ವಿಭೂತಿ, ನಾಗರಮಡಿ, ಗೋಲಾರಿ ಫಾಲ್ಸ್​ಗೆ ಪ್ರವಾಸಿಗರ ನಿಷೇಧ

etv comment image
Thumbnail image

ಅಪಾಯದ‌ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಜಲಪಾತಗಳು: ವಿಭೂತಿ, ನಾಗರಮಡಿ, ಗೋಲಾರಿ ಫಾಲ್ಸ್​ಗೆ ಪ್ರವಾಸಿಗರ ನಿಷೇಧ

ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಜೊತೆಗೆ ಜಿಲ್ಲೆಯಲ್ಲಿರುವ ಬಹುತೇಕ ಎಲ್ಲ ಜಲಪಾತಗಳು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ನಯನಮನೋಹರ ದೃಶ್ಯವನ್ನ ಕಟ್ಟಿಕೊಡುತ್ತಿವೆ. ಆದರೆ, ಕಾರವಾರ ತಾಲೂಕಿನ ನಾಗರಮಡಿ, ಗೋಲಾರಿ ಹಾಗೂ ಅಂಕೋಲಾ ತಾಲೂಕಿನ ವಿಭೂತಿ ಜಲಪಾತ ಸೇರಿದಂತೆ ಕೆಲವೊಂದು ಜಲಪಾತಗಳ ಬಳಿ ಸೂಕ್ತ ಸುರಕ್ಷತೆ ಇಲ್ಲದ ಹಿನ್ನೆಲೆ ಪ್ರವಾಸಿಗರು ಆಗಮಿಸದಂತೆ ನಿಷೇಧ ಹೇರಲಾಗಿದೆ.

ಕಾರವಾರ: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕರಾವಳಿಯ ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನೊಂದೆಡೆ, ಜಲಪಾತಗಳು ಮೈದುಂಬಿಕೊಂಡು ಧುಮ್ಮಿಕ್ಕುತ್ತಿವೆ. ಆದರೆ, ಈ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ನೀವೇನಾದರೂ ಉತ್ತರಕನ್ನಡಕ್ಕೆ ಪ್ರವಾಸಕ್ಕೆ ಬರಬೇಕು ಅಂದುಕೊಂಡಿದ್ದರೆ ಸದ್ಯಕ್ಕೆ ಬರದೇ ಇರೋದು ಒಳ್ಳೆಯದು.

ಜಿಲ್ಲೆಯ ಕೆಲವೊಂದು ಜಲಪಾತಗಳು ಅಪಾಯದ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವುದರಿಂದ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಹೌದು, ಮಳೆಗಾಲ ಬಂತು ಅಂದ್ರೆ ಕರಾವಳಿ ಜಿಲ್ಲೆ ಉತ್ತರಕನ್ನಡದ ಹಲವೆಡೆ ಇರುವ ಹತ್ತಾರು ಜಲಪಾತಗಳು ಮೈದುಂಬಿಕೊಳ್ಳುತ್ತವೆ. ಹಚ್ಚಹಸಿರಿನ ಪರಿಸರದ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಪಾತಗಳ ಮನಮೋಹಕ ದೃಶ್ಯಗಳನ್ನ ಕಣ್ತುಂಬಿಕೊಳ್ಳುವುದೇ ಒಂದು ರೀತಿ ಭಾಗ್ಯ.

ಹೀಗಾಗಿಯೇ, ಮಳೆಗಾಲ ಆರಂಭವಾದ ಬಳಿಕ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಯತ್ತ ಮುಖಮಾಡುತ್ತಾರೆ. ಆದರೆ, ಈ ಬಾರಿ ಹೀಗೆ ಪ್ರವಾಸಕ್ಕೆ ಬರುವವರಿಗೆ ನಿರಾಸೆಯಾಗೋದು ಖಂಡಿತ. ಏಕೆಂದರೆ, ಕೆಲವೊಂದು ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಅಪಾಯದ‌ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಜಲಪಾತಗಳು

ಕಾರವಾರ ತಾಲೂಕಿನ ನಾಗರಮಡಿ, ಗೋಲಾರಿ ಹಾಗೂ ಅಂಕೋಲಾ ತಾಲೂಕಿನ ವಿಭೂತಿ ಜಲಪಾತ ಸೇರಿದಂತೆ ಕೆಲವೊಂದು ಜಲಪಾತಗಳಿಗೆ ಪ್ರವಾಸಿಗರು ಆಗಮಿಸದಂತೆ ನಿಷೇಧ ಹೇರಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದು, ಜಲಪಾತಗಳು ಅಪಾಯಕಾರಿ ರೀತಿಯಲ್ಲಿ ತುಂಬಿ ಹರಿಯುತ್ತಿರುವ ಹಿನ್ನೆಲೆ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಮಳೆಗಾಲದ ಸಂದರ್ಭದಲ್ಲಿ ಜಲಪಾತಗಳು ನೋಡಲು ಎಷ್ಟು ಸುಂದರವೋ ಅಷ್ಟೇ ಅಪಾಯಕಾರಿಯೂ ಆಗಿರುತ್ತವೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜಲಪಾತದಿಂದ ಧುಮ್ಮಿಕ್ಕುವ ನೀರಿನ ವೇಗ ಸಹ ಹೆಚ್ಚಿಗೆ ಇದ್ದು ಇಂತಹ ಸಂದರ್ಭದಲ್ಲಿ ಮೋಜು ಮಸ್ತಿಗೆ ತೆರಳುವುದು ಅಪಾಯಕ್ಕೆ ಆಹ್ವಾನ ನೀಡಿದಂತಾಗಲಿದೆ. ಅಲ್ಲದೇ ಪ್ರವಾಸಿಗರು ಧುಮ್ಮಿಕ್ಕುವ ಜಲಪಾತದಲ್ಲಿ ಈಜಾಡಲು ತೆರಳುವುದು, ಸೆಲ್ಫಿ ತೆಗೆದುಕೊಳ್ಳಲು ಮುಗಿಬೀಳುವುದು ಸೇರಿದಂತೆ ಅಪಾಯವನ್ನ ಲೆಕ್ಕಿಸದೇ ವರ್ತಿಸುತ್ತಾರೆ.

ಕಳೆದ ಕೆಲ ವರ್ಷಗಳ ಹಿಂದೆ ಕಾರವಾರದ ನಾಗರಮಡಿ ಜಲಪಾತದ ಬಳಿಯ ನೀರಿನಲ್ಲಿ ಪ್ರವಾಸಿಗರು ಆಟವಾಡುತ್ತಿದ್ದ ವೇಳೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಏಕಾಏಕಿ ನೀರಿನ ಹರಿವು ಹೆಚ್ಚಾಗಿ ಐದು ಮಂದಿ ಕೊಚ್ಚಿಹೋಗಿ ಸಾವನ್ನಪ್ಪಿದ್ದರು. ಹೀಗಾಗಿ, ಮಳೆಗಾಲದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಲಪಾತಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಆದರೂ ಸಹ ಸಾಕಷ್ಟು ಮಂದಿ ಪ್ರವಾಸಿಗರು ಜಲಪಾತದ ಬಳಿ ಬಂದು ನೋಡಲಾಗದೇ ವಾಪಸ್​ ಆಗುತ್ತಿದ್ದಾರೆ.

ಇನ್ನು ಕಡಲತೀರಗಳಲ್ಲಿ ಆಳೆತ್ತರದ ಅಲೆಗಳು ಅಪ್ಪಳಿಸುವುದರಿಂದ ಬೀಚ್‌ಗಳೂ ಸಹ ಅಪಾಯಕಾರಿಯಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಕಡಲತೀರದಲ್ಲಿ ಕೆಂಪು ಬಾವುಟ ಹಾಕಿ ಸಿಬ್ಬಂದಿ ನಿಯೋಜನೆ ಮಾಡುವ ಮೂಲಕ ಎಚ್ಚರಿಸುವ ಕೆಲಸ ಮಾಡುತ್ತಿದ್ದು, ಮಳೆಗಾಲ ಮುಗಿಯುವವರೆಗೆ ಪ್ರವಾಸಿಗರು ಕಡಲತೀರ ಹಾಗೂ ಜಲಪಾತಗಳಿಂದ ಕೊಂಚ ದೂರವಿರೋದೇ ಉತ್ತಮ ಎನ್ನುವಂತಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *