local news -2- ವಿಧಾನಸಭಾ ಅಧ್ಯಕ್ಷರ ತಾರತಮ್ಯ ನೀತಿಗೆ ಕಾಂಗ್ರೆಸ್‌ ವಿರೋಧ

ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೆರೆ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತಿದ್ದಾರೆ. ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ಆರೋಪಿಸಿದರು.
ಅವರು ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ತಾರೇಸರದಲ್ಲಿ ಹೊಳೆಯಲ್ಲಿ ಜಾರಿ ಮ್ರತಪಟ್ಟಿರವ ಪರಮೇಶ್ವರ ಹೆಗಡೆ ಗೆ ತಕ್ಷಣ ಪರಿಹಾರ ನೀಡಿದ್ದಾರೆ ಆದರೆ ಕಳೆದ ವರ್ಷ ಮಳೆಗಾಲದಲ್ಲಿ ಹಾರ್ಸಿಕಟ್ಟಾದ ನಾಗರಾಜ ಮಡಿವಾಳ ಮಗಳು ಸಾವಿಗಿಡಾಗಿದ್ದಕ್ಕೆ ಇನ್ನೂ ಪರಿಹಾರ ಒದಗಿಸಿಲ್ಲ.ಇದು ತಾರತಮ್ಯ ನೀತಿ ತೋರಿಸುತ್ತದೆ ಮತ್ತು ಜಾತಿಯತೆ ಯನ್ನು ತೋರಿಸುತ್ತಿದೆ. ಜನಪ್ರತಿನಿದಿಗಳಾದವರು ಜಾತಿ ಮತ ಪಂತವಿಲ್ಲದೆ ಅಧಿಕಾರಿಗಳಿಗೆ ಸೂಚನೆ ನೀಡಿ ಮಾನವೀಯತೆ ದ್ರಷ್ಟಿಯಿಂದ ಪರಿಹಾರ ಒದಗಿಸಿಕೊಡಬೇಕು. ಜವಾಬ್ದಾರಿ ಸ್ಥಾನ ದಲ್ಲಿರುವವರು ತಮ್ಮ ಸ್ಥಾನವರಿತು ಕೆಲಸ ಮಾಡಬೇಕು. ಒಬ್ಬರಿಗೊಂದು ಮತ್ತೋಬ್ಬರಿಗೊಂದು ರೀತಿ ಮಾಡಬಾರದು. ಕೂಡಲೇ ನಾಗರಾಜ ಮಡಿವಾಳ ಕುಟುಂಬ ಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.


ತಾಲೂಕಿನಾದ್ಯಂತ ಅಂಗಡಿಗಳಲ್ಲಿ ಅನಧಿಕೃತ ವಾಗಿ ಸರಾಯಿ ಮಾರಾಟ ನಡೆಯುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಭೀಮಣ್ಣ ಆಯ್ಕೆ ಯಾದರೇ ಹಳ್ಳಿ ಹಳ್ಳಿಗಳಲ್ಲಿ ಸರಾಯಿ ಮಾರಾಟ ಮಾಡತಾರೇ ಅಂತ ಹೇಳಿ ಈಗ ಏನು ಮಾಡ್ತಿದ್ದಾರೆ. ಇದನ್ನು ನಿಲ್ಲಿಸದಿದ್ದರೆ ಸಭಾಧ್ಯಕ್ಷರ ಮನೆ ಎದುರೇ ಧರಣಿ ನಡೆಸುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಾಲಕ್ರಷ್ಣ ನಾಯ್ಕ ಕೋಲಸಿರ್ಸಿ, ನಾಸಿರ ವಲ್ಲಿ ಖಾನ, ಸುರೇಂದ್ರ ಗೌಡ, ಸಂತೋಷ ಹಾರ್ಸಿಕಟ್ಟಾ, ಮುನಾವರ ಗುರ್ಖಾರ, ಗಂಗಾಧರ ಮಡಿವಾಳ, ಸಾವೇರ್ ಡಿ ಸಿಲ್ವಾ ಉಪಸ್ಥಿತ ರಿದ್ದರು.

https://www.youtube.com/channel/UCTvZUkLGbidUHKd8BHTMJbg

ಸಿದ್ದಾಪುರ: ತಾಲೂಕು ಪಂಚಾಯತ್ ಸಭಾಭವನದಲ್ಲಿ ಉದ್ಯಮ ವಿಕಾಸ ಪಾಕ್ಷಿಕ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರ ಉದ್ಘಾಟಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರಾವ್ ಮಾತನಾಡಿ ಹೆಣ್ಣು ಮನಸ್ಸು ಮಾಡಿದರೆ ಸಾಧಿಸುತ್ತಾಳೆ, ಶ್ರದ್ಧೆ ಯಿಂದ ನಿರಂತರವಾಗಿ ಪ್ರಯತ್ನ ಪಟ್ಟರೆ ಸಮಾಜದಲ್ಲಿ ಮುಂದೆ ಬರಲು ಸಾಧ್ಯ. ತರಬೇತಿ ಯ ಲಾಭ ಪಡೆದುಕೊಳ್ಳಿ ಎಂದರು.
ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಶಿವಶಂಕರ ಎನ್ ಕೆ ಮಾತನಾಡಿ ಬ್ಯಾಂಕ್ ನಲ್ಲಿರುವ ಯೋಜನೆಗಳು, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ, ಹಾಗೂ ಬ್ಯಾಂಕ್ ನಲ್ಲಿ ಇರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕುಮಟಾ ಆರ್ ಸೆಟ್ಟಿಯ ಗೌರೀಶ್ ನಾಯ್ಕ ಮಾತನಾಡಿ ಉದ್ಯೋಗ ಇಲ್ಲದಿದ್ದರೆ ಸಮಾಜದಲ್ಲಿ ಬೆಲೆ ಇಲ್ಲ, ಸರಕಾರ ಹಲವಾರು ಅವಕಾಶ ಮಾಡಿ ಕೊಟ್ಟು ತರಭೇತಿ ಹಾಗೂ ಸಾಲಸೌಲಭ್ಯ ನೀಡುತಿದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ತಾಲೂಕು ಕಾರ್ಯ ಕ್ರಮ ವ್ಯವಸ್ಥಾಪಕ ನರ್ತನಕುಮಾರ ,ವಲಯ ಮೇಲ್ವಿಚಾರಕಿಯರಾದ ಮಾಲತಿ ನಾಯ್ಕ,ಉಷಾ, ಉಪಸ್ಥಿತರಿದ್ದರು.
ಮಾಲತಿ ನಾಯ್ಕ ಬೇಡ್ಕಣಿ ಸ್ವಾಗತಿಸಿ ನಿರೂಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *