ಕಸ್ತೂರಿ ರಂಗನ ವರದಿ.. ಉ.ಕನ್ನಡ ಜಿಲ್ಲೆ ಅಭಿವೃದ್ಧಿಗೆ ಮಾರಕ, ಅರಣ್ಯವಾಸಿಗಳಿಗೆ ಆತಂಕ

ಕಸ್ತೂರಿ ರಂಗನ್ ವರದಿಯಂತೆ ಉತ್ತರ ಕನ್ನಡ ಜಿಲ್ಲೆಯ ಶೇ. 35 ಭಾಗ ಸೂಕ್ಷ್ಮ ಪ್ರದೇಶ- ಜಿಲ್ಲೆಯ ಅಭಿವೃದ್ಧಿ ಕುಂಠಿತ- ಸಾರ್ವಜನಿಕರ ಆತಂಕ

ಶಿರಸಿ(ಉತ್ತರ ಕನ್ನಡ): ಕಸ್ತೂರಿ ರಂಗನ ವರದಿ ಕರಡು ಅಧಿಸೂಚನೆ ಹಾಗೂ ಶರಾವತಿ ಅಭಯಾರಣ್ಯ ಪರಿಸರ ಅತಿ ಸೂಕ್ಷ್ಮ ಪ್ರದೇಶ ನಿಗದಿಗೊಳಿಸಲು ಸುಪ್ರೀಂಕೋರ್ಟ್​​​​ನಿಂದ ಆದೇಶ ಬಂದಿದೆ. ಇದು ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗುವುದಲ್ಲದೇ, ಅರಣ್ಯ ಭೂಮಿ ಅವಲಂಭಿತವಾಗಿರುವ ಅರಣ್ಯವಾಸಿಗಳಿಗೆ ಆತಂಕ ಉಂಟಾಗಿದೆ.

ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಕಸ್ತೂರಿ ರಂಗನ್​ ಅಧ್ಯಕ್ಷತೆಯಲ್ಲಿ ವರದಿ ತಯಾರಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯಲ್ಲಿ ಕರ್ನಾಟಕದ ಹತ್ತು ಜಿಲ್ಲೆಗಳ 1,597 ಹಳ್ಳಿಗಳು ಒಳಪಡುತ್ತವೆ. ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ 704 ಹಳ್ಳಿಗಳು ಸೇರ್ಪಡೆಗೊಂಡಿವೆ.

ಇದು ಜಿಲ್ಲೆಯ ಸಂಪೂರ್ಣ ಜನಜೀವನದ ವ್ಯವಸ್ಥೆಯ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುವಂತಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ, ರಸ್ತೆ, ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿರ್ಬಂಧಿಸಿದ ಕೈಗಾರಿಕೆಗಳಿಗೆ ಕಡಿವಾಣ, ಆಧುನಿಕ ಪ್ರವಾಸೋದ್ಯಮಕ್ಕೆ ಮಾರಕ, ಟೌನ್‌ಶಿಪ್​ ಮತ್ತು ಬಹುಮಡಿಗೆ ಕಟ್ಟಡಗಳಿಗೆ ನಿರ್ಬಂಧ , ವಾಣಿಜ್ಯಕರಣ ಮುಂತಾದ ನಿರ್ಬಂಧ ಗ್ರಾಮಸ್ಥರ ಜೀವನ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೇ ಅಭಿವೃದ್ಧಿಗೆ ಮಾರಕವಾಗಲಿದೆ.

https://c28674858bc528d6d7e59d1b60670622.safeframe.googlesyndication.com/safeframe/1-0-38/html/container.html

ಯಥಾಸ್ಥಿತಿಯಲ್ಲಿ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ : ಈ ಬೆಳವಣಿಗೆ ಬಗ್ಗೆ ಮಾತನಾಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಕಸ್ತೂರಿ ರಂಗನ್ ವರದಿಯ ಬಗ್ಗೆ ಮಲೆನಾಡು ಭಾಗದ ಶಾಸಕರುಗಳು ಹಾಗೂ ಸಚಿವರುಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಜೊತೆ ಸೋಮವಾರವಷ್ಟೇ ಸಭೆ ನಡೆಸಿದ್ದೇವೆ. ಇದು ಕೇಂದ್ರ ಸರ್ಕಾರದಿಂದ ಜಾರಿಗೆ ಬಂದ ಯೋಜನೆಯಾಗಿದೆ. ಆದರೂ ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.

ಕಸ್ತೂರಿ ರಂಗನ ವರದಿಗೆ ಉತ್ತರ ಕನ್ನಡದಲ್ಲಿ ವಿರೋಧ

ಈಗಿರುವ ಅರಣ್ಯ ಸಮಸ್ಯೆಗಳೇ ಸಾಕಾಗಿದೆ. ಮುಂದಿನ ಪೀಳಿಗೆಗೆ ಅರಣ್ಯ ಸಂಪತ್ತನ್ನು ನಾವು ಇಟ್ಟು ಹೋಗಬೇಕು ನಿಜ ಆದರೆ ಇಲ್ಲಿನ ಜನರು ಸಹ ಬದುಕಬೇಕು. ತೂಗುಗತ್ತಿಯನ್ನು ತಲೆಮೇಲೆ ಇಟ್ಟು ಕೊಂಡು ಜೀವನ ನಡೆಸಲು ಸಾಧ್ಯವಿಲ್ಲ. ಯಥಾಸ್ಥಿತಿಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಉತ್ತರ ಕನ್ನಡ ಜಿಲ್ಲೆಯ ಜನಜೀವನಕ್ಕೆ ಅಭಿವೃದ್ಧಿಗೆ ಪೂರಕವಾಗುವಂತಹ ಅಂಶಗಳನ್ನು ಈಗಾಗಲೇ ತಿಳಿಸಲಾಗಿದೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮನವರಿಕೆ ಮಾಡುತ್ತೇವೆ ಎಂದು ಹೇಳಿದರು. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *