ಸಿದ್ಧಾಪುರದ ಗ್ರಾಮೀಣ ರಸ್ತೆ ಸಮಸ್ಯೆ, ಸಾರ್ವಜನಿಕರ ಬೇಸರ

ಸಿದ್ದಾಪುರ: ತಾಲೂಕಿನ  ಕಾನಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿಯ ಶಿರಸಿ- ಸಿದ್ದಾಪುರ ಮುಖ್ಯ ರಸ್ತೆ ಮಂಡ್ಲಿಕೋಪ್ಪದಿಂದ ಗೊರಟನಮನೆಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.

 ಈ ಗ್ರಾಮದಲ್ಲಿ 9 ಮನೆಗಳು ಇದ್ದು ಸುಮಾರು 35 ಜನರು ವಾಸವಾಗಿರುತ್ತಾರೆ. ಇಲ್ಲಿಯ ಜನರು ಮುಖ್ಯ ರಸ್ತೆಗೆ ಬರಬೇಕೆಂದರೆ ಮೂರು ಕಿಲೋಮೀಟರ್ ಕಾಡಿನಲ್ಲಿ ನಡೆದು ಬರಬೇಕಾಗುತ್ತದೆ. ಮಳೆಗಾಲದಲ್ಲಿ ವಾಹನಗಳು ಓಡಾಡುವುದು ಕಷ್ಟಸಾಧ್ಯ ವಾದುದು. ಇದರಿಂದ  ಶಾಲಾ ಮಕ್ಕಳು, ಮಹಿಳೆಯರು, ವೃದ್ಧರು ತುಂಬಾ ಕಷ್ಟ ಪಡಬೇಕಾಗಿದೆ. ಅನಾರೋಗ್ಯ ಸಂಭವಿಸಿದರೆ ಅವರ ಪರಿಸ್ಥಿತಿ ಹೇಳತೀರದು. 

 ಈ ಭಾಗದಲ್ಲಿ ಅಕ್ರಮವಾಗಿ ಮರಳುಗಾಡಿಗಳು ರಾತ್ರಿಹಗಲೆನ್ನದೆ ಓಡಾಡುತ್ತಿವೆ. ಮರಳು ಮಾಫಿಯಾ ತುಂಬಾ ಇರುವುದರಿಂದ ಇಲ್ಲಿ ಮರಳು ಗಾಡಿಯವರು ಯಾವುದೇ ಅಧಿಕಾರಿಗಳ ಭಯ ಇಲ್ಲದೆ ದಿನ ನಿತ್ಯ ಯಥೇಚ್ಛ ವಾಗಿ ಮರಳು ಸಾಗಣೆ ಮಾಡುತ್ತಾರೆ. ಇದರಿಂದ ರಸ್ತೆ ತುಂಬಾ ಹದಗೆಟ್ಟಿದೆ.  ಮಳೆಗೆ  ನೀರು ರಸ್ತೆಯ ಮೇಲೆ ಹರಿದು  ರಸ್ತೆಗಳು ಕೆಸರು ಗದ್ದೆಯಂತಾಗಿವೆ.ಇಲ್ಲಿ ನಡೆದುಕೊಂಡು ಹೋಗುವುದಕ್ಕೂ ಅಸಾಧ್ಯವಾಗಿದೆ. ಇನ್ನು ವಾಹನ ಸಂಚಾರವಂತೂ ಸಾಧ್ಯವೇ ಇಲ್ಲ. ಮೂರು ಕಿಮೀ ಹೋಗಬೇಕೆಂದರೆ ಅದು ದೊಡ್ಡ ಸಾಹಸವನ್ನೆ ಮಾಡಬೇಕು. ಇಲ್ಲಿ ಮರಳು ಸಾಗಾಣಿಕೆ ಮಾಡುತ್ತಿರುವವರನ್ನು ಕೇಳುವವರಿಲ್ಲವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇತ್ತಕಡೆ ನೋಡುತ್ತಿಲ್ಲಾ. 

 ಊರಿಗೆ ನಿಮ್ಮ ಪಂಚಾಯತದಿಂದ ಯಾವುದೇ ಸೌಲಭ್ಯ ಸಿಕ್ಕಿಲ್ಲ ಎನ್ನುವ ಬೇಸರ ಗ್ರಾಮಸ್ಥರಲ್ಲಿದೆ. ಒಂದೇ ಮನೆ ಇರುವಲ್ಲಿ ಲಕ್ಷಗಟ್ಟಲೆ ಹಣ ಹಾಕಿ ಎರಡು ಮೂರು ಕಿಮೀ ರಸ್ತೆ ಮಾಡಿದ ಉದಾಹರಣೆ ಗಳಿವೆ. ಆದರೆ ಜನ ಪ್ರತಿನಿಧಿಗಳಿಗೆ ನಮ್ಮ ರಸ್ತೆ ಕಾಣುತ್ತಿಲ್ಲವೇ?. ಈ ಹಿಂದೆ ರಸ್ತೆ  ಮಾಡುವಂತೆ  ಗ್ರಾಮ ಪಂಚಾಯತಿಗೆ ಹಲವು ಬಾರಿ ಅರ್ಜಿ ನೀಡಿದ್ದೇವೆ‌.  ಅಧ್ಯಕ್ಷರು ಉಪಾಧ್ಯಕ್ಷರಿಗೂ  ಮಾಹಿತಿ ನೀಡಿದ್ದೇವೆ. ಆದರೆ ಯಾವುದಕ್ಕೂ ಯಾರು ಸ್ಪಂದಿಸಿಲ್ಲ. ಕಳೆದ ವರ್ಷ  20000  ಕರ್ಚು ಮಾಡಿ ರಸ್ತೆ ರಿಪೇರಿ ಮಾಡಿಕೊಂಡಿದ್ದೇವೆ ಎಂದು ಬೇಸರಿಸಿರುವ ಅವರು

ಮಂಡ್ಲಿಕೊಪ್ಪದಿಂದ – ಗೊರಟನಮನೆವರೆಗೆ   ರಸ್ತೆ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹೆಗ್ಗರಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಲು0ಡೆ ಯಿಂದ ಮಗೆಜಡ್ಡಿಗೆ ಸಂಪರ್ಕ ನೀಡುವ ರಸ್ತೆ ಯು ಸಂಪೂರ್ಣ ಹದಗೆಟ್ಟು ಹೋಗಿದ್ದು ಸಾರ್ವಜನಿಕರು ವಿದ್ಯಾರ್ಥಿ ಗಳು ಹಲವಾರು ರೀತಿಯ ಸಮಸ್ಯೆ ಎದುರಿಸುವಂತಾಗಿದೆ ಕೂಡಲೇ ಸೂಕ್ತ ಕ್ರಮ ಕೈ ಗೊಂಡು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.


ಬೇಸಿಗೆಯಲ್ಲಿ ಪಂಚಾಯತ್ ದವರು ಮಣ್ಣು ಹಾಕಿ ರಸ್ತೆದುರಸ್ಥಿ ಮಾಡಿದ್ದರು ರಸ್ತೆಗೆ ಪೈಪ್ ಅಳವಡಿಸಲು ಸ್ಥಳೀಯರು ಹೇಳಿದ್ದರು ಒತ್ತಾಯ ಕೂಡ ಮಾಡಿದ್ದರು ಆದರೂ ಸಹ ಪೈಪ್ ಅಳವಡಿಸದೆ ಇರುವುದರಿಂದ ಈ ರೀತಿಯ ಸಮಸ್ಯೆ ಗಳು ಎದುರಾಗಿವೆ
ಮಳೆಗಾಲ ದಲ್ಲಿ ಉಂಟಾದ ಸಮಸ್ಯೆ ಬಗ್ಗೆ ಹಲವಾರು ಬಾರಿ ತಿಳಿಸಿದ್ದರು ಸೌಜನ್ಯ ಕ್ಕೂ ಬಂದು ನೋಡಲಿಲ್ಲ ಬೇಸಿಗೆಯಲ್ಲಿ ನಡೆಸಿದ ನಡೆದ ಕಾಮಗಾರಿ ಮಾಹಿತಿಯನ್ನು ಹಾಕದೆ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಸಾರ್ವಜನಿಕ ರು ಆರೋಪಿಸಿದ್ದಾರೆ ಕೂಡಲೇ ಸಂಬಂಧ ಪಟ್ಟವರು ಗಮನ ಹರಿಸಬೇಕು ಎಂದು ಒತ್ತಾಯ ಮಾಡಿದ್ದಾರೆ ಇದನ್ನು ಹೇಳೋಣ ಎಂದರೆ ಪಂಚಾಯತ್ ದಲ್ಲಿ ಬಿಲ್ ಕಲೆಕ್ಟರ್ ಕಂಪ್ಯೂಟರ್ ಒಪರೇಟರ್ ಬಿಟ್ಟರೆ ಸಿಬ್ಬಂದಿಗಳು ಅಧಿಕಾರಿಗಳು ಕಛೇರಿ ಯಲ್ಲಿ ಲಭ್ಯ ಇಲ್ಲದೆ ಇರುವುದರಿಂದ ಜನರ ಸಮಸ್ಯೆ ಆಲಿಸಲು ಯಾರು ಇಲ್ಲದಂತಾಗಿದ್ದು ಸಾರ್ವಜನಿಕರು ಗೋಳಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ

ಆತ್ಮೀಯ ಆಮಂತ್ರಣ….

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *