ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಏರಿಸಿ ಸರ್ಕಾರದ ಆದೇಶ

Thumbnail image

ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕನಿಷ್ಠ 6 ವರ್ಷ, ಗರಿಷ್ಠ 7 ವರ್ಷದ ಮಿತಿ- ವಯೋಮಿತಿಯನ್ನು ಏರಿಸಿದ ರಾಜ್ಯ ಸರ್ಕಾರ- ನೂತನ ಆದೇಶ

ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 2016-17ನೇ ಶೈಕ್ಷಣಿಕ ಸಾಲಿನಿಂದ ಆರ್.ಟಿ.ಇ ಕಾಯ್ದೆ ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ ಸಂಬಂಧಿಸಿದಂತೆ ಎಲ್.ಕೆ.ಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಆಗಿರಬೇಕು. 1ನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ 6ವರ್ಷ ಆಗಿರಬೇಕು, ಗರಿಷ್ಠ 7 ವರ್ಷ ವಯೋಮಿತಿಯನ್ನು ನಿಗದಿಪಡಿಸಿ ನೂತನ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಆದೇಶ ಪ್ರತಿ

ಸರ್ಕಾರದ ಆದೇಶ ಪ್ರತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪೂರ್ವ ಪ್ರಾಥಮಿಕ ( ಎಲ್.ಕೆ.ಜಿ ) ಹಾಗೂ ಪ್ರಾಥಮಿಕ ಶಾಲೆಯ 1ನೇ ತರಗತಿ ಮಕ್ಕಳನ್ನು ದಾಖಲಾತಿ ಮಾಡಲು ಕರ್ನಾಟಕ ಶಿಕ್ಷಣ ಕಾಯ್ದೆ – 1983ರ ನಿಯಮ -20 ರನ್ವಯ ಆಯಾ ಶೈಕ್ಷಣಿಕ ವರ್ಷದ ಜೂ.1 ಕ್ಕೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ ) 3 ವರ್ಷ 10 ತಿಂಗಳು, 1 ನೇ ತರಗತಿಗೆ 5 ವರ್ಷ 10 ತಿಂಗಳು ಎಂಬುದಾಗಿ 2017 ರ ಜ.13ರಲ್ಲಿ ವಯೋಮಿತಿಯನ್ನು ನಿಗದಿಪಡಿಸಿದ್ದರು. ಅದೇ ತಿಂಗಳ 18 ರಂದು ಆದೇಶವನ್ನು ಮಾರ್ಪಡಿಸಿ ಶೈಕ್ಷಣಿಕ ವರ್ಷ 2018-19ನೇ ಸಾಲಿನಿಂದ ಸರ್ಕಾರಿ, ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಸಂಬಂಧಿಸಿದ ಶೈಕ್ಷಣಿಕ ವರ್ಷದ ಜೂನ್ 1 ರಂದು 5 ವರ್ಷ, 10 ತಿಂಗಳು ಪೂರ್ಣಗೊಂಡಿರಬೇಕೆಂದು ನಿಗದಿಪಡಿಸಿದ್ದರು.

2009ರಲ್ಲಿ ಆರ್.ಟಿ.ಇ. ಕಾಯ್ದೆ ಮತ್ತು 2012 ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೆ ಬಂದಿವೆ. ಇವುಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983 ಮತ್ತು ಅದರಡಿ ರಚಿತವಾದ ಎಲ್ಲಾ ನಿಯಮಗಳನ್ನು / ಆದೇಶಗಳನ್ನು ರದ್ದುಪಡಿಸಿ, ಈ ಹೊಸ ಆದೇಶ ನೀಡಲಾಗಿದೆ.

2018 ರ ಮೇ ತಿಂಗಳಲ್ಲಿ ಹೊರಡಿಸಿದ ಆದೇಶದಲ್ಲಿ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಒಂದನೇ ತರಗತಿಗೆ ದಾಖಲಾಗಲು ಮಗುವಿಗೆ ಕನಿಷ್ಠ ವಯೋಮಿತಿಯನ್ನು 05 ವರ್ಷ 05 ತಿಂಗಳು ಹಾಗೂ ಗರಿಷ್ಠ 07 ವರ್ಷಗಳಿಗೆ ನಿಗದಿಪಡಿಸಲಾಗಿದೆ. ತತ್ಸಂಬಂಧಿ ರಾಜ್ಯ ಪತ್ರವನ್ನು ಹಾಗೂ ಸರ್ಕಾರದ ಆದೇಶವನ್ನು 2020 ರ ಮಾ. 20ರಲ್ಲಿ ಶೈಕ್ಷಣಿಕ ವರ್ಷದ ಜೂ.1ರಂದು ಅನ್ವಯವಾಗುವಂತೆ ಎಲ್.ಕೆ.ಜಿ. ದಾಖಲಾತಿ ಹೊಂದಲು 03 ವರ್ಷ 05 ತಿಂಗಳು ಹಾಗೂ ಒಂದನೇ ತರಗತಿಗೆ 05 ವರ್ಷ 05 ತಿಂಗಳು ವಯೋಮಿತಿ ನಿಗದಿಪಡಿಸಲಾಗಿತ್ತು. ಒಟ್ಟಾರೆ ಸಲ್ಲಿಕೆಯಾದ ಎಲ್ಲಾ ಪ್ರಸ್ತಾವನೆಯನ್ನು ಕೂಲಂಕಶವಾಗಿ ಪರಿಶೀಲಿಸಿ ಈ ನೂತನ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *