

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕುಸಿದು ಬಿದ್ದಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಬ್ಬರ್ ಸ್ಟಾಂಪ್,ಗೃಹ ಸಚಿವರಿಗೆ ಸಾಮರ್ಥ್ಯವೇ ಇಲ್ಲ ಉಳಿದ ಸಚಿವರ ಕತೆ ಹೇಳುವುದೇ ಬೇಡ ಇಂಥ ಆಕಸ್ಮಿಕ ಸರ್ಕಾರದಿಂದ ರಾಜ್ಯದ ಉದ್ಧಾರ ಸಾಧ್ಯವಿಲ್ಲ ಎಂದು ಲೇವಡಿಮಾಡಿರುವ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಈ ಅವ್ಯವಸ್ಥೆಗಳನ್ನು ನೋಡಿ ಬೇಸತ್ತು ಜನ ಕಾಂಗ್ರೆಸ್ ಗೆ ಮತ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

ಶಿರಸಿ ಕ್ಷೇತ್ರದ ವೀಕ್ಷಕರಾಗಿ ಆಗಮಿಸಿ ಶಿರಸಿ-ಸಿದ್ಧಾಪುರಗಳಲ್ಲಿ ಕಾಂಗ್ರೆಸ್ ಸಭೆ ನಡೆಸಿದ ಅವರು samajamukhi.net ಪ್ರತಿನಿಧಿ ಜೊತೆ ಮಾತನಾಡಿ ರಾಜ್ಯ, ದೇಶದಲ್ಲಿ ಧಾರ್ಮಿಕತೆ ಮುಂದಿಟ್ಟುಕೊಂಡು ರಾಜಕೀಯ ಮಾಡುವ ಪರಂಪರೆ ಪ್ರಾರಂಭವಾಗಿದೆ. ಈ ಪ್ರಯತ್ನ ಫಲ ನಿಡುವುದಿಲ್ಲ ರಾಹುಲ್ ಗಾಂಧಿಯವರನ್ನು ಟೀಕಿಸಿ, ತೇಜೋವಧೆ ಮಾಡುವ ಪರಿವಾರ ರಾಹುಲ್ ಗಾಂಧಿಯವರನ್ನೇ ಯಾಕೆ ಗುರಿಮಾಡುತ್ತಿದೆ ಎನ್ನುವುದೂ ಜನರಿಗೆ ಅರ್ಥವಾಗುತ್ತಿದೆ ಎಂದರು. ಬೆಲೆ ಏರಿಕೆ, ಕೃಷಿಕರ ತೊಂದರೆ, ಜನಸಾಮಾನ್ಯರ ಬವಣೆ ಈ ಅಂಶಗಳೇ ಬಿ.ಜೆ.ಪಿ. ಸೋಲಿಗೆ ಕಾರಣವಾಗಲಿವೆ ಎಂದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
