

ಧಾರ್ಮಿಕ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುವ ಯತ್ನ ಹೆಚ್ಚುದಿನ ಫಲಕೊಡುವುದಿಲ್ಲ, ಬಿ.ಜೆ.ಪಿ. ಸಂಘ ಪರಿವಾರದ ಒಂದು ಘಟಕವಷ್ಟೇ ಆರೆಸ್ಸೆಸ್ ಅಣತಿಯಂತೆ ದೇಶದಲ್ಲಿ ಸರ್ಕಾರ ನಡೆಯುತ್ತಿದೆ ಇದರಿಂದಾಗಿ ದೇಶದ ಸಮಸ್ಯೆ ಬಿಗಡಾಯಿಸಿದೆ ಎಂದು ದೂರಿರುವ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ ೨೦೨೩ ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.


ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಜೆ.ಪಿ.ಯವರಿಗೆ ಅಧಿಕಾರ ಮಾಡಲು ಬರುವುದಿಲ್ಲ ಹಿಂದಿನ ಸರ್ಕಾರಗಳ ಆಡಳಿತ ವೈಖರಿ ಗಮನಿಸಿದರೆ ಬಿ.ಜೆ.ಪಿ. ಜನಪರವಲ್ಲ ಎಂಬುದು ಸಾಬೀತಾಗುತ್ತದೆ. ರಾಜ್ಯದಲ್ಲಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆ.ಪಿ.ಸಿ.ಸಿ. ನಿಶ್ಚಿತ ಗುರಿಯೊಂದಿಗೆ ಕೆಲಸ ಮಾಡುತ್ತಿದೆ. ರಾಜ್ಯಾದ್ಯಂತ ವೀಕ್ಷಕರನ್ನು ಕಳುಹಿಸಿ ಪಕ್ಷ ಸಂಘಟನೆ ಬಲಗೊಳಿಸುವ ಜೊತೆಗೆ ಪಕ್ಷ ಬಿಟ್ಟವರನ್ನು ಮರಳಿ ಪಕ್ಷಕ್ಕೆ ತರುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಸಂಘಟನೆ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ, ಶಿರಸಿ ಕ್ಷೇತ್ರದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಶಾಸಕರಿಲ್ಲ, ಇಂದಿನ ಸಮಯ ನೆನಪಿಟಕ್ಕೊಳ್ಳಿ ಈಗಲೇ ಬರೆದಿಟಕ್ಕೊಳ್ಳಿ ಈ ಬಾರಿ ಶಿರಸಿ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
