local news…. ವಿಶೇಷ ಅನುದಾನದಲ್ಲಿ ಶಾಸಕರ ತಾರತಮ್ಯ ಸ್ವಪಕ್ಷೀಯ ಸದಸ್ಯರಿಂದ ಬಹಿರಂಗ ಅಸಮಧಾನ


ಸಿದ್ದಾಪುರ: ಸಿದ್ದಾಪುರ ಪಟ್ಟಣ ಪಂಚಾಯತ ವಿಶೇಷ ಅನುದಾನದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೇವಲ ಮೂರು ಸದಸ್ಯರ ವಾರ್ಡಿಗೆ ಮಾತ್ರ ಅನುದಾನ ನೀಡಿ ಉಳಿದವರನ್ನು ಕಡೆಗಣಿಸಿದ್ದಾರೆ. ಹಾಗಾದರೆ ನಾವೇನು ಬಿಜೆಪಿ ಸದಸ್ಯರಲ್ಲವಾ ಎಂದು ಸ್ವಪಕ್ಷೀಯ ಸದಸ್ಯರು ಬಹಿರಂಗವಾಗಿ ಪ್ರಶ್ನಿಸಿದ ಘಟನೆ ಪಟ್ಟಣ ಪಂಚಾಯತ ಸಭೆಯಲ್ಲಿ ನಡೆದಿದೆ.
ಪಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟಣ ಪಂಚಾಯತನ ಬಿಜೆಪಿ ಬಹುತೇಕ ಸದಸ್ಯರು ಶಾಸಕರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಪಪಂನ ೧೫ ಸದಸ್ಯರಲ್ಲಿ ೧೪ ಜನ ಬಿಜೆಪಿಯಿಂದ ಆಯ್ಕೆಯಾದವರಿದ್ದೇವೆ. ೩ ಕೋಟಿ ವಿಶೇಷ ಅನುದಾನದಲ್ಲಿ ಮೂರು ಜನ ಸದಸ್ಯರ ವಾರ್ಡಿಗೆ ಮಾತ್ರ ೫೦-೯೦ ಲಕ್ಷ ಅನುದಾನ ನೀಡಿ ಉಳಿದವರಿಗೆ ಬಿಡಿಗಾಸು ನೀಡದೇ ಬೇಧಭಾವ ಮಾಡಿದ್ದಾರೆ. ಹಾಗಾದರೆ ನಾವು ಬಿಜೆಪಿ ಪರವಾಗಿ ಕೆಲಸ ಮಾಡಲಿಲ್ಲವಾ? ಶಾಸಕರೇನು ಬೇರೆ ಪಕ್ಷದವರಾ? ಮುಂದಿನ ಅನುದಾನದಲ್ಲಿ ಬಹುಮತದ ಆಧಾರದ ಮೇಲೆ ಅನುದಾನ ಹಂಚಿಕೆಯಾಗಲಿ ಎಂದು ವಾಗ್ವಾದ ನಡೆಸಿದರು.

೩ ಕೋಟಿ ಎಸ್.ಎಫ್.ಸಿ ವಿಶೇಷ ಅನುದಾನದಲ್ಲಿ ಸದಸ್ಯರಾದ ಮಾರುತಿ ನಾಯ್ಕ, ಗುರುರಾಜ ಶಾನಭಾಗ ಹಾಗೂ ನಂದನ ಬೋರಕರ್ ರ ವಾರ್ಡಿಗೆ ಮಾತ್ರ ಅನುದಾನ ನೀಡಿದ್ದರು, ಈಗಿರುವ ಅನುದಾನದಲ್ಲಿ ಬಹುಮತದ ಮೇರೆಗೆ ಅನುದಾನ ಹಂಚಬೇಕು ಎಂದು ಒತ್ತಾಯಿಸಿದರು.
ಪಟ್ಟಣ ಪಂಚಾಯತನಲ್ಲಿ ೧೪-೧೫ ಹುದ್ದೆಗಳ ಕೊರತೆಯಿದ್ದು, ಉತ್ತಮವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಯನ್ನು ಬಾಗಲಕೋಟೆಗೆ ವರ್ಗಾವಣೆಗೊಳಿಸಿದ್ದಾರೆ. ಒಳ್ಳೆ ಕೆಲಸ ಮಾಡುವ ನೌಕರರನ್ನು ಇಲ್ಲಿಗೆ ತರುವ ಬದಲು ಇಲ್ಲಿರುವವರನ್ನೆ ಬೇರೆ ಕಡೆ ವರ್ಗ ಮಾಡಿಸುತ್ತಿದ್ದಾರೆ. ಒಟ್ಟಿನಲ್ಲಿ ಸಿದ್ದಾಪುರ ಪಟ್ಟಣ ಪಂಚಾಯತಗೆ ಕೆಟ್ಟ ಹೆಸರು ತರುವ ಕೆಲಸ ಕಾಣದ ಕೈಗಳಿಂದ ನಡೆಯುತ್ತಿದೆ ಎಂದು ಪಪಂ ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಅಸಮಧಾನ ವ್ಯಕ್ತಪಡಿಸಿದರು.


ಜುಲೈ ೧ ರಿಂದ ಪಟ್ಟಣದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ಬ್ಯಾನ್ ಮಾಡಲು ಚಿಂತನೆ ನಡೆಸಿದ್ದು, ಪ್ರಕಟಣೆ ಹಾಗೂ ಕರಪತ್ರದ ಮೂಲಕ ವ್ಯಾಪಕ ಪ್ರಚಾರ ನಡೆಸಲಾಗುವುದು ಎಂದು ಮುಖ್ಯಾಧಿಕಾರಿ ಕುಮಾರ ನಾಯ್ಕ ತಿಳಿಸಿದರು.
ಸಭೆಯಲ್ಲಿ ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೆಗುಂಡಿ ಉಪಸ್ಥಿತರಿದ್ದರು.

ಸಿದ್ದಾಪುರ: ಯುವಕರ ವೈಯಕ್ತಿಕ ಜೀವನ ಉತ್ತಮವಾಗಿ ರೂಪಿಸಿಕೊಂಡರೆ ಅದು ರಾಷ್ಟ್ರದ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದರು.
ಅವರು ತಾಲೂಕಿನ ಅವರಗುಪ್ಪದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟಿಸಿ ಮಾತನಾಡಿದರು.



ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು. ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿ. ತಮ್ಮ ಜವಾಬ್ದಾರಿಯನ್ನು ಶಿಕ್ಷಕರು ಸರಿಯಾಗಿ ನಿಭಾಯಿಸಬೇಕು. ಅದರಂತೆ ಮಕ್ಕಳು ತಮ್ಮ ಜವಾಬ್ದಾರಿಯನ್ನು ಅರಿತು ಕೊಳ್ಳಬೇಕು. ಎಲ್ಲಾ ಉದ್ಯೋಗಗಳಲ್ಲಿ ಹಾಗೂ ಜೀವನ ನಿರ್ವಹಣೆ ಗೆ ಇಂಗ್ಲಿಷ್ ಅವಶ್ಯಕತೆ ಇದೆ. ಇಲ್ಲಿ ಪ್ರಾರಂಭಿಸಿರುವ ಇಂಗ್ಲೀಷ್ ತರಬೇತಿ ನಿಮಗೆ ಮುಂದೆ ಅನುಕೂಲವಾಗಲಿದೆ ಎಂದರು
ಕಾಲೇಜಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇನ್ನು ಕೆಲವು ಅಭಿವೃದ್ಧಿ ಕೆಲಸಗಳಾಗಬೇಕು ಸರಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೊಲ್ ಸಿರ್ಸಿ ಗ್ರಾಮ ಪಂಚಾಯತ ಉಪಾಧ್ಯಕ್ಷ ವಿನಾಯಕ ಕೆ ಆರ್, ಸದಸ್ಯರಾದ ಗೋವಿಂದ ನಾಯ್ಕ ಆನಂದ ಮಡಿವಾಳ ಕುಣಜಿ, ಮಹಾಬಲೇಶ್ವರ ನಾಯ್ಕ, ಗಣಪತಿ ಗೊಂಡ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯ ಎಂ ಎ ಹೆಗಡೆ ಸ್ವಾಗತಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *