ಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ! ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

ಸಿದ್ಧಾಪುರದಲ್ಲಿ ಈ ವರೆಗೆ ೫ ಮನೆಗಳಿಗೆ ಹಾನಿಯಾಗಿ ಮಳೆಯಿಂದಾಗಿ ಉಂಟಾದ ತೊಂದರೆಗೆ ಕನಿಷ್ಟ ೨೫ ಕಡೆ ಹಾನಿಯಾಗಿದೆ. ಮಾದ್ನಕಲ್‌ ಭಾಗದ ಕೆಲವು ಗ್ರಾಮಗಳಿಗೆ ಸಂಪರ್ಕ ಕಡಿದಿದೆ. ಕಳೆದ ಎರಡು ದಿವಸಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಾಲಾ ಮಕ್ಕಳಿಗೆ ಶಾಲೆ,ಮತ್ತು ಮನೆಗೆ ತೆರಳಲು ತೊಂದರೆಯಾಗಿದೆ. ಬಿದ್ರಕಾನ ಗ್ರಾಮ ಪಂಚಾಯತ್‌ ಹೆಮಟೆಮನೆ ಬಳಿ ಮತ್ತು ಹಳದೋಟದಲ್ಲಿ ದರೆ ಕುಸಿದು ಶಾಲಾ ಮಕ್ಕಳು ಬಳಸುತಿದ್ದ ರಸ್ತೆ ಸಂಪರ್ಕ ಕಡಿದುಹೋಗಿದೆ. ನಗರದಲ್ಲಿ ಹಲವೆಡೆ ಕುಸಿತಗಳಾಗಿವೆ ತಾಲೂಕಾ ಆಡಳಿತ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಪ್ರಾರಂಭಿಸಿದೆ.

Heavy_Rain1

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

 ಹಳಿಯಾಳ ಮೂಲದ ಮಂಜುನಾಥ ಮೋರೆ ಎಂಬಾತ ಸಾತ್ನಳ್ಳಿ ಕೆರೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರದ ಹಳಿಯಾಳದಿಂದ ದಕ್ಷಿಣದ ಭಟ್ಕಳದವರೆಗೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ಮಧ್ಯೆ  ಭಾರೀ ಮಳೆಯಿಂದಾಗಿ ಆರು ಮನೆಗಳು ಸಂಪೂರ್ಣ ಮತ್ತು 49 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

https://imasdk.googleapis.com/js/core/bridge3.520.0_en.html#goog_1661716946

 ಹೊನ್ನಾವರದಲ್ಲಿ ಬೃಹತ್ ಮರ ಬಿದ್ದು ಒಂದು ಮನೆಗೆ ಹಾನಿಯಾಗಿದೆ. ಜನರು ತಮ್ಮ ವಸ್ತುಗಳನ್ನು ಸಂಗ್ರಹಿಸುವುದು, ಗಾಯಾಳುಗಳನ್ನು ಹೊತ್ತುಕೊಂಡು ಹೋಗುವುದು ಕೆಲವೆಡೆ ಕಂಡು ಬಂದಿದೆ. 

ಯಲ್ಲಾಪುರದಲ್ಲಿ ಭಾರೀ ಮಳೆಯಾಗಿದ್ದು, ಕಾರವಾರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಜಲಾವೃತಗೊಂಡಿವೆ. ಅರಬೈಲ್ ಘಾಟ್‌ಗೆ ಸಮೀಪವಿರುವ ಅರ್ಥಿಬೈಲ್‌ನಲ್ಲಿ ಟ್ಯಾಂಕರ್ ಒಂದು ಉರುಳಿ ಬಿದಿದ್ದೆ. ಇದರಿಂದಾಗಿ ಘಾಟ್‌ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆದರೂ ಸಂಜೆ ವೇಳೆಗೆ ಟ್ಯಾಂಕರ್ ತೆರವುಗೊಳಿಸಿ ಸಂಚಾರ ಮುಂದುವರಿಸಲಾಯಿತು.

ಹವಾಮಾನ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ, ಡಿಸಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಹೆಚ್ಚಿನ ಹಾನಿಯನ್ನು ನಿರೀಕ್ಷಿಸುತ್ತಿರುವ ನಾವು ಯಾವುದೇ ಘಟನೆಗಳನ್ನು ಎದುರಿಸಲು ಸಜ್ಜಾಗಿದ್ದೇವೆ” ಎಂದು ಅವರು ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *