gst-ಆಮ್‌ ಆದ್ಮಿ ಪ್ರತಿಭಟನೆ,ಮನವಿ ಅರ್ಪಣೆ

ಹೆಚ್ಚಿಸಿದ ಜಿ ಎಸ್ ಟಿ ಹಿಂಪಡೆಯುವಂತೆ ಪಟ್ಟಣದಲ್ಲಿ ಆಮ್ ಆದ್ಮಿ ಪಾರ್ಟಿ ಯವರು ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.


ಆಮ್ ಆದ್ಮಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ವೀರಭದ್ರ ನಾಯ್ಕ, , ಮಾತನಾಡಿ
ಇಂದು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸುತ್ತಿದೆ. ಬಿಜೆಪಿ ಪಕ್ಷದ ಶಾಸಕರು ಹಾಗೂ ಸಂಸದರು ದೇಶದ ಸಂಪತ್ತನ್ನು ಲೂಟಿ ಹೊಡೆದಿರುವ ಪರಿಣಾಮ ಜನಸಾಮಾನ್ಯರ ಮೇಲೆ ಟ್ಯಾಕ್ಸ್ ಬರೆ ಎಳೆದು ಕೇಂದ್ರ ಸರ್ಕಾರ ಜಿ ಎಸ್ ಟಿ ರೂಪದಲ್ಲಿ ಟ್ಯಾಕ್ಸ್ ವಸೂಲಿಗೆ ಮುಂದಾಗಿದೆ, ಹಾಗಾಗಿ ನಮ್ಮ ಆಮ್ ಆದ್ಮಿ ಪಕ್ಷ ಈ ದೇಶದಾದ್ಯಂತ ಪ್ರತಿಭಟನೆ ಮಾಡಬೇಕು, ಪ್ರತಿ ತಾಲೂಕುಗಳಲ್ಲಿ ಈ ಕುರಿತು ಪ್ರತಿಭಟಿಸಬೇಕೆಂದು ಹೊರಡಿಸಿದ ಆದೇಶದಂತೆ ನಾವು ಇಂದಿನ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ
ಆಡಳಿತರೂಢ ಬಿಜೆಪಿ ಸರ್ಕಾರ ಜನಸಾಮಾನ್ಯರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಚುನಾವಣೆ ವೇಳೆಯಲ್ಲಿ ನೀಡಿದ ಆಶ್ವಾಸನೆಯನ್ನು ಈಡೇರಿಸಬೇಕು ಹಾಗೂ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು ಇಲ್ಲವಾದಲ್ಲಿ ಮುಂಬರುವ ಚುನಾವಣೆಯಲ್ಲಿ ಜನಸಾಮಾನ್ಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ವಿವಿಧ ಯೋಜನೆಗಳಡಿ ರೈತರಿಗೆ ಭರ್ಜರಿ ಸಬ್ಸಿಡಿ.. ಈಗಲೇ ಅರ್ಜಿ ಸಲ್ಲಿಸಿ


ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಕಾಶ್ ಅಣ್ಣಪ್ಪ ಕೊಂಡ್ಲಿ ಮಾತನಾಡಿ
ಸಾಮಾನ್ಯ ಜನರು ಬಳಸುವ ಜೀವನ ಅವಶ್ಯಕ ವಸ್ತುಗಳ ಮೇಲೆ ಟ್ಯಾಕ್ಸ್ ಹಾಕುವ ಬದಲು ಕೇಂದ್ರ ದೊಡ್ಡ ದೊಡ್ಡ ವ್ಯಾಪಾರ ವ್ಯವಹಾರ ದ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಿ. ಅದು ಕೇಂದ್ರ ಸರ್ಕಾರದಿಂದ ಸಾಧ್ಯವಿಲ್ಲ ಯಾಕೆಂದರೆ ಅವರು ಶ್ರೀಮಂತ ಜನರು ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಾರೆ ಹಾಲು ಮೊಸರು ಸೇರಿದಂತೆ ಜೀವನವಶ್ಯಕ ವಸ್ತುಗಳ ಮೇಲೆ ಸರ್ಕಾರ 18% ವರೆಗೆ ತೆರಿಗೆ ವಿಧಿಸಿದೆ ಇದರಿಂದ ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ತಕ್ಷಣ ಕೇಂದ್ರ ಸರ್ಕಾರ ಜೀವನ ಅವಶ್ಯಕ ವಸ್ತುಗಳ ಮೇಲೆ ವಿಧಿಸಿರುವ ತೆರಿಗೆಯನ್ನು ಹಿಂಪಡೆಯಬೇಕು ಎಂದರು. ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಲಕ್ಷ್ಮಣ ನಾಯ್ಕ್ ಪ್ರಮುಖರಾದ ಲೋಕೇಶ್ ಹೆಗಡೆ, ಹನೀಫ್ ಪಕ್ಷದ ಕಾರ್ಯಕರ್ತರು ರೈತ ಸಂಘದ ಪ್ರಮುಖರು ಉಪಸ್ಥಿತರಿದ್ದರು.

*

.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *