀಟ್‌ ಕಾರ್ಯಕ್ರಮ ಉತ್ತಮ ಉದಾಹರಣೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *