


ಶಿವಮೊಗ್ಗದ ಸಾಗರ ನೆಹರು ನಗರದ ಮೊದಲನೇ ಕ್ರಾಸ್ನ ರಸ್ತೆಯಲ್ಲಿ ಜೋರಾದ ಶಬ್ದ ಬಂದಿದೆ. ಈ ಘಟನೆಯಿಂದ ಭಯಭೀತರಾದ ನಿವಾಸಿಗಳು ಸಾಗರ ನಗರಸಭೆಗೆ ಪೋನ್ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಇತ್ತ ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ನಗರದ ಮೊದಲನೇ ಕ್ರಾಸ್ ನಲ್ಲಿ ಇಂದು ರಸ್ತೆಯಲ್ಲಿ ಜೋರಾದ ಶಬ್ದ ಬಂದಿದೆ. ಇದರಿಂದ ಭಯಭೀತರಾದ ನೆಹರು ನಗರದ ನಿವಾಸಿಗಳು ಹೊರಗೆ ಬಂದು ನೋಡಿದ್ರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಇದರಿಂದ ನೀರು ಜೋರಾಗಿ ಉಕ್ಕಿ ಹರಿದಿದೆ. ಭೂಮಿಯಿಂದ ಬಂದ ನೀರು ಮನೆಗಳಿಗೆಲ್ಲ ನುಗ್ಗಿದೆ. ಸ್ವಲ್ಪ ಸಮಯದ ನಂತರ ನೀರು ಹರಿದು ಬೇರೆ ಕಡೆ ಹೋಗಿದೆ.
ದಿಢೀರ್ ಶಬ್ದದಿಂದ ಸೀಳು ಬಿಟ್ಟ ಭೂಮಿ ಬಗ್ಗೆ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿರುವುದು
ವಿಷಯ ತಿಳಿದ್ರು ಬಾರದ ಅಧಿಕಾರಿಗಳು: ನೆಹರು ನಗರದಲ್ಲಿ ಘಟನೆಯಿಂದ ಭಯಭೀತರಾದ ನಿವಾಸಿಗಳು ಸಾಗರ ನಗರಸಭೆಗೆ ಪೋನ್ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಇತ್ತ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ. ನೀರು ಹೇಗೆ ಬಂತು, ಎಲ್ಲಿಂದ ಬಂತು, ಇದರಿಂದ ನಮ್ಮ ಮನೆಗಳಿಗೆ ಹಾನಿ ಏನಾದ್ರೂ ಆಗುತ್ತದೆಯೇ? ಎಂಬ ಅನುಮಾನ ಸ್ಥಳೀಯರಲ್ಲಿ ಕಾಡುತ್ತಿದೆ. ಇದಕ್ಕೆ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕಿದೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
