ನದಿ ಜೋಡಣೆ ಯೋಜನೆಗೆ ವಿರೋಧ : ಸ್ವರ್ಣವಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಜನಾಂದೋಲನಕ್ಕೆ ಸಜ್ಜು

Thumbnail image

ನದಿ ನೀರು ಜೋಡಣೆ ಹೆಸರಿನಲ್ಲಿ ಉತ್ತರಕನ್ನಡ ಜಿಲ್ಲೆಯ ನದಿಯ ನೀರನ್ನು ತುಂಗಭದ್ರಾ ನದಿ ಕಾಲುವೆಗಳಿಗೆ ಹರಿಸುವ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿದೆ..

ಶಿರಸಿ (ಉತ್ತರಕನ್ನಡ) : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ನದಿ ನೀರು ಹಾಗೂ ಶಿರಸಿಯ ಹೊಳೆ ನೀರನ್ನು ವರದಾ ನದಿಗೆ ಜೋಡಿಸಿ ಅದನ್ನು ಪಂಪ್ ಮಾಡಿ ತುಂಗಭದ್ರಾ ನದಿಯ ಎಡದಂಡೆ ಕಾಲುವೆ ಪ್ರದೇಶಗಳಿಗೆ ಹರಿಸುವ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸ್ವರ್ಣವಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಜನಾಂದೋಲನ ನಡೆಸಲು ನಿರ್ಧರಿಸಲಾಗಿದೆ.

https://90b225e221fd289dac7e3e5c0e1b9945.safeframe.googlesyndication.com/safeframe/1-0-38/html/container.html

ಎತ್ತಿನಹೊಳೆ ಯೋಜನೆ ಕೈಗೊಂಡು ಹಲವು ವರ್ಷಗಳೇ ಕಳೆದರೂ ಒಂದು ಹನಿ ನೀರನ್ನೂ ಹರಿಸಲು ಸಾಧ್ಯವಾಗದಿರುವಾಗ ಅದೇ ರೀತಿಯ ಯೋಜನೆ ತಂದು ಇಲ್ಲಿನ ನಿಸರ್ಗಕ್ಕೂ ಹೊಡೆತ ನೀಡುವುದಕ್ಕೆ ಪಶ್ಚಿಮಘಟ್ಟದ ಜನರಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ ಜನಾಂದೋಲನದ ಮೂಲಕ ಶಿರಸಿಯ ಸೋಂದಾ ಸ್ವರ್ಣವಲ್ಲೀ ಸ್ವಾಮೀಜಿಯವರ ನೇತೃತ್ವದಲ್ಲಿ ವಿರೋಧಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ.

ನದಿ ತಿರುವು ಜೋಡಣೆ ಹೆಸರಿನಲ್ಲಿ ರೂಪಿಸಿರುವ ಯೋಜನೆಯನ್ನು ತರಲು ಸರ್ಕಾರ ತಯಾರಿ ನಡೆಸಿದ್ದು, ಸ್ವಾಮೀಜಿಗಳು ಸೇರಿದಂತೆ ಜಿಲ್ಲೆಯ ಪರಿಸರವಾದಿಗಳು, ಪ್ರಮುಖರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಎತ್ತಿನಹೊಳೆ ರೀತಿ ಇದು ಕೂಡ ಹಣ ಮಾಡುವ ಯೋಜನೆಯಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಹಿಂದೆ ನದಿ ಜೋಡಣೆಯ ಯೋಜನೆಗೆ ಸಂಬಂಧಿಸಿ ಸಮೀಕ್ಷೆ ನಡೆಸಲು ಇಲ್ಲಿನ ಕೊಳ್ಳ ಸಂರಕ್ಷಣಾ ಸಮಿತಿ ಅವಕಾಶ ನೀಡಿರಲಿಲ್ಲ. 22 ಮೆಗಾ ವ್ಯಾಟ್ ನೀರನ್ನು ಬೇಡ್ತಿ ವರದಾ ನದಿಯಿಂದ ಕೊಂಡೊಯ್ಯುವ ಪ್ರಸ್ತಾಪ ಇರಿಸಲಾಗಿದೆ. ಬೇಡ್ತಿಯಿಂದ ವರದಾ, ಧರ್ಮಾ ಜಲಾಶಯಕ್ಕೆ ನೀರು ಹರಿಸುವ ಯೋಜನೆಯಿದೆ. ಯೋಜನೆಗೆ ಸಂಬಂಧಿಸಿ ಪೂರ್ಣ ಮಾಹಿತಿಯುಳ್ಳ ಡಿಪಿಆರ್ (ವಿಸ್ತ್ರತ ಯೋಜನಾ ವರದಿ) ತಯಾರಿಸಿಲ್ಲ. ಇದು ಸಂಪೂರ್ಣ ಸುಳ್ಳಿನಿಂದ ಕೂಡಿದ ಯೋಜನೆಯಾಗಿದ್ದು, ಇದರ ಅಗತ್ಯತೆ ಇಲ್ಲ ಎಂಬುದು ಸ್ಥಳೀಯರ ವಾದವಾಗಿದೆ.

ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಯಲ್ಲಾಪುರದ ಮಂಚಿಕೇರಿಯಲ್ಲಿ ಯೋಜನೆ ವಿರುದ್ಧ ಬೃಹತ್ ಸಮಾವೇಶ ನಡೆಸಿ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೇ ಸರ್ಕಾರದ ಭಾಗವಾಗಿರುವ ಸಚಿವ ಶಿವರಾಮ ಹೆಬ್ಬಾರ್ ಮತ್ತು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿನಿಧಿಸುವ ಕ್ಷೇತ್ರ ಇದಾಗಿದ್ದು, ಯಾವ ಕಾರಣಕ್ಕೂ ಯೋಜನೆ ಅನುಷ್ಠಾನಕ್ಕೆ ಬಾರದಂತೆ ತಡೆಯಲು ಸರ್ಕಾರ ಮಟ್ಟದಲ್ಲಿ ಪ್ರಯತ್ನಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. (ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *