ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್‌ಬಿಐ!

ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು.

ಬೆಂಗಳೂರು: ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಕರ್ನಾಟಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತರು ಕೃಷಿ ಚಟುವಟಿಕೆ ನಡೆಸಲು ಬ್ಯಾಂಕ್‌ನಲ್ಲಿ ಸಾಲ ಕೇಳಲು ಹೋದಾಗ ಸಾಲಗಾರರ ಸಿಬಿಲ್ ಪರೀಕ್ಷೆ ಮಾಡಿ ನಂತರ ಸಾಲ ಕೊಡಬೇಕೆ ಬೇಡವೆ ಎಂದು ತಿಳಿಸುತ್ತೇವೆ ಎನ್ನುತ್ತಾರೆ. ಇದರಿಂದ ಬಹುತೇಕ ರೈತರಿಗೆ ಸಾಲ ಸಿಗದಂತೆ ಆಗುತ್ತದೆ. ರೈತ ದೇಶದ ಜನರಿಗೆ ಆಹಾರ ಉತ್ಪಾದನೆ ಮಾಡುವ ಸಲುವಾಗಿ ಬೆಳೆ ಬೆಳೆಯಲು, ವ್ಯವಸಾಯ ಚಟುವಟಿಕೆಗಾಗಿ ಸಾಲ ತೆಗೆದುಕೊಳ್ಳುತ್ತಾನೆ. 

ಕೆಲವು ಸಂದರ್ಭ ಪ್ರಕೃತಿಯ ವಕ್ರದೃಷ್ಟಿಯಿಂದ ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ ಹಾನಿ, ಬರಹಾನಿ ಸಿಲುಕಿ ಬೆಳೆ ನಷ್ಟ ಅನುಭವಿಸುತ್ತಾನೆ. ಇದರಿಂದ ಕೆಲವು ಸಂದರ್ಭಗಳಲ್ಲಿ ನಿಯಮಗಳ ಪ್ರಕಾರ ಸಕಾಲಕ್ಕೆ ಸಾಲ ಪಾವತಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರೈತನ ಸಿಬಿಲ್ ಸ್ಕೋರ್ ಉತ್ತಮವಾಗಿರಲು ಸಾಧ್ಯವಾಗುವುದಿಲ್ಲ. ಎಲ್ಲ ವಿಷಯಗಳನ್ನು ಗಮನಿಸಿ ರೈತರ ಕೃಷಿ ಚಟುವಟಿಕೆಗೆ ನೀಡುವ ಸಾಲಕ್ಕೆ ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿಯನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.

ಕರೋನಾ ಸಂಕಷ್ಟದಿಂದ ರೈತರು ಕಷ್ಟ ಅನುಭವಿಸುತ್ತಿದ್ದರು ರೈತರಿಗೆ ಪ್ರೋತ್ಸಾಹದಾಯಕ ಯಾವುದೇ ಯೋಜನೆ ಜಾರಿ ಮಾಡಿಲ್ಲ ಆದರೆ ಉದ್ಯಮಿಗಳಿಗೆ ಶೇಕಡ 30ರಷ್ಟು ಹೆಚ್ಚುವರಿ ಸಾಲ ಪಡೆದುಕೊಂಡು ವ್ಯಾಪಾರ ಅಭಿವೃದ್ಧಿಪಡಿಸಲು ಪ್ರೋತ್ಸಾಹ ನೀಡಲಾಗಿದೆ ಇಂತಹ ನೀತಿ ರೈತರನ್ನು ನಿರ್ಲಕ್ಷಿಸುವ ನೀತಿ ಗಳಾಗಿವೆ. ಸಂಕಷ್ಟದಲ್ಲಿರುವ ರೈತರ ಸಾಲ ವಸೂಲಾತಿ ಗಾಗಿ ಬ್ಯಾಂಕ್ಗಳು ನೋಟಿಸ್ ನೀಡಿ ಕಿರುಕುಳ ನೀಡುತ್ತಿವೆ ಹಾಗೂ ನ್ಯಾಯಾಲಯಕ್ಕೆ ದಾವೆ ದಾಖಲಿಸುತ್ತೇವೆ ಇದು ಕೂಡಲೇ ನಿಲ್ಲಬೇಕು. ಸರ್ಕಾರಿ ಯೋಜನೆಗಳ ಪ್ರೋತ್ಸಾಹಧನ ಹಣ ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವುದನ್ನು ತಪ್ಪಿಸಬೇಕು. ಆನ್ಲೈನ್ ಹಣ ಪಾವತಿ, ರೈತರ ಖಾತೆಯಿಂದ ಅನಾಮಧೇಯರು ವಂಚಿಸುತ್ತಿರುವ ಬಗ್ಗೆ ಜಿಲ್ಲಾಮಟ್ಟದಲ್ಲಿ ತನಿಖಾ ತಂಡ ರಚಿಸಿ ತಕ್ಷಣವೇ ನ್ಯಾಯ ಕೊಡಿಸುವಂತಾಗಬೇಕು ಎಂದು ಆಗ್ರಹಿಸಿದರು.

ಪೊಲೀಸರ ಸರ್ಪಗಾವಲಿನ ನಡುವೆ ಪ್ರತಿಭಟನೆಯ ಮನವಿ ಸ್ವೀಕರಿಸಿದ ರಿಸರ್ವ್ ಬ್ಯಾಂಕ್ ಬ್ಯಾಂಕ್ ಇಂಡಿಯಾ ಡೆಪ್ಯೂಟಿ ಜನರಲ್ ಮ್ಯಾನೇಜರ್ ಆನಂದ ಕಿಶೋರ್ ಪಾಟೀಲ್ ಸಮ್ಮುಖದಲ್ಲಿ ಹತ್ತು ಜನ ರೈತ ಪ್ರತಿನಿಧಿಗಳ ಸಭೆ ನಡೆಯಿತು. ರೈತರ ಒತ್ತಾಯ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗೌರ್ನರ್ ರವರಿಗೆ ವರದಿ ನೀಡುವುದಾಗಿ ಹಾಗೂ ರೈತರ ಇನ್ನಿತರ ವಿಚಾರಗಳ ಬಗ್ಗೆ 15 ದಿವಸದಲ್ಲಿ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರ ಸಭೆ ಕರೆದು ರೈತ ಪ್ರತಿನಿಧಿಗಳನ್ನು ಸಭೆಗೆ ಆಮಂತ್ರಣ ನೀಡುವುದಾಗಿ ತಿಳಿಸಿದರು. ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆದ ನಂತರ ತೀರ್ಮಾನಕ್ಕೆ ಬರಲಾಯಿತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *