ಸಲಿಂಗಿ ವಿವಾಹ,ಉ.ಕ. ಹಾಲಕ್ಕಿಗಳ ಸಾಂಪ್ರದಾಯಿಕ ಆಚರಣೆ

ಈ ವಿವಾಹದಲ್ಲಿ ವಧು-ವರ ಇಲ್ಲ ಬದಲಿಗೆ ವಧು-ವಧು: ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ವಿಶಿಷ್ಟ ಆಚರಣೆ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಮಳೆದೇವ ಇಂದ್ರನನ್ನು ಸಂತೃಪ್ತಿಗೊಳಿಸಲು ಹಾಲಕ್ಕಿ ಒಕ್ಕಲಿಗ ಸಮುದಾಯದವರು ಇಬ್ಬರು ಮಹಿಳೆಯರ ಮಧ್ಯೆ ಮದುವೆ ಮಾಡಿಸುತ್ತಾರೆ. ಮಳೆ, ಬೆಳೆ ಚೆನ್ನಾಗಿ ಆಗಿ ಸಂತೃಪ್ತಿ, ಸಂತೋಷ ಸಮಾಜದಲ್ಲಿ ನೆಲೆಸಲಿ ಎಂಬುದು ಇದರ ಸಾಂಕೇತಿಕ ಅರ್ಥವಾಗಿದೆ.

The all-woman wedding held at Taramakki, near Gokarna, on Friday. (Photo | EPS)

ಗೋಕರ್ಣ(ಉತ್ತರ ಕನ್ನಡ): ಮಳೆ ಬರಲೆಂದು ಕಪ್ಪೆಗಳಿಗೆ ಮದುವೆ ಮಾಡಿಸುವುದು ಕೇಳಿದ್ದೇವೆ. ಇನ್ನು ಹಲವು ಕಡೆ ಹಲವು ಸಂಪ್ರದಾಯಗಳಿವೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಮಳೆದೇವ ಇಂದ್ರನನ್ನು ಸಂತೃಪ್ತಿಗೊಳಿಸಲು ಹಾಲಕ್ಕಿ ಒಕ್ಕಲಿಗ ಸಮುದಾಯದವರು ಇಬ್ಬರು ಮಹಿಳೆಯರ ಮಧ್ಯೆ ಮದುವೆ ಮಾಡಿಸುತ್ತಾರೆ. ಮಳೆ, ಬೆಳೆ ಚೆನ್ನಾಗಿ ಆಗಿ ಸಂತೃಪ್ತಿ, ಸಂತೋಷ ಸಮಾಜದಲ್ಲಿ ನೆಲೆಸಲಿ ಎಂಬುದು ಇದರ ಸಾಂಕೇತಿಕ ಅರ್ಥವಾಗಿದೆ.

ಗೋಕರ್ಣದ ಹತ್ತಿರ ತಾರಮಕ್ಕಿ ಗ್ರಾಮದಲ್ಲಿ ಹುಲಸ್ಕೆರೆ ಹಾಲಕ್ಕಿ ಸಮುದಾಯದ ಸದಸ್ಯರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ವರ್ಣರಂಜಿತ ಮೆರವಣಿಗೆಯಲ್ಲಿ ಸಾಂಪ್ರದಾಯಿಕ ಜಾನಪದ ಸಂಗೀತ ಮತ್ತು ಗಾಯನ ಮಧ್ಯೆ ಈ ಅಪರೂಪದ ಮದುವೆ ಕಾರ್ಯಕ್ರಮ ನಡೆಯಿತು.

ನಿಧಾನವಾಗಿ ಡಿಜೆ ಮ್ಯೂಸಿಕ್ ನೊಂದಿಗೆ ಯುವಕರು ಹಾಡಿಗೆ ನೃತ್ಯಹಾಕಲು ಆರಂಭಿಸಿದರು. ಗ್ರಾಮಸ್ಥರೆಲ್ಲಾ ಸೇರಿ ಕೇತಕಿ ವಿನಾಯಕ ದೇವಸ್ಥಾನ ಬಳಿ ಮೆರವಣಿಗೆ ತಂಗಿ ಮತ್ತೊಂದು ಬುಡಕಟ್ಟು ಸಮುದಾಯದ ದೇವತೆಯಾದ ಕರಿದೇವರು ಜೊತೆಗೂಡಿ ವಿಶಿಷ್ಟ ಮದುವೆ ನೆರವೇರಿಸಿದರು. 

ಇಂದ್ರ ದೇವರನ್ನು ಸಂತೋಷಗೊಳಿಸಲು ಇಬ್ಬರು ಮಹಿಳೆಯರ ಮಧ್ಯೆ ನಡೆಯುವ ವಿಶಿಷ್ಟ ವಿವಾಹ ಇದಾಗಿದ್ದು ಮಳೆ ಕೊರತೆಯಿರುವ ಸಮಯದಲ್ಲಿ ಹೀಗೆ ಮಾಡುತ್ತಾರೆ ಎಂದು ಬುಡಕಟ್ಟು ಸಮುದಾಯದ ಹಿರಿಯ ಸದಸ್ಯ ಸೋಮು ಗೌಡ ಹೇಳಿದ್ದಾರೆ.

ಮಹಿಳೆಯರ ವಿವಾಹದಲ್ಲಿ ಪುರುಷರ ಪಾತ್ರ ಕಡಿಮೆ. ಇದು ಯುಗಯುಗಗಳಿಂದಲೂ ಆಚರಣೆಯಲ್ಲಿದೆ. ಕುತೂಹಲಕಾರಿಯಾಗಿ, ಸಮುದಾಯವು ತನ್ನ ಸಂಪ್ರದಾಯವನ್ನು ಜೀವಂತವಾಗಿರಿಸಿಕೊಂಡಿದೆ. ವಧು ಮತ್ತು ಆಕೆಯ ಸಂಗಾತಿಯನ್ನು ಆಯ್ಕೆ ಮಾಡುವ ಮೂಲಕ ಮದುವೆಯನ್ನು ಸಂಪೂರ್ಣವಾಗಿ ಮಹಿಳೆಯರೇ ನಡೆಸುತ್ತಾರೆ. ಮಂಗಳಕರ ದಿನದಂದು, ಮಹಿಳಾ ‘ಸಮಿತಿ’ ವಧು ಮತ್ತು ವರರನ್ನು ಘೋಷಿಸುತ್ತದೆ. ಎಲ್ಲಾ ಮಹಿಳೆಯರು ಭಾಗವಹಿಸುತ್ತಾರೆ ಎಂದು ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಅರ್ಚಕ ವಿನಾಯಕ ಶಾಸ್ತ್ರಿ ಹೇಳುತ್ತಾರೆ. 

ಹೇಗೆ ಮದುವೆ ನಡೆಯುತ್ತದೆ?: ಮಹಿಳೆಯರು ಹೂಮಾಲೆಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಇತರ ವಿವಾಹ ಆಚರಣೆಗಳನ್ನು ನಡೆಸುತ್ತಾರೆ. ಒಂದೇ ವ್ಯತ್ಯಾಸವೆಂದರೆ, ಪವಿತ್ರ ಸಂಸ್ಕೃತ ಪಠಣಗಳ ಬದಲಿಗೆ ಸ್ಥಳೀಯ ಭಾಷೆಯಲ್ಲಿ ಜಾನಪದ ಹಾಡುಗಳು, ಸಂಗೀತ, ಲಾವಣಿ ಹಾಡುಗಳ ಪಠಣಗಳಿವೆ ಎಂದು ಇಲ್ಲಿನ ನಿವಾಸಿ ಸಂದೀಪ್ ಗೌಡ ಹೇಳಿದರು.

ಒಂದೆರಡು ಗಂಟೆಗಳ ಕಾಲ ನಡೆಯುವ ಮದುವೆಯು ಸಮುದಾಯದ ಮುಖ್ಯಸ್ಥರ ಮನೆಗೆ ಮೆರವಣಿಗೆಯೊಂದಿಗೆ ಕೊನೆಗೊಳ್ಳುತ್ತದೆ, ಅವರು ದಂಪತಿಗೆ ಉಡುಗೊರೆಗಳನ್ನು ನೀಡುತ್ತಾರೆ. ಆದರೆ ಈ ಮದುವೆ ಕಾರ್ಯಕ್ರಮ ಮುಗಿದ ನಂತರ ಮಹಿಳೆಯರು ಒಟ್ಟಿಗೆ ವಾಸಿಸುವುದಿಲ್ಲ, ಮಳೆ ದೇವರನ್ನು ಮೆಚ್ಚಿಸುವ ಸಾಂಕೇತಿಕ ಮದುವೆಯಷ್ಟೆ. 

ಭಾರಿ ಮುಂಗಾರು ಮಳೆಯ ನಡುವೆಯೂ ಭಟ್ಕಳ ಹೊರತುಪಡಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಕಡಿಮೆ ಮಳೆಯಾಗಿದೆ. ಶೇಕಡಾ 50ಕ್ಕಿಂತ ಕಡಿಮೆ ಬಿತ್ತನೆಯಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *