ನಾಳೆಯಿಂದ ಮದ್ಯ ಮಾರಾಟ ಬಂದ್!?

Thumbnail image

ಲೋಪ ಸರಿಪಡಿಸದಿದ್ದರೆ ನಾಳೆಯಿಂದ ಮದ್ಯ ಮಾರಾಟ ಬಂದ್: ಸರ್ಕಾರಕ್ಕೆ ಮಾರಾಟಗಾರರ ಎಚ್ಚರಿಕೆ

ರಾಜ್ಯ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಅಬಕಾರಿ ಆದಾಯ ಹರಿದುಬರುತ್ತಿದೆ. ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಅಬಕಾರಿ ಇಲಾಖೆ ಕೂಡ ಒಂದು.

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9 ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್‌. ಗುರುಸ್ವಾಮಿ ಎಚ್ಚರಿಸಿದ್ದಾರೆ. ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆ ಆಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ ಎಂದರು.

ಕೆ.ಎಸ್.ಬಿ.ಸಿ.ಎಲ್ ಅಕೌಂಟ್​​ಗೆ ಹಣ ಹಾಕಿದರೆ ಮೊದಲು ನಮಗೆ ಬೇಕಾದ ಮದ್ಯ ಸುಲಭವಾಗಿ ಸಿಗುತ್ತಿತ್ತು. ಬಿಲ್ ವ್ಯವಸ್ಥೆ ಮ್ಯಾನ್ಯುವಲ್ ಆಗಿತ್ತು. ಆದರೆ ಏಪ್ರಿಲ್ 1ರಿಂದ ಹೊಸ ಪದ್ಧತಿ ಆರಂಭವಾಗಿದೆ. ವೆಬ್ ಇಂಡೆಂಟಿಂಗ್ ವ್ಯವಸ್ಥೆ ಜಾರಿಯಾದಾಗಿನಿಂದ ಎಲ್ಲವನ್ನೂ ಹಿಂದಿನ ದಿನವೇ ಪೂರ್ಣಗೊಳಿಸಬೇಕು. ಇದರಿಂದ ಸಗಟು ಮದ್ಯ ಖರೀದಿದಾರರಿಗೇ ಸಂಕಷ್ಟ ಎದುರಾಗಿದೆ. ಮುಂದಿನ 24 ಗಂಟೆಗಳ ಒಳಗೆ ಮದ್ಯ ಖರೀದಿ ವ್ಯವಸ್ಥೆಯನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮದ್ಯ ಮರಾಟಗಾರರಿಗೆ ಸಕಾಲಕ್ಕೆ ಮದ್ಯ ಸಿಗದ ದುಃಸ್ಥಿತಿ ನಿರ್ಮಾಣವಾಗಿದೆ. ಹೊಸ ಇ-ಇಂಡೆಂಟಿಂಗ್ ಸಾಫ್ಟವೇರ್ ನಿಂದಾಗಿ ಸಮಸ್ಯೆ ಉದ್ಭವಿಸಿದೆ. ಅನೇಕ ಬಾರಿ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಜುಲೈ 1ರಿಂದ ಮದ್ಯ ಖರೀದಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, 24 ಗಂಟೆಯಲ್ಲಿ ಸಮಸ್ಯೆ ಸರಿಪಡಿಸಲು ಆಗ್ರಹಿಸಿದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *