ಮಳೆ ಅವಾಂತರ..ಅಲ್ಲಲ್ಲಿ ಗುಡ್ಡ ಕುಸಿತ

Thumbnail image

ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ರಾಜ್ಯ ಹೆದ್ದಾರಿ ಸಂಚಾರ ಬಂದ್

ಕಾರವಾರದ ಅಣಶಿ ಘಟ್ಟದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಪರಿಣಾಮ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಅಣಶಿ ಘಟ್ಟದಲ್ಲಿ ಭಾೀರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಇದರ ಪರಿಣಾಮ ಕಾರವಾರದ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಕಳೆದ ನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿತವಾಗಿದೆ. ಕಳೆದ ತಿಂಗಳು ಗುಡ್ಡ ಕುಸಿತವಾಗಿದ್ದರಿಂದ ವಾರಕ್ಕೂ ಹೆಚ್ಚು ಕಾಲ ಈ ರಾಜ್ಯ ಹೆದ್ದಾರಿ ಬಂದ್​ ಮಾಡಲಾಗಿತ್ತು.

ಬಳಿಕ ಹಗಲಿನ ವೇಳೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇದೀಗ ಮತ್ತೆ ಅದೇ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದ್ದು, ಜೋಯಿಡಾ, ದಾಂಡೇಲಿ ಹಾಗೂ ಕಾರವಾರಕ್ಕೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ.

ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ

ತಕ್ಷಣ ಕಾರ್ಯ ಪ್ರವೃತ್ತವಾದ ಸ್ಥಳೀಯ ಆಡಳಿತ ಜೆಸಿಬಿ ಮೂಲಕ ಮಣ್ಣನ್ನು ತೆರವು ಮಾಡುತ್ತಿದೆ. ಕಂದಾಯ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

Thumbnail image

ಹೊನ್ನಾವರದ ಅಪ್ಸರಕೊಂಡದಲ್ಲಿ ಗುಡ್ಡ ಕುಸಿತದ ಭೀತಿ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

ವಾರದ ಹಿಂದೆ ಭಟ್ಕಳ ತಾಲೂಕಿನಲ್ಲಿ ಸುರಿದ ರಣಭೀಕರ ಮಳೆಗೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ಆದರೆ ಈ ಕರಾಳ ನೆನಪು ಮಾಸುವ ಮುನ್ನವೇ ಇದೀಗ ಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ಮತ್ತೆ ಗುಡ್ಡ ಬಾಯ್ತೆರೆದುಕೊಂಡಿದೆ. ಇದೀಗ ಸ್ಥಳೀಯರಲ್ಲಿ ಗುಡ್ಡ ಕುಸಿತ ಭೀತಿ ಕಾಡತೊಡಗಿದೆ.

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಹೊನ್ನಾವರದ ಕೆಳಗಿನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಸರಕೊಂಡದಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಗುಡ್ಡ ಕುಸಿತದ ಭೀತಿ ಎದುರಿಸಿದ್ದ ಜನಕ್ಕೆ ಇದೀಗ ಮತ್ತೊಂದು ಭೀತಿ ಎದುರಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರದಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗುಡ್ಡ ಪ್ರದೇಶದ ಕೆಳಗೆ 60ಕ್ಕೂ ಹೆಚ್ಚಿನ ಕುಟುಂಬಗಳು ವಾಸ ಮಾಡುತ್ತಿವೆ. ಈಗಾಗಲೇ ಬಹುತೇಕ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಂತರಿಸಲಾಗಿದೆ. ಗುಡ್ಡದ ಮೇಲೆ ಬೃಹದಾಕಾರದ ಬಂಡೆಗಳಿದ್ದು, ಸ್ವಲ್ಪ ಎಚ್ಚರ ತಪ್ಪಿದ್ರೂ ಅದರ ಕೆಳಗಿರುವ ನಿವಾಸಿಗಳಿಗೆ ಅಪಾಯ ತಪ್ಪಿದ್ದಲ್ಲ. ಅಪ್ಸರಕೊಂಡದಲ್ಲಿ ಗುಡ್ಡ ಕುಸಿಯುವ ಭೀತಿ ಇರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ನಾಯ್ಕರೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ರು.

ಮಳೆಗಾಲದ ಸಂದರ್ಭದಲ್ಲಿ ಗುಡ್ಡವನ್ನು ತೆರವುಗೊಳಿಸುವುದು ಇನ್ನೊಂದು ಅಪಾಯಕ್ಕೆ ದಾರಿ ಮಾಡಿಕೊಡಬಹುದು ಎಂಬ ಭಯವೂ ಇದೆ. ಈಗ ಕಣ್ಣಳತೆಯಲ್ಲಿ ಕಾಮಗಾರಿ ನಡೆಸುವುದು ಕಷ್ಟಸಾಧ್ಯ ಎಂಬ ಪರಿಸ್ಥಿತಿ ಇರುವುದರಿಂದ ಗುಡ್ಡ ತೆರವಿನಿಂದ ಆಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದು, ಸರ್ವೇ ನಡೆಸುವಂತೆ ಅಧಿಕಾರಿಗಳಿಗೆ ಸಚಿವರು ಆದೇಶಿಸಿದ್ದಾರೆ.

ಅಲ್ಲದೇ ಆ ಭಾಗದ ನಿವಾಸಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಚಿವರಿಗೆ ಗುಡ್ಡ ಕುಸಿತದ ಸ್ಥಳ ಹಾಗೂ ಸುತ್ತಲಿನ ಮನೆ ಮತ್ತು ರೈತರ ಭೂಮಿಯಲ್ಲಿ ಬೆಳೆದ ಬೆಳೆಗಳ ಬಗ್ಗೆ ಶಾಸಕ ಸುನೀಲ್ ನಾಯ್ಕ ವಿವರಿಸಿದರು. (ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *