ಲೋಕಲ್ news – ಸಾಧಕರಿಗೆ ಸನ್ಮಾನ & ಮಳೆ ಹಾನಿ

ಸಿದ್ದಾಪುರ :- ಸಮಾಜಕ್ಕೆ ನಮ್ಮಿಂದಾದ ಕಿಂಚಿತ್ ಕೊಡುಗೆ ನೀಡಬೇಕು ಎನ್ನುವದನ್ನು ಯುವಕರು ಮರೆತಂತಿದೆ. ಆದರೆ ಹರೀಶ ಗೌಡರ್ ತಮ್ಮ ಜನ್ಮದಿನದ ಆಚರಣೆಯನ್ನು ಇಂದಿನ ಯುವಕರಿಗೆ ಮಾದರಿಯಾಗುವಂತೆ ಆಚರಿಸಿದ್ದಾರೆ‌ ಎಂದು ಶಿಕ್ಷಣ ಪ್ರಸಾರಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಭೂಷಣ ಹೆಗಡೆ ಹೇಳಿದರು.
ಅವರು ಪಟ್ಟಣದ ಬಾಲಭವನದಲ್ಲಿ ನಡೆದ
ಹರೀಶ ಎಸ್ ಗೌಡರ್ ಹರಳಿಕೊಪ್ಪ ರ ಸ್ನೇಹಿತರ ಬಳಗದ ವತಿಯಿಂದ ಹರೀಶ್ ಗೌಡರ ರವರ ಜನ್ಮ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇಂದು ನಾಲ್ಕೈದು ಜನರು ಸೇರಿ ಜನ್ಮದಿನಾಚರಣೆಯಲ್ಲಿ ಬೇಡವಾದುದಕ್ಕೆ ಹಣ ಖರ್ಚು ಮಾಡುವ ಇಂದಿನ ದಿನದಲ್ಲಿ ಸಾಧಕರಿಗೆ ಸನ್ಮಾನ ಮಾಡಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದು ಅರ್ಥಪೂರ್ಣ ವಾಗಿದೆ.
ಹರೀಶ್ ಗೌಡರ್ ಜೀವನದಲ್ಲಿ ಪರಿಪಕ್ವವಾಗಿದ್ದಾರೆ. ಹಿಂದೆ ಆದ ಕಹಿ ಘಟನೆಗಳು ನಿಮ್ಮನ್ನು ಎತ್ತರದ ಮಟ್ಟಕ್ಕೆ ಒಯ್ಯುತ್ತವೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉದ್ಯಮಿಗಳಾದ ಉಪೇಂದ್ರ ಪೈ ಶಿರಸಿ ಮಾತನಾಡಿ, ಇದು ಮನ ಮುಟ್ಟುವ, ಮನ ತಟ್ಟುವ ಕಾರ್ಯಕ್ರಮ. ಜನಪರ ಹೋರಾಟ ಮತ್ತು ಸಮಾಜದ ಸೇವೆ ಮಾಡುವುದರಲ್ಲಿ ಕಹಿ ಘಟಕಗಳು ಸಾಮಾನ್ಯ, ವ್ಯಕ್ತಿಗಿಂತ ವ್ಯಕ್ತಿತ್ವ ಮುಖ್ಯ, ಚರಿತ್ರೆಗಿಂತ ಚಾರಿತ್ರ್ಯ ದೊಡ್ಡದು. ‌ನಿಮ್ಮ ನೋವು ಮುಂದಿನ ಜೀವನದ ಪಾಠ.
ದ್ವೇಷ ಮಾಡಲಿಕ್ಕೆ ನಾವು ಶಾಶ್ವತವಲ್ಲ. ನಿಮ್ಮಿಂದ ಜನಪರ ಕಾರ್ಯಕ್ರಮಗಳು ಆಗಲಿ ಎಂದು ಹಾರೈಸಿದರು.


ರೈತ ಮಖಂಡರು, ಸಮಾಜ ಸೇವಕರಾದ ವೀರಭದ್ರ ನಾಯ್ಕ ಮಳವಳ್ಳಿ, ಸಮಾಜಮುಖಿ ಸಂಪಾದಕರಾದ ಕನ್ನೇಶ ಕೋಲಶಿರ್ಸಿ, ಕನ್ನಡಪರ ಸಂಘಟನೆ ಗಳ ಒಕ್ಕೂಟದ ಅಧ್ಯಕ್ಷರಾದ ಆಕಾಶ ಎಸ್ ಕೊಂಡ್ಲಿ, ಸತೀಶ್ ಹೆಗಡೆ, ಹರೀಶ ಎಸ್ ಗೌಡರ್ ವೇದಿಕೆಯಲ್ಲಿ ಇದ್ದರು.
ಜಾನಪದ ಕಲಾವಿದೆ ಲಿಲಾವತಿ ಎಸ್ ಕೊಂಡ್ಲಿ, ಯೋಗಪಟು ಮಂಜುನಾಥ ಎಮ್ ನಾಯ್ಕ, ಕರಾಟೆ ಪಟುಗಳಾದ ಆನಂದ ನಾಯ್ಕ, ಅಜೀತ್ ಕೊಡಿಯಾ, ಜಯಂತ ನಾಯ್ಕ, ಚೆಸ್ ಚಾಂಪಿಯನ್ ಭರತ ಹೆಗಡೆ ದೊಡ್ಮನೆ, ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಗೀತಾ ನಾಯ್ಕ ರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಲೀಲಾವತಿ ಎಸ್ ಕೊಂಡ್ಲಿ ಪ್ರಾರ್ಥಿಸಿದರು.
ದಿನೇಶ್ ನಾಯ್ಕ ಸ್ವಾಗತಿಸಿದರು. ‌ ಗಣೇಶ ನಿರೂಪಿಸಿದರು.


ಇಂದು ಬೆಳಿಗ್ಗೆ ಸುರಿದ ಮಳೆ- ಗಾಳಿಯಿಂದಾಗಿ ಗೋ ಳಿಕೈ ಗ್ರಾಮದ ನಿವಾಸಿಯಾದ ಪುಟ್ಟ ಗಿರಿಯ ನಾಯ್ಕ್ ರವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಂದಾಜು 5000 ರೂ ಹಾನಿಯಾಗಿದ್ದು,ಯಾವುದೇ ಜನ – ಜಾನುವಾರು ಜೀವಹಾನಿ ಆಗಿರುವುದಿಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *