ಕಾಗೇರಿ ಹುಟ್ಟಹಬ್ಬ.. ರಕ್ತದಾನ, ಯೋಧರಿಗೆ ಸನ್ಮಾನ

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನ್ಮದಿನದ ಅಂಗವಾಗಿ
ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ, ಶ್ರೇಯಸ್ ಆಸ್ಪತ್ರೆ ಸಿದ್ದಾಪುರ ಹಾಗೂ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ವರ್ಷಗಳು ಉರುಳುತ್ತಲೇ ಇರುತ್ತವೆ. ಹಿಂದಿನದನ್ನು ಸಿಂಹಾವಲೋಕನ ಮಾಡೋಣ. ಮುಂದಿನ ದಿನಗಳಲ್ಲಿ ಒಳ್ಳೆಯದನ್ನು ಮಾಡೋಣ. ಜೀವ ಉಳಿಸುವ ರಕ್ತವನ್ನು ಪ್ರತಿಯೊಬ್ಬರು ದಾನ ಮಾಡಬೇಕು. ಸಮಾಜಮುಖಿ ಚಟುವಟಿಕೆ ನಡೆಸುವ ಮನೋಭಾವ ಎಲ್ಲರಲ್ಲೂ ಬರಲಿ. ಮಾನವೀಯತೆಯ ದೃಷ್ಟಿಕೋನ ನಮ್ಮಲ್ಲಿ ಮೂಡಬೇಕು ಎಂದರು.


ರಾಷ್ಟ್ರೋತ್ಥಾನ ರಕ್ತ ಕೇಂದ್ರದ ದತ್ತಮೂರ್ತಿ ಕುಲಕರ್ಣಿ ಶಿಬಿರ ಉದ್ಘಾಟಿಸಿ ಮಾತನಾಡಿ, ದಾನಗಳಲ್ಲಿ ಅತ್ಯಂತ ಮುಖ್ಯವಾದ ರಕ್ತದಾನ ಜೀವದಾನವಾಗಿದೆ‌. ರಕ್ತದ ಕೊರತೆಯಿಂದ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಒಬ್ಬರು ನೀಡಿದ ರಕ್ತ ಮೂವರ ಪ್ರಾಣ ಉಳಿಸುತ್ತದೆ. ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಎಂದರು.
ಪಟ್ಟಣ ಪಂಚಾಯತ ಸದಸ್ಯ ಗುರುರಾಜ ಶಾನಭಾಗ ಪ್ರಾಸ್ಥಾ ವಿಕ ಮಾತನಾಡಿ, ಸಂಪೂರ್ಣ ಜೀವನವನ್ನು ರಾಷ್ಟ್ರದ ಹಿತಕ್ಕಾಗಿ ಸಮರ್ಪಿತಗೊಳಿಸಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಭಾಧ್ಯಕ್ಷರಾಗಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿಯಾಗಿದೆ ಎಂದರು.

ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ವೀರಭದ್ರ ಪಾಟೀಲ್ ಮಾತನಾಡಿದರು. ಶ್ರೇಯಸ್ ಆಸ್ಪತ್ರೆಯ ಶ್ರೀಧರ ವೈದ್ಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಸುಮಂಗಲಾ ವೈದ್ಯ ಉಪಸ್ಥಿತರಿದ್ದರು. ನಿವೃತ್ತ ಯೋಧ ಪಿ.ಡಿ.ನಾಯ್ಕ ಹಲಗೇರಿ ಪ್ರಾರ್ಥಿಸಿದರು. ಪಟ್ಟಣ ಪಂಚಾಯತ ಸದಸ್ಯ ಮಾರುತಿ ನಾಯ್ಕ ಹೊಸೂರ ಸ್ವಾಗತಿಸಿದರು.

ಶಾಸಕ ವಿಶ್ವೇಶ್ವರ ಹೆಗಡೆ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮದಲ್ಲಿ ತಾಲೂಕಿನ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *