ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.!

ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಂಡ ಉತ್ತರ ಕನ್ನಡ ಜನತೆ

“ಉತ್ತರ ಕನ್ನಡ” ಜಿಲ್ಲೆಗೆ ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.!

ಬೆಂಗಳೂರು: ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆಗಾಗಿ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ಹಾಗೂ ಟ್ವೀಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಹೈಟೆಕ್ ಆಸ್ಪತ್ರೆ ನಿರ್ಮಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸುಸಜ್ಜಿತ ಆಸ್ಪತ್ರೆಗಾಗಿ ಇಂದು ಟ್ವಿಟರ್ ಅಭಿಯಾನ- ಉತ್ತರ ಕನ್ನಡ ಜಿಲ್ಲೆಯ ಜನರಿಂದ ಹೋರಾಟಕ್ಕೆ ಮುನ್ನುಡಿ- ಸಂಜೆ 5 ಗಂಟೆಗೆ ಏಕಕಾಲಕ್ಕೆ ಒಟ್ಟಾಗಿ WeNeedEmergencyHospitalInUttarakannada ಅಭಿಯಾನ ಶುರು

ಕಾರವಾರ(ಉತ್ತರ ಕನ್ನಡ): ಹಲವು ಪ್ರವಾಸಿ ತಾಣಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಅವಘಡಗಳು ಸಂಭವಿಸುತ್ತಿರುತ್ತವೆ. ಆದರೆ ಇಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲ. ಈ ನಿಟ್ಟಿನಲ್ಲಿ ಇದೀಗ ಮತ್ತೆ ಜಿಲ್ಲೆಯ ಜನತೆ ಒಟ್ಟಾಗಿ ಸುಸಜ್ಜಿತ ಆಸ್ಪತ್ರೆಗಾಗಿ ವಿಭಿನ್ನ ಅಭಿಯಾನದ ಮೂಲಕ ಹೋರಾಟಕ್ಕೆ ಇಳಿಯಲು ಮುಂದಾಗಿದ್ದಾರೆ.

ಜಿಲ್ಲೆಗೆ ಬರುವ ಪ್ರವಾಸಿಗರಿಗೆ, ಜಿಲ್ಲೆಯ ಜನತೆ ‘ದಯವಿಟ್ಟು ಯಾವುದೇ ಅಪಘಾತಗಳನ್ನು ಮಾಡಿಕೊಳ್ಳಬೇಡಿ, ಚಿಕಿತ್ಸೆ ಪಡೆದುಕೊಳ್ಳಲು ನಮ್ಮಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ’ ಎಂದು ಮನವಿ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸಂದೇಶ ಹರಿದಾಡುತ್ತಿದೆ.

ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಳ್ಳಲಿರುವ ಉತ್ತರ ಕನ್ನಡ ಜನತೆ

ಇಷ್ಟು ದೊಡ್ಡ ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ತುರ್ತು ಚಿಕಿತ್ಸೆ ನೀಡುವ ಒಂದೇ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲ. ತುರ್ತು ಅನಾರೋಗ್ಯದ ಪರಿಸ್ಥಿತಿಯಲ್ಲಿ ದೇವರ ಮೇಲೆ ಭಾರ ಹಾಕಿ ನೆರೆಯ ಜಿಲ್ಲೆಯ ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ಏರಿ ಹೋಗಬೇಕಾದ ಅನಿವಾರ್ಯತೆಯನ್ನು ಜಿಲ್ಲೆಯ ಜನತೆ ಎದುರಿಸುತ್ತಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜನರು ಎಮರ್ಜೆನ್ಸಿ/ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟು ದಿನ ಜನ ಪ್ರತಿನಿಧಿಗಳಿಗೆ ಮನವಿ ಮಾಡಿ ಬೇಸತ್ತಿರುವ ಜನರು ಇದೀಗ ಹೋರಾಟದ ಹಾದಿ ತುಳಿಯಲು ಮುಂದಾಗಿದ್ದಾರೆ. ಇಂದು ಟ್ವಿಟರ್ ಅಭಿಯಾನದ ಮೂಲಕ ಹೋರಾಟಕ್ಕೆ ಮುನ್ನುಡಿಯಿಡುತ್ತಿದ್ದಾರೆ. ಜಿಲ್ಲೆಯ ಜನರು ಸಂಜೆ 5 ಗಂಟೆಗೆ ಏಕಕಾಲಕ್ಕೆ ಒಟ್ಟಾಗಿ WeNeedEmergencyHospitalInUttarakannada ಎನ್ನುವ ಹ್ಯಾಷ್‌ಟ್ಯಾಗ್‌ನೊಂದಿಗೆ ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ, ಸಿಎಂ ಬೊಮ್ಮಾಯಿ ಸೇರಿದಂತೆ ಪ್ರಮುಖರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಲು ನಿರ್ಧರಿಸಿದ್ದಾರೆ. ಜೊತೆಗೆ NoHospitalNoVote ಎನ್ನುವ ಹ್ಯಾಷ್‌ಟ್ಯಾಗ್ ಸಹ ಬಳಸಲಿದ್ದು, ಆಸ್ಪತ್ರೆ ನಿರ್ಮಿಸದಿದ್ರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಕಾರವಾರದ ಕೆಲವರು ಒಟ್ಟಾಗಿ ಸುಸಜ್ಜಿತ ಆಸ್ಪತ್ರೆಗಾಗಿ ರಕ್ತದ ಮೂಲಕ ಪ್ರಧಾನಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ. ಅಗಸ್ಟ್ 15ರೊಳಗೆ ಉತ್ತರಕನ್ನಡಕ್ಕೆ ತುರ್ತು ಚಿಕಿತ್ಸಾ ಆಸ್ಪತ್ರೆಯನ್ನು ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಲಿದ್ದಾರೆ. ಒಟ್ಟಾರೆ ಆಸ್ಪತ್ರೆಗಾಗಿ ಜಿಲ್ಲೆಯಾದ್ಯಂತ ಹೋರಾಟ ರೂಪುಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಅನ್ನೋದನ್ನು ಕಾದುನೋಡಬೇಕು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *