ಲೋಕಲ್ news -ಬ್ಯಾಂಕ್‌ ಆಫ್‌ ಬರೋಡಾ ದಿಂದ ನೀರು ಶುದ್ಧೀಕರಣ ಯಂತ್ರದ ಕೊಡುಗೆ

ತಾಲೂಕಿನ ಹಸುವಂತೆ ಮನ್ಮನೆ ಭಾಗದ ವಿದ್ಯಾರ್ಥಿಗಳಿಗೆ ಎದುರಿಸು ತ್ತಿರುವ ಬಸ್ ಸಮಸ್ಯೆ ಸರಿಪಡಿಸುವಂತೆ ಬ್ಲಾಕ್ ಕಾಂಗ್ರೆಸ್ ಹಾಗೂ ಸ್ಥಳೀಯ ಸಾರ್ವಜನಿಕ ರು ಸಿದ್ದಾಪುರ – ಸಾಗರ ಮುಖ್ಯ ರಸ್ತೆಯ ಹಸುವಂತೆ ಬಸ್ ನಿಲ್ದಾಣ ದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು ಈ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮಾತನಾಡಿ
ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಹೋಗಲು ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ಪಾಸ್ ನೀಡಿ ಬಸ್ ಬಿಡದೆ ಇದ್ದಲ್ಲಿ ಏನು ಪ್ರಯೋಜನ ಸಮಯಕ್ಕೆ ಸರಿಯಾಗಿ ಬಿಡಲಾಗದಿದ್ದಲ್ಲಿ ಬಸ್ ಪಾಸನ್ನು ರದ್ದುಗೊಳಿಸಿಬಿಡಿ. ನಿಮಗೆ ಕಲೆಕ್ಷನ್ನೆ ಮುಖ್ಯವಾಗಿದ್ದಲ್ಲಿ ಬಸ್ ಪಾಸ್ ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಟಿಕೆಟ್ ಮಾಡಿಬಿಡಿ
ಜನರ ಕಷ್ಟ ಆಲಿಸಲು ನಮ್ಮ ಜಿಲ್ಲೆಯಲ್ಲಿ ಎಂಎಲ್ಎ ಎಂಪಿಗಳು ಇದ್ದು ಇಲ್ಲದಂತಾಗಿದ್ದಾರೆ. ತಾಲೂಕ ಪಂಚಾಯತ್ ಜಿಲ್ಲಾ ಪಂಚಾಯತ್ ವ್ಯವಸ್ಥೆ ಇಲ್ಲವಾಗಿದೆ ಆಡಳಿತರೂಢ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶ ಮಾಡಿದೆ. ಜನರ ಧ್ವನಿಯನ್ನು ಅಡಗಿಸಿಬಿಟ್ಟಿದೆ. ಜನರು ತಮ್ಮ ಸಂಕಷ್ಟಗಳನ್ನು ಯಾರ ಬಳಿ ಹೇಳಿಕೊಳ್ಳಬೇಕಾಗಿದೆ ಎಂದು ತಿಳಿಯದಂತಾಗಿದೆ ಎಂದು ಹೇಳಿದ ಅವರು


ಈ ಮೊದಲು ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಗಳಿಗೆ ಎಲ್ಲಾ ಅಧಿಕಾರಿಗಳು ಬರುತ್ತಿದ್ದರು ಸಭೆಯಲ್ಲಿ ಅಧಿಕಾರಿಗಳಿಗೆ ಸಮಸ್ಯೆ ಕುರಿತು ಹೇಳಿದಾಗ ಸಮಸ್ಯೆ ಬಗೆಹರಿಯುತ್ತಿತ್ತು ಆದರೆ ಇಂದು ತಾಲೂಕ ಪಂಚಾಯತ್ ಹಾಗು ಜಿಲ್ಲಾ ಪಂಚಾಯತ್ ಗಳೇ ಇಲ್ಲದೆ ಇರುವುದರಿಂದ ಸಮಸ್ಯೆಯನ್ನು ಯಾರ ಹತ್ತಿರ ಹೇಳಿಕೊಳ್ಳೋಣ ಈಗಿನ 40% ಸರ್ಕಾರ ಮಾಡಿದ್ದೆ ದರ್ಬಾರ್ ಆಗಿದೆ. ಪ್ರತಿದಿನ ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಅಚ್ಚೆ ದಿನ್ ತರುತ್ತೇವೆ ಎಂದು ಹೇಳಿದ್ದರು. ಆದರೆ ಈಗ ರಸ್ತೆಗಳು ಸರಿ ಇಲ್ಲ ರೇಷನ್ ಕಾರ್ಡ್ ಸಿಗುತ್ತಿಲ್ಲ, ಬಸ್ ಪಾಸಿದ್ದು ಮಕ್ಕಳಿಗೆ ಓಡಾಡಲು ಆಗುತ್ತಿಲ್ಲ ತಿನ್ನೋ ಅನ್ನ ಮೊಸರಿನ ಮೇಲೆ ಜಿ ಎಸ್ ಟಿ ಹಾಕಿ ಜನ ಸಾಮಾನ್ಯರನ್ನು ಸಂಕಷ್ಟ ಕ್ಕೆ ತಳ್ಳುತ್ತಿದೆ ಎಂದರು.


ಪೊಲೀಸರು ಪ್ರತಿಭಟನೆ ತಡೆಯಲು ಮುಂದಾದರು ಸಹ ಪ್ರತಿಭಟನೆಕಾರರನ್ನು ಮನವೊಲಿಸಲು ಸಾಧ್ಯವಾಗಲಿಲ್ಲ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ರಸ್ತೆ ತಡೆದು ಪ್ರತಿಭಟನೆ ನಡೆಸಿ ಡಿಪೋ ವ್ಯವಸ್ಥಾಪಕರು ಬರುವವರೆಗೂ ಇಲ್ಲೇ ಕೂರುತ್ತೇವೆ ಎಂದು ಬಿಗಿ ಪಟ್ಟು ಹಿಡಿದು ಕೇಂದ್ರ ರಾಜ್ಯ ಸರಕಾರ ದ ವಿರುದ್ಧ ಘೋಷಣೆ ಕೂಗಿದರು.

ತಹಸೀಲ್ದಾರ್ ಸಂತೋಷ ಭಂಡಾರಿ ಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನ ಕಾರರ ಸಮಸ್ಯೆ ಆಲಿಸಿ ನಿಯಂತ್ರಣಾಧಿಕಾರಿಗಳ ಜೊತೆ ಮಾತನಾಡಿ ಬಸ್ ಸಮಸ್ಯೆ ಸರಿಪಡಿಸಿ ವಿದ್ಯಾರ್ಥಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು ತಹಸೀಲ್ದಾರ್ ರವರ ಭರವಸೆ ನಂತರ ಪ್ರತಿಭಣನಕಾರರು ಪ್ರತಿಭಟನೆ ಕೈ ಬಿಟ್ಟರು ನಂತರ ಸ್ಥಳಕ್ಕೆ ಘಟಕ ವ್ಯವಸ್ಥಾಪಕ ಸರ್ವೇಶ್ ಭೇಟಿ ನೀಡಿ ವ್ಯವಸ್ಥೆ ಸರಿಪಡಿಸುವುದಾಗಿ ಲಿಖಿತ ಭರವಸೆ ನೀಡಿದರು.

ಅನಾಥಾಶ್ರಮದಲ್ಲಿ ಹುಟ್ಟುಹಬ್ಬ ಆಚರಣೆ- ಸಿದ್ದಾಪುರ ತಾಲೂಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ನಾಯ್ಕ್ ಹೊಸೂರ್ ಅವರು ತಮ್ಮ ಮಗನಾದ ರಿಷಿಕ್ ನ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ಅನಾಥಾಶ್ರಮದಲ್ಲಿ ಆಶ್ರಮವಾಸಿಗಳಿಗೆ ಊಟ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು
ತಾಲೂಕಿನ ಮುಗದೂ ರಿನಲ್ಲಿರುವ ಪುನೀತ್ ರಾಜಕುಮಾರ್ ಅನಾಥಾಶ್ರಮದಲ್ಲಿ ಆಶ್ರಮವಾಸಿ ಗಳೊಂದಿಗೆ ಕೇಕ್ ಕತ್ತರಿಸಿ ಸಿಹಿ ವಿತರಣೆ ಮಾಡಿ ಊಟ ನೀಡಿ ವಿಶೇಷವಾಗಿ ಆಚರಿಸಿದರು ಈ ಸಂದರ್ಭದಲ್ಲಿ ಕುಟುಂಬಸ್ಥರಾದ ಸದಾನಂದ, ಸುಶೀಲ, ಸಂತೋಷ, ಶಶಿ,ಅಮೋಘ, ಸುತನ ಮಾನ್ಯ ಸುನಿಲ್ ಮುಂತಾದವರು ಉಪಸ್ಥಿತರಿದ್ದರು.
ಬ್ಯಾಂಕ್ ಆಪ್ baroda 115 ನೇ ವಾರ್ಷಿಕೋತ್ಸವದ ನಿಮಿತ್ತ bob ಸಿದ್ದಾಪುರ ಶಾಖೆ ಯಲ್ಲಿ ವಾರ್ಷಿಕೋತ್ಸವ ಆಚರಣೆ ನಡೆಯಿತು. ಇದರ ನಿಮಿತ್ತ ಮುರುಘರಾಜೇಂದ್ರ ಅಂಧರ ಶಾಲೆಗೆ ಬ್ಯಾಂಕ್ ನಿಂದ water furifier ಕೊಡುಗೆ (ದೇಣಿಗೆ ) ನೀಡಲಾಯಿತು ಎಂದು ಶಾಖಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *