local news -2- ವಿಧಾನಸಭಾ ಅಧ್ಯಕ್ಷರ ತಾರತಮ್ಯ ನೀತಿಗೆ ಕಾಂಗ್ರೆಸ್‌ ವಿರೋಧ

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೆರೆ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತಿದ್ದಾರೆ. ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ಆರೋಪಿಸಿದರು.
ಅವರು ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ತಾರೇಸರದಲ್ಲಿ ಹೊಳೆಯಲ್ಲಿ ಜಾರಿ ಮ್ರತಪಟ್ಟಿರವ ಪರಮೇಶ್ವರ ಹೆಗಡೆ ಗೆ ತಕ್ಷಣ ಪರಿಹಾರ ನೀಡಿದ್ದಾರೆ ಆದರೆ ಕಳೆದ ವರ್ಷ ಮಳೆಗಾಲದಲ್ಲಿ ಹಾರ್ಸಿಕಟ್ಟಾದ ನಾಗರಾಜ ಮಡಿವಾಳ ಮಗಳು ಸಾವಿಗಿಡಾಗಿದ್ದಕ್ಕೆ ಇನ್ನೂ ಪರಿಹಾರ ಒದಗಿಸಿಲ್ಲ.ಇದು ತಾರತಮ್ಯ ನೀತಿ ತೋರಿಸುತ್ತದೆ ಮತ್ತು ಜಾತಿಯತೆ ಯನ್ನು ತೋರಿಸುತ್ತಿದೆ. ಜನಪ್ರತಿನಿದಿಗಳಾದವರು ಜಾತಿ ಮತ ಪಂತವಿಲ್ಲದೆ ಅಧಿಕಾರಿಗಳಿಗೆ ಸೂಚನೆ ನೀಡಿ ಮಾನವೀಯತೆ ದ್ರಷ್ಟಿಯಿಂದ ಪರಿಹಾರ ಒದಗಿಸಿಕೊಡಬೇಕು. ಜವಾಬ್ದಾರಿ ಸ್ಥಾನ ದಲ್ಲಿರುವವರು ತಮ್ಮ ಸ್ಥಾನವರಿತು ಕೆಲಸ ಮಾಡಬೇಕು. ಒಬ್ಬರಿಗೊಂದು ಮತ್ತೋಬ್ಬರಿಗೊಂದು ರೀತಿ ಮಾಡಬಾರದು. ಕೂಡಲೇ ನಾಗರಾಜ ಮಡಿವಾಳ ಕುಟುಂಬ ಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.


ತಾಲೂಕಿನಾದ್ಯಂತ ಅಂಗಡಿಗಳಲ್ಲಿ ಅನಧಿಕೃತ ವಾಗಿ ಸರಾಯಿ ಮಾರಾಟ ನಡೆಯುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಭೀಮಣ್ಣ ಆಯ್ಕೆ ಯಾದರೇ ಹಳ್ಳಿ ಹಳ್ಳಿಗಳಲ್ಲಿ ಸರಾಯಿ ಮಾರಾಟ ಮಾಡತಾರೇ ಅಂತ ಹೇಳಿ ಈಗ ಏನು ಮಾಡ್ತಿದ್ದಾರೆ. ಇದನ್ನು ನಿಲ್ಲಿಸದಿದ್ದರೆ ಸಭಾಧ್ಯಕ್ಷರ ಮನೆ ಎದುರೇ ಧರಣಿ ನಡೆಸುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಾಲಕ್ರಷ್ಣ ನಾಯ್ಕ ಕೋಲಸಿರ್ಸಿ, ನಾಸಿರ ವಲ್ಲಿ ಖಾನ, ಸುರೇಂದ್ರ ಗೌಡ, ಸಂತೋಷ ಹಾರ್ಸಿಕಟ್ಟಾ, ಮುನಾವರ ಗುರ್ಖಾರ, ಗಂಗಾಧರ ಮಡಿವಾಳ, ಸಾವೇರ್ ಡಿ ಸಿಲ್ವಾ ಉಪಸ್ಥಿತ ರಿದ್ದರು.

https://www.youtube.com/channel/UCTvZUkLGbidUHKd8BHTMJbg

ಸಿದ್ದಾಪುರ: ತಾಲೂಕು ಪಂಚಾಯತ್ ಸಭಾಭವನದಲ್ಲಿ ಉದ್ಯಮ ವಿಕಾಸ ಪಾಕ್ಷಿಕ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರ ಉದ್ಘಾಟಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರಾವ್ ಮಾತನಾಡಿ ಹೆಣ್ಣು ಮನಸ್ಸು ಮಾಡಿದರೆ ಸಾಧಿಸುತ್ತಾಳೆ, ಶ್ರದ್ಧೆ ಯಿಂದ ನಿರಂತರವಾಗಿ ಪ್ರಯತ್ನ ಪಟ್ಟರೆ ಸಮಾಜದಲ್ಲಿ ಮುಂದೆ ಬರಲು ಸಾಧ್ಯ. ತರಬೇತಿ ಯ ಲಾಭ ಪಡೆದುಕೊಳ್ಳಿ ಎಂದರು.
ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಶಿವಶಂಕರ ಎನ್ ಕೆ ಮಾತನಾಡಿ ಬ್ಯಾಂಕ್ ನಲ್ಲಿರುವ ಯೋಜನೆಗಳು, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ, ಹಾಗೂ ಬ್ಯಾಂಕ್ ನಲ್ಲಿ ಇರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕುಮಟಾ ಆರ್ ಸೆಟ್ಟಿಯ ಗೌರೀಶ್ ನಾಯ್ಕ ಮಾತನಾಡಿ ಉದ್ಯೋಗ ಇಲ್ಲದಿದ್ದರೆ ಸಮಾಜದಲ್ಲಿ ಬೆಲೆ ಇಲ್ಲ, ಸರಕಾರ ಹಲವಾರು ಅವಕಾಶ ಮಾಡಿ ಕೊಟ್ಟು ತರಭೇತಿ ಹಾಗೂ ಸಾಲಸೌಲಭ್ಯ ನೀಡುತಿದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ತಾಲೂಕು ಕಾರ್ಯ ಕ್ರಮ ವ್ಯವಸ್ಥಾಪಕ ನರ್ತನಕುಮಾರ ,ವಲಯ ಮೇಲ್ವಿಚಾರಕಿಯರಾದ ಮಾಲತಿ ನಾಯ್ಕ,ಉಷಾ, ಉಪಸ್ಥಿತರಿದ್ದರು.
ಮಾಲತಿ ನಾಯ್ಕ ಬೇಡ್ಕಣಿ ಸ್ವಾಗತಿಸಿ ನಿರೂಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *