ಸಾರ್ವಜನಿಕ ವಿರೋಧ, ವಕ್ಫಬೋರ್ಡ್‌ ಉಪಾಧ್ಯಕ್ಷ ಸ್ಥಾನ ಆದೇಶ ತಡೆ ಹಿಡಿದ ಸರ್ಕಾರ

Thumbnail image

ಪರೇಶ್​ ಮೇಸ್ತಾ ಹತ್ಯೆ ಆರೋಪಿಗೆ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ: ಬಿಜೆಪಿ ವಿರುದ್ಧ ಆಕ್ರೋಶ

ಪರೇಶ್​ ಮೇಸ್ತಾ ಕೊಲೆ ಪ್ರಕರಣ ಪ್ರಮುಖ ಆರೋಪಿಗೆ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಕಾರವಾರ: ಪರೇಶ್​ ಮೇಸ್ತಾ ಸಾವಿನ ಪ್ರಕರಣದ ಪ್ರಮುಖ ಆರೋಪಿಗೆ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಡಿಸೆಂಬರ್ 2017 ರಲ್ಲಿ ಹೊನ್ನಾವರ ಪಟ್ಟಣದಲ್ಲಿ ಗಲಭೆಯೊಂದು ನಡೆದಿತ್ತು. ಇದರಲ್ಲಿ ಪಟ್ಟಣದ ಪರೇಶ್ ಮೇಸ್ತಾ ಎನ್ನುವ ಯುವಕ ನಾಪತ್ತೆಯಾಗಿ, ಎರಡು ದಿನಗಳ ನಂತರ ಶವವಾಗಿ ಪಟ್ಟಣದ ಕೆರೆಯೊಂದರಲ್ಲಿ ಪತ್ತೆಯಾಗಿದ್ದ. ಮೇಸ್ತಾನನ್ನು ಕೋಮು ಗಲಭೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಬಿಜೆಪಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಇದು ಹೊನ್ನಾವರ, ಕಾರವಾರ, ಕುಮಟಾ, ಶಿರಸಿಯಲ್ಲಿ ದೊಡ್ಡ ಗಲಭೆಗೂ ಸಹ ಕಾರಣವಾಗಿತ್ತು. ಬಳಿಕ ಈ ಪ್ರಕರಣವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು.

ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ, ಜಮಾಲ್ ಅಜಾದ್ ಅಣ್ಣಿಗೇರಿ ಎಂಬಾತನನ್ನು ಎ1 ಆರೋಪಿಯನ್ನಾಗಿ ಮಾಡಿ ಬಂಧಿಸಲಾಗಿತ್ತು. ಈ ಪ್ರಕರಣವನ್ನ ಇನ್ನೂ ಸಿಬಿಐ ತನಿಖೆ ಮಾಡುತ್ತಿದ್ದು, ಬಂಧಿತರೆಲ್ಲರೂ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಇದರ ನಡುವೆ ಕೆಲ ದಿನಗಳ ಹಿಂದೆ ಜಿಲ್ಲಾ ವಕ್ಫ್ ಬೋರ್ಡ್ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಇದರಲ್ಲಿ ಉಪಾಧ್ಯಕ್ಷ ಸ್ಥಾನವನ್ನ ಎ1 ಆರೋಪಿ ಅಜಾದ್ ಅಣ್ಣಿಗೇರಿಗೆ ನೀಡಿರುವುದು ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

ಪರೇಶ್ ಮೇಸ್ತಾ ಹತ್ಯೆ ವಿರುದ್ಧ ಹೋರಾಡಿ ಅಧಿಕಾರ ಪಡೆದಿರುವ ಬಿಜೆಪಿ, ಪ್ರಕರಣದ ಆರೋಪಿಗೆ ಸರ್ಕಾರಿ ಸಂಸ್ಥೆಯಲ್ಲಿ ಸ್ಥಾನ ಕೊಟ್ಟಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗಿವೆ. ಅಲ್ಲದೇ, ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದಲೇ ಉಪಾಧ್ಯಕ್ಷ ಸ್ಥಾನ ನೀಡಿದ್ದು, ಬಿಜೆಪಿಗೆ ನೈತಿಕತೆ ಏನು ಉಳಿದಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *