ಚುನಾವಣೆ ಹತ್ತಿರ ಬಂದಾಗ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಯೋಜನೆ ನೆನಪು

——————————————–

ಕಾರವಾರ: ಪ್ರತಿ ಸಲ ಚುನಾವಣೆ ಹತ್ತಿರ ಬಂದಾಗ ಮುಖ್ಯಮಂತ್ರಿ ಗಳಾದಿಯಾಗಿ ಜಿಲ್ಲಾ ಮಂತ್ರಿಗಳು , ಎಂ.ಎಲ್.ಎ. ಗಳು ಸೇರಿ ಆಡಳಿತ ನಡೆಸುವವರಿಗೆ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಯೋಜನೆ ನೆನಪಾಗುತ್ತದೆ. ಕೆಲವೇ ತಿಂಗಳುಗಳಲ್ಲಿ ಉ.ಕ.ಜಿಲ್ಲೆಯ ಅಭಿವೃದ್ಧಿ ಶಕೆ ಆರಂಭ ಎಂದು ಪ್ರಚಾರ ನಡೆಸಲಾಗುತ್ತದೆ. ಈಗ ಮತ್ತೇ ಅದೇ ನಡೆದಿದೆ. ಒಬ್ಬರನೊಬ್ಬರು ಹೇಳಿಕೆ ಕೊಟ್ಟು ಅಭಿನಂದಿಸಿಕೊಳ್ಳಲು ಪೈಪೋಟಿ ಆರಂಬಿಸಿದ್ದಾರೆ. ಹತ್ತಾರು ಸುಳ್ಳುಗಳ ಗೋಪುರ ಕಟ್ಟಲಾಗುತ್ತದೆ.

ವಾಸ್ತವವಾಗಿ ರೇಲ್ವೆ ಯೋಜನೆ ಜಾರಿ ಬಗ್ಗೆ  ಆಡಳಿತ ನಡೆಸುವವರಿಗೆ ರಾಜಕೀಯ ಇಚ್ಚಾ ಶಕ್ತಿ ಕೊರತೆ ಇದೆ.ಪರಿಸರವಾದಿಗಳು ಪದೇ ಪದೇ ಅಡ್ಡಿ ಬಂದರು ಅದನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಇಲ್ಲ. 6 ತಿಂಗಳಲ್ಲಿ ಎಲ್ಲಾ ಸಮಸ್ಯೆ ಬಗೆಹರಿಯಲಿದೆ ಎನ್ನುವ ಮುಖ್ಯ ಮಂತ್ರಿಗಳ ಹೇಳಿಕೆ ಬಗ್ಗೆ ನಿರ್ದಿಷ್ಟ ಆಧಾರವಿಲ್ಲ, ಆದರೂ ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ . ಕೆಳಗಿನವರು ಹಾಡಿಹೊಗಳಿ ಬಹುಪರಾಕ  ಹೇಳುತ್ತಿದ್ದಾರೆ, ಇದರಿಂದ ರೇಲ್ವೆ ಯೋಜನೆ ಜಾರಿಗೆ ಬರುವುದಿಲ್ಲ.

ಸರಕಾರಕ್ಕೆ ನಿಜವಾದ ಇಚ್ಛಾಶಕ್ತಿ ಇದ್ದರೆ ರೇಲ್ವೆ ಯೋಜನೆ ಜಾರಿಗಾಗಿ ಉನ್ನತ ಮಟ್ಟದ ಜವಬ್ದಾರಿ ಸಮಿತಿ ರಚಿಸಿ ಎಲ್ಲಾ ಕಾನೂನು ತೊಡುಕು ಇತ್ಯಾದಿ ಸಮಸ್ಯೆ ಬಗೆಹರಿಸುವ ಕಾಲಮಿತಿ ಜವಬ್ದಾರಿ ನೀಡಿ ಕೆಲಸ ಮಾಡಿಸುವ ರಾಜಕೀಯ ಇಚ್ಛಾಶಕ್ತಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ತೋರಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಉತ್ತರ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆಯೆಂದು ಜಿಲ್ಲಾಧ್ಯಕ್ಷರಾದ ಶಾಂತಾರಾಮ ನಾಯಕ ತಿಳಿಸಿದ್ದಾರೆ.

(-ಶಾಂತಾರಾಮ ನಾಯಕ

ಜಿಲ್ಲಾಧ್ಯಕ್ಷರು)

ಸಿದ್ದಾಪುರ; ಸಮಾಜ ನಮಗೇನು ಕೊಟ್ಟಿದಿಯೋ ಅದರ ಋಣವನ್ನು ಮರಳಿಸುವ ಕಾರ್ಯವನ್ನು ಸ್ಪಂದನ ಸೇವಾ ಸಂಸ್ಥೆಯವರು ಮಾಡುತ್ತಿದ್ದಾರೆ. ಸಮಾಜ ಸೇವೆ ಒಂದಿಷ್ಟು ಆತ್ಮತೃಪ್ತಿ ಹಾಗೂ ಸಾರ್ಥಕತೆಯನ್ನು ಕೊಡುವಂತ ಕೆಲಸ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಹೇಳಿದರು.
ಅವರು ತಾಲೂಕಿನ ಬೇಡ್ಕಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಟ್ಟಣದ ಸ್ಪಂದನಾ ಸೇವಾ ಸಂಸ್ಥೆ (ರಿ) ಇವರಿಂದ ಏಕ ಪಾಲಕತ್ವ ಹೊಂದಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೆರವು ಕಾರ್ಯಕ್ರಮ-೨೦೨೨ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಸಾಧನೆಯನ್ನು ಮಾಡಬೇಕು. ನಂತರದಲ್ಲಿ ಇತರರಿಗೆ ನೆರವಾಗುವಂತೆ ಆಗಬೇಕು ಎಂದರು.


ಮುಖ್ಯ ಅಥಿತಿಗಳಾಗಿ ಫೆವಾರ್ಡ್ ಉತ್ತರ ಕನ್ನಡದ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ ಮಾತನಾಡಿ ಗುಡಿ , ಗುಂಡಾರಗಳನ್ನು ಕಟ್ಟುವುದಕ್ಕೆ ನಾವು ನೀಡುವ ದೇಣಿಗೆಯಂತೆ ಶಾಲೆಗಳ, ವಿದ್ಯಾರ್ಥಿಗಳ ಅಭಿವೃದ್ಧಿಗೆ ಸಮಾಜ ಸಹಕರಿಸಬೇಕಾದ ಅಗತ್ಯ ಇದೆ. ಅಂಕಗಳ ಜೊತೆ ನಮ್ಮ ಬದುಕನ್ನು ಕಟ್ಟಿಕೊಡುವಂತ ಭರವಸೆಯನ್ನು ತುಂಬುವ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಿನ ದಿನಗಳಲ್ಲಿ ಹೆಚ್ಚಿನ ನೆರವನ್ನು ವಿದ್ಯಾರ್ಥಿಗಳಿಗೆ ನೀಡುವ ಯೋಚನೆಯನ್ನು ಹೊಂದಿದ್ದೇವೆ. ನಮ್ಮ ಮಿತಿಯಲ್ಲಿ ಸಾದ್ಯವಾದಷ್ಟು ಸಹಕಾರವನ್ನು ನೀಡುತ್ತಿದ್ದೇವೆ ಎಂದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ ನಾಯ್ಕ , ಮುಖ್ಯ ಶಿಕ್ಷಕ ಆರ್.ಎಸ್.ಶಿರನಾಳ ಮಾತನಾಡಿದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ಮಹೇಶ ಹೆಗಡೆ, ಸಿ.ಆರ್.ಪಿ ಚಂದ್ರು ಉಪಸ್ಥಿತರಿದ್ದರು.
ಸ್ಪಂದನ ಸೇವಾ ಸಂಸ್ಥೆಯ ನಿರ್ದೇಶಕರುಗಳಾದ ಪ್ರಜ್ವಲ್ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.ರಂಗನಾಥ ಶೇಟ್ ವಂದಿಸಿದರು. ಸುಧಾರಾಣಿ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *