

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಹಿಂದೂ ಕಾರ್ಯಕರ್ತರು ಬಿಜೆಪಿ ಸರ್ಕಾರ ವಿರುದ್ಧ ಬಂಡೆದಿದ್ದು,, ಬಿಜೆಪಿ ಪಕ್ಷಕ್ಕೆ ಟಕ್ಕರ್ ಕೊಡಲು ಹಿಂದೂಸ್ಥಾನ ಜನತಾ ಪಾರ್ಟಿ ಇಂದು ಉದ್ಘಾಟನೆಗೊಂಡಿದೆ.

ಹಿಂದೂಸ್ಥಾನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ವಿನಾಯಕ ಮಾಳದಕರ್ ನೇತೃತ್ವದಲ್ಲಿ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದ ಸಭಾಂಗಣದಲ್ಲಿ ನೂತನ ಪಾರ್ಟಿ ಉದ್ಘಾಟನೆಗೊಂಡಿದ್ದು, ಹಿಂದೂಸ್ಥಾನ ಜನತಾ ಪಾರ್ಟಿಯ ಲೋಗೋ ಲೋಕಾರ್ಪಣೆಗೊಂಡಿದೆ.
ಈ ವೇಳೆ ಹಿಂದೂಸ್ತಾನ ಜನತಾ ಪಾರ್ಟಿ ಕಾರ್ಯದರ್ಶಿ ಹರೀಶ್ ಮಾತನಾಡಿದ್ದು, 15 ವರ್ಷಗಳಿಂದ ಸಂಘಟನೆಗೆ ಮಾಡಿಕೊಂಡು ಬಂದಿದ್ದೇನೆ. ಹಿಂದೂ ಸಂಘಟನೆ, ಆರ್ಎಸ್ಎಸ್ ಹಾಗೂ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದೆ. ಪ್ರಮೋದ್ ಮುತಾಲಿಕ್ ಹೋರಾಟ ಇಷ್ಟ ಪಟ್ಟು ಶ್ರೀರಾಮಸೇನೆ ಸೇರಿದ್ದೆ. ದೇಶ, ರಾಜ್ಯಾದ್ಯಂತ ಸಾಕಷ್ಟು ಹೋರಾಟ ಮಾಡಿದ್ದೇವೆ. ಇವತ್ತು ಕೆಲವು ಅಥಿತಿಗಳು ಬರಬೇಕಿತ್ತು ಕೆಲವರು ಅಡಚಣೆ ಮಾಡಿದ್ದಾರೆ. ಬಿಜೆಪಿ ವಿರುದ್ಧ ಹಿಂದೂಗಳು ತಿರುಗಿಬಿದ್ದಿದ್ದಾರೆ ಎಂದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






