ರಸ್ತೆಯಂಚಿನ ತುಂಬರಗೋಡ್‌ ಸುಂದರಿ!

ಮಲೆನಾಡಿನಲ್ಲಿ ಸುರಿಯುತ್ತಿರುವ ವರ್ಷಧಾರೆ ಕಾಡು,ನಾಡುಗಳನ್ನೆಲ್ಲಾ ಒದ್ದೆ ಮಾಡಿಟ್ಟಿದೆ. ವರ್ಷದ ಮಳೆಗಾಲವೆಂದರೆ ಜನರಿಗೆ ಮಳೆ,ನೆರೆ ತೊಂದರೆಗಳ ನೆನಪಿನ ಬುತ್ತಿ ಆದರೆ ಮಳೆ ಕಡಿಮೆಯಾಗುತ್ತಲೇ ನೆನಪಾಗುವುದು ಜಲಪಾತಗಳು. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಜಿಲ್ಲೆ ಎನ್ನಲಾಗುತ್ತದೆ.ಇಲ್ಲಿ ನದಿ,ಬೆಟ್ಟಗಳ ಅಂಚುಗಳಲ್ಲೆಲ್ಲಾ ಜಲಪಾತಗಳ ಜಾತ್ರೆ.ಆದರೆ ಈ ಮಳೆಗಾಲದಲ್ಲಿ ದುರ್ಗಮ ರಸ್ತೆ ಹಳ್ಳ-ಕೊಳ್ಳಗಳನ್ನೆಲ್ಲಾ ದಾಟಿ ಜಲಪಾತಗಳನ್ನು ನೋಡುವುದು ಹೇಗೆ ಎಂದು ಆತಂಕಗೊಳ್ಳುವವರಿಗೂ ಸುಲಭ ಮಾರ್ಗಗಳಿವೆ. ಹೆಚ್ಚಿನ ಜಲಪಾತಗಳು ಗುಡ್ಡ-ಬೆಟ್ಟಗಳ ನಡುವೆ ಧುಮುಕಿದರೆ ಕೆಲವುಕೂಗಳತೆ,ಕಾಲ್ನಡಿಗೆ ದೂರದಲ್ಲಿ ಸಿಗುತ್ತವೆ.
ಅಂಥ ಜಲಪಾತಗಳಲ್ಲಿ ಸಿದ್ಧಾಪುರದ ತುಂಬರಗೋಡ್‌ ಜಲಪಾತ ಒಂದು.

ವರ್ಷದ ಆರುತಿಂಗಳಿಗೂ ಹೆಚ್ಚು ಅವಧಿ ಕಂಡುಬರುವ ಸಿದ್ಧಾಪುರ ತಾಲೂಕಿನ ಶಿರಸಿ-ಸಿದ್ದಾಪುರ ರಸ್ತೆಯ ಪಕ್ಕದ ಜಲಪಾತ ಶಿರಸಿ ಬೆಂಗಳೂರು ರಸ್ತೆಯ ಪಕ್ಕಕ್ಕೇ ಹರಿಯುತ್ತದೆ. ಹಾರ್ಸಿಕಟ್ಟಾ ಪಂಚಾಯತ್‌ ವ್ಯಾಪ್ತಿಯ ಈ ಜಲಪಾತದ ವಿಶೇಶವೆಂದರೆ ಈ ಜಲಪಾತ ರಸ್ತೆಯ ಪಕ್ಕಕ್ಕೆ ನೂರು ಮೀಟರ್‌ ದೂರದಲ್ಲಿದೆ. ಶಿರಸಿ ರಸ್ತೆ ಪಕ್ಕ ವಾಹನ ನಿಲುಗಡೆ ಮಾಡಿ ನೂರು ಮೀಟರ್‌ ನಡೆಯುತ್ತಲೇ ಬೃಹತ್‌ ಗಾತ್ರದ ಬಂಡೆಮೇಲಿಂದ ಧುಮುಕುವ ಈ ಜಲಪಾತವನ್ನು ಪ್ರಯಾಸವಿಲ್ಲದೆ ಕಣ್ತಂಬಿಕೊಳ್ಳಬಹುದು. ಮಾವಿನಕೊಪ್ಪ ಹೊಳೆ ಸೃಷ್ಟಿಸಿರುವ ಈ ಸುಂದರ ಜಲಪಾತದ ಮೇಲೆ ಪ್ರಪಾತದಂಥಹ ನೀರಿನ ಗುಂಡಿಯೊಂದಿದೆ.ಅದರ ಕೆಳಗೆ ಹರಿಯುವ ತುಂಬರಗೋಡು ಜಲಪಾತಚಿಕ್ಕದಾಗಿದ್ದರೂ ಸುಂದರವಾಗಿದೆ.


ಬಹುತೇಕ ಜಲಪಾತಗಳಲ್ಲಿ ಸುರಕ್ಷತೆಯ ಕಾಳಜಿವಹಿಸದಿದ್ದರೆ ಜೀವಕ್ಕೇ ಅಪಾಯ ಈ ತುಂಬರಗೋಡು ಜಲಪಾತದ ವೈಶಿಷ್ಟ್ಯವೆಂದರೆ ಇಲ್ಲಿ ಅಪಾಯವಿಲ್ಲ.ವಯಸ್ಸಿನ ಭೇದವಿಲ್ಲದೆ ಎಲ್ಲರೂ ನೋಡಿ ಆನಂದಿಸಬಹುದಾದ ಈ ಜಲಪಾತದ ಅನನ್ಯತೆ ಬಳಸಿಕೊಂಡು ಪ್ರವಾಸಿ ಆಕರ್ಷಣೆಯ ಕೇಂದ್ರ ಮಾಡುವ ಮೂಲಕ ಈ ಜಲಪಾತದ ಸೊಬಗನ್ನು ಪರಿಚಯಿಸಿ ಅದರಿಂದ ಸ್ಥಳಿಯರಿಗೆ ಉದ್ಯೋಗಾವಕಾಶಗಳನ್ನೂ ಸೃಷ್ಟಿಸಲು ಅವಕಾಶವಿದೆ. ಅಪಾಯ,ಸವಾಲುಗಳಿಲ್ಲದ ಈ ಜಲಪಾತದ ಮಳೆಗಾಲದ ನೋಟವಂತೂ ಎಂಥವರಿಗೂ ಮುದ ನೀಡುತ್ತದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *