

ಸಿದ್ದಾಪುರ:- ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಗುಜರಾತಿನಲ್ಲಿ ನಡೆದ 23 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು ಪೋಲಂಡ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾನೆ.

ಈತನು ಲತಾ ಹೆಗಡೆ ಮತ್ತು ರಾಮನಾಥ ಹೆಗಡೆಯವರ ಪುತ್ರ. ಇತನ ಸಾಧನೆಗೆ ತಂದೆ ತಾಯಿ, ಶಿಕ್ಷರು, ತಾಲೂಕಿನ ಜನತೆ ಹರ್ಷ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ : ಸಿದ್ದಾಪುರ ಪಟುಗಳ ಸಾಧನೆ*
ಸಿದ್ದಾಪುರ : ಕಲ್ಕತ್ತಾದ ನೇತಾಜಿ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಆರನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸಿದ್ದಾಪುರ ತಾಲೂಕಿನ ರಾಠೋಡ ಕರಾಟೆ ತರಬೇತಿ ಕೆಂದ್ರದ ವಿದ್ಯಾರ್ಥಿಗಳು ಭಾಗವಹಿಸಿ ನಾಲ್ಕು ಪದಕಗಳನ್ನು ಗೆದ್ದು ಸಾಧನೆಗೈದಿದ್ದಾರೆ.
ಸುಮಾರು 10 ದೇಶಗಳಿಂದ ೪೮೦೦ ಕ್ಕೂ ಹೆಚ್ಚು ಕರಾಟೆ ಪಟುಗಳು ಭಾಗವಹಿಸಿದ್ದ ಚಾಂಪಿಯನ್ ಶಿಪ್ ನಲ್ಲಿ ತಾಲೂಕಿನ ಕರಾಟೆ ತರಬೇತಿ ಕೇಂದ್ರದ ಆನಂದ ಕೆ ನಾಯ್ಕ ಕಟ್ಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ವಿದ್ಯಾರ್ಥಿಗಳಾದ ಅಜಿತ್ ಕೊಡಿಯ ಬೆಳ್ಳಿ ಮತ್ತು ಕಂಚಿನ ಪದಕ ಮತ್ತು ಜಯಂತ ಎಮ್ ನಾಯ್ಕ ಕಂಚಿನ ಪದಕ ವನ್ನು ಪಡೆದರು. ಇವರ ಸಾಧನೆಗೆ ತಾಲೂಕಿನ ಗಣ್ಯರುಗಳು ಸಂತಸ ವ್ಯಕ್ತಪಡಿಸಿದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
