ಸಿದ್ಧಾಪುರದ ಗ್ರಾಮೀಣ ರಸ್ತೆ ಸಮಸ್ಯೆ, ಸಾರ್ವಜನಿಕರ ಬೇಸರ

ಸಿದ್ದಾಪುರ: ತಾಲೂಕಿನ  ಕಾನಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿಯ ಶಿರಸಿ- ಸಿದ್ದಾಪುರ ಮುಖ್ಯ ರಸ್ತೆ ಮಂಡ್ಲಿಕೋಪ್ಪದಿಂದ ಗೊರಟನಮನೆಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.

 ಈ ಗ್ರಾಮದಲ್ಲಿ 9 ಮನೆಗಳು ಇದ್ದು ಸುಮಾರು 35 ಜನರು ವಾಸವಾಗಿರುತ್ತಾರೆ. ಇಲ್ಲಿಯ ಜನರು ಮುಖ್ಯ ರಸ್ತೆಗೆ ಬರಬೇಕೆಂದರೆ ಮೂರು ಕಿಲೋಮೀಟರ್ ಕಾಡಿನಲ್ಲಿ ನಡೆದು ಬರಬೇಕಾಗುತ್ತದೆ. ಮಳೆಗಾಲದಲ್ಲಿ ವಾಹನಗಳು ಓಡಾಡುವುದು ಕಷ್ಟಸಾಧ್ಯ ವಾದುದು. ಇದರಿಂದ  ಶಾಲಾ ಮಕ್ಕಳು, ಮಹಿಳೆಯರು, ವೃದ್ಧರು ತುಂಬಾ ಕಷ್ಟ ಪಡಬೇಕಾಗಿದೆ. ಅನಾರೋಗ್ಯ ಸಂಭವಿಸಿದರೆ ಅವರ ಪರಿಸ್ಥಿತಿ ಹೇಳತೀರದು. 

 ಈ ಭಾಗದಲ್ಲಿ ಅಕ್ರಮವಾಗಿ ಮರಳುಗಾಡಿಗಳು ರಾತ್ರಿಹಗಲೆನ್ನದೆ ಓಡಾಡುತ್ತಿವೆ. ಮರಳು ಮಾಫಿಯಾ ತುಂಬಾ ಇರುವುದರಿಂದ ಇಲ್ಲಿ ಮರಳು ಗಾಡಿಯವರು ಯಾವುದೇ ಅಧಿಕಾರಿಗಳ ಭಯ ಇಲ್ಲದೆ ದಿನ ನಿತ್ಯ ಯಥೇಚ್ಛ ವಾಗಿ ಮರಳು ಸಾಗಣೆ ಮಾಡುತ್ತಾರೆ. ಇದರಿಂದ ರಸ್ತೆ ತುಂಬಾ ಹದಗೆಟ್ಟಿದೆ.  ಮಳೆಗೆ  ನೀರು ರಸ್ತೆಯ ಮೇಲೆ ಹರಿದು  ರಸ್ತೆಗಳು ಕೆಸರು ಗದ್ದೆಯಂತಾಗಿವೆ.ಇಲ್ಲಿ ನಡೆದುಕೊಂಡು ಹೋಗುವುದಕ್ಕೂ ಅಸಾಧ್ಯವಾಗಿದೆ. ಇನ್ನು ವಾಹನ ಸಂಚಾರವಂತೂ ಸಾಧ್ಯವೇ ಇಲ್ಲ. ಮೂರು ಕಿಮೀ ಹೋಗಬೇಕೆಂದರೆ ಅದು ದೊಡ್ಡ ಸಾಹಸವನ್ನೆ ಮಾಡಬೇಕು. ಇಲ್ಲಿ ಮರಳು ಸಾಗಾಣಿಕೆ ಮಾಡುತ್ತಿರುವವರನ್ನು ಕೇಳುವವರಿಲ್ಲವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇತ್ತಕಡೆ ನೋಡುತ್ತಿಲ್ಲಾ. 

 ಊರಿಗೆ ನಿಮ್ಮ ಪಂಚಾಯತದಿಂದ ಯಾವುದೇ ಸೌಲಭ್ಯ ಸಿಕ್ಕಿಲ್ಲ ಎನ್ನುವ ಬೇಸರ ಗ್ರಾಮಸ್ಥರಲ್ಲಿದೆ. ಒಂದೇ ಮನೆ ಇರುವಲ್ಲಿ ಲಕ್ಷಗಟ್ಟಲೆ ಹಣ ಹಾಕಿ ಎರಡು ಮೂರು ಕಿಮೀ ರಸ್ತೆ ಮಾಡಿದ ಉದಾಹರಣೆ ಗಳಿವೆ. ಆದರೆ ಜನ ಪ್ರತಿನಿಧಿಗಳಿಗೆ ನಮ್ಮ ರಸ್ತೆ ಕಾಣುತ್ತಿಲ್ಲವೇ?. ಈ ಹಿಂದೆ ರಸ್ತೆ  ಮಾಡುವಂತೆ  ಗ್ರಾಮ ಪಂಚಾಯತಿಗೆ ಹಲವು ಬಾರಿ ಅರ್ಜಿ ನೀಡಿದ್ದೇವೆ‌.  ಅಧ್ಯಕ್ಷರು ಉಪಾಧ್ಯಕ್ಷರಿಗೂ  ಮಾಹಿತಿ ನೀಡಿದ್ದೇವೆ. ಆದರೆ ಯಾವುದಕ್ಕೂ ಯಾರು ಸ್ಪಂದಿಸಿಲ್ಲ. ಕಳೆದ ವರ್ಷ  20000  ಕರ್ಚು ಮಾಡಿ ರಸ್ತೆ ರಿಪೇರಿ ಮಾಡಿಕೊಂಡಿದ್ದೇವೆ ಎಂದು ಬೇಸರಿಸಿರುವ ಅವರು

ಮಂಡ್ಲಿಕೊಪ್ಪದಿಂದ – ಗೊರಟನಮನೆವರೆಗೆ   ರಸ್ತೆ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹೆಗ್ಗರಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಲು0ಡೆ ಯಿಂದ ಮಗೆಜಡ್ಡಿಗೆ ಸಂಪರ್ಕ ನೀಡುವ ರಸ್ತೆ ಯು ಸಂಪೂರ್ಣ ಹದಗೆಟ್ಟು ಹೋಗಿದ್ದು ಸಾರ್ವಜನಿಕರು ವಿದ್ಯಾರ್ಥಿ ಗಳು ಹಲವಾರು ರೀತಿಯ ಸಮಸ್ಯೆ ಎದುರಿಸುವಂತಾಗಿದೆ ಕೂಡಲೇ ಸೂಕ್ತ ಕ್ರಮ ಕೈ ಗೊಂಡು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.


ಬೇಸಿಗೆಯಲ್ಲಿ ಪಂಚಾಯತ್ ದವರು ಮಣ್ಣು ಹಾಕಿ ರಸ್ತೆದುರಸ್ಥಿ ಮಾಡಿದ್ದರು ರಸ್ತೆಗೆ ಪೈಪ್ ಅಳವಡಿಸಲು ಸ್ಥಳೀಯರು ಹೇಳಿದ್ದರು ಒತ್ತಾಯ ಕೂಡ ಮಾಡಿದ್ದರು ಆದರೂ ಸಹ ಪೈಪ್ ಅಳವಡಿಸದೆ ಇರುವುದರಿಂದ ಈ ರೀತಿಯ ಸಮಸ್ಯೆ ಗಳು ಎದುರಾಗಿವೆ
ಮಳೆಗಾಲ ದಲ್ಲಿ ಉಂಟಾದ ಸಮಸ್ಯೆ ಬಗ್ಗೆ ಹಲವಾರು ಬಾರಿ ತಿಳಿಸಿದ್ದರು ಸೌಜನ್ಯ ಕ್ಕೂ ಬಂದು ನೋಡಲಿಲ್ಲ ಬೇಸಿಗೆಯಲ್ಲಿ ನಡೆಸಿದ ನಡೆದ ಕಾಮಗಾರಿ ಮಾಹಿತಿಯನ್ನು ಹಾಕದೆ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಸಾರ್ವಜನಿಕ ರು ಆರೋಪಿಸಿದ್ದಾರೆ ಕೂಡಲೇ ಸಂಬಂಧ ಪಟ್ಟವರು ಗಮನ ಹರಿಸಬೇಕು ಎಂದು ಒತ್ತಾಯ ಮಾಡಿದ್ದಾರೆ ಇದನ್ನು ಹೇಳೋಣ ಎಂದರೆ ಪಂಚಾಯತ್ ದಲ್ಲಿ ಬಿಲ್ ಕಲೆಕ್ಟರ್ ಕಂಪ್ಯೂಟರ್ ಒಪರೇಟರ್ ಬಿಟ್ಟರೆ ಸಿಬ್ಬಂದಿಗಳು ಅಧಿಕಾರಿಗಳು ಕಛೇರಿ ಯಲ್ಲಿ ಲಭ್ಯ ಇಲ್ಲದೆ ಇರುವುದರಿಂದ ಜನರ ಸಮಸ್ಯೆ ಆಲಿಸಲು ಯಾರು ಇಲ್ಲದಂತಾಗಿದ್ದು ಸಾರ್ವಜನಿಕರು ಗೋಳಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ

ಆತ್ಮೀಯ ಆಮಂತ್ರಣ….

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *