local news-76 id-ಅಮೃತ ಮಹೋತ್ಸವ: ಸಮಾಜಮುಖಿ ಕೆಲಸ

ಸಿದ್ದಾಪುರ: ಸದಾ ಒಂದಿಲ್ಲೊಂದು ಸಮಾಜಮುಖಿ ಚಟುವಟಿಕೆ ನಡೆಸುತ್ತಿರುವ ತಾಲೂಕಿನ ತ್ಯಾರ್ಸಿಯ ಸಮೃದ್ಧಿ ಯುವ ಬಳಗದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಊರಿನ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ತ್ಯಾರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಎಸ್.ಎಸ್.ಎಲ್‌.ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮಂಜುನಾಥ ಮಾರುತಿ ನಾಯ್ಕ, ಸುಮಂತ್ ಹೆಗಡೆ, ಸೌಜನ್ಯ ಗೌಡರ್, ಅಂಕಿತಾ ಶಿವಾನಂದ ನಾಯ್ಕ, ದೇವರಾಜ ನಾಯ್ಕ, ಐಶ್ವರ್ಯ ಗೌಡರ್, ಆಶಾ ಗೊಂಡ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಚನಾ ಗೌಡರ್, ಹೇಮಾವತಿ ಗೊಂಡ, ಗೀತಾ ಉಮೇಶ ಗೊಂಡ, ಲೀಲಾ ಸೀತಾರಾಮ ನಾಯ್ಕ ಇವರನ್ನು ಸಮೃದ್ಧಿ ಯುವ ಬಳಗದ ಸದಸ್ಯರು ಗ್ರಾಮಸ್ಥರ ಸಮ್ಮುಖದಲ್ಲಿ ಸನ್ಮಾನಿಸಿದರು.

ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಮಾರುತಿ ಎಸ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಊರಿನ ಹಿರಿಯರಾದ ಮಾರುತಿ ನಾಯ್ಕ, ಶಾಲೆಯ ಶಿಕ್ಷಕರಾದ ಇಂದಿರಾ ನಾಯ್ಕ, ಉಷಾ ಕೊಡಿಯಾ, ಸಮೃದ್ಧಿ ಯುವ ಬಳಗದ ಅಧ್ಯಕ್ಷ ಮಂಜುನಾಥ ಗೌಡರ್, ಉಪಾಧ್ಯಕ್ಷ ಬಾಲಚಂದ್ರ ನಾಯ್ಕ, ಅಶೋಕ ಆರ್ ನಾಯ್ಕ ಉಪಸ್ಥಿತರಿದ್ದರು. ಬಳಗದ ಸದಸ್ಯ ಹಾಗೂ ರೈಲ್ವೆ ಉದ್ಯೋಗಿ ನವೀನ್ ಆರ್ ನಾಯ್ಕ ನಿರೂಪಿಸಿದರು‌.

ಮಾಜಿ ಯೋಧರಿಗೆ ಸನ್ಮಾನ-

ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿದ್ಧಾಪುರ ತಾಲೂಕಿನ ಮಾ.ಹಿ.ಪ್ರಾ.ಶಾಲೆ ಬಾಲಿಕೊಪ್ಪಮತ್ತು ಹಿ.ಪ್ರಾ.ಶಾಲೆ ಅವರಗುಪ್ಪಾಗಳಲ್ಲಿ ಮಾಜಿ ಯೋಧರನ್ನು ಸನ್ಮಾನಿಸಿ ಗೌರವಿಸಲಾಯಿತು.ಬಾಲಿಕೊಪ್ಪ ಎಮ್.ಎಚ್.ಪಿ.ಎಸ್.‌ ನಲ್ಲಿ‌ ಮಾಜಿಯೋಧ ಕುಮಾರಗೌಡರ್ ಮತ್ತು ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಆನಂದ ನಾಯ್ಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅವರಗುಪ್ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಯೋಧರಾದ ದಿನೇಶ್ ಕುಮಾರ್‌ ತರಳಿ ಮತ್ತು ಕೃಷ್ಣ ನಾಯ್ಕ ರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕು.ಸುಹಾಸ್ ಮಾಳ್ಕೋಡಗೆ ಅಸಾಧಾರಣ ಪ್ರತಿಭಾ ಪುರಸ್ಕಾರ
ಸಿದ್ದಾಪುರ; ಪಟ್ಟಣದ ಐತಿಹಾಸಿಕ ನೆಹರು ಮೈದಾನದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ಕೋಲಶಿರ್ಸಿಯ ಕು.ಸುಹಾಸ್ ನಾಗರಾಜ ನಾಯ್ಕ ಮಾಳ್ಕೋಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೂ.೧೦ ಸಾವಿರ ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಯಿತು.
೨೦೨೦-೨೧ ನೇ ಸಾಲಿನ ಪುರಸ್ಕಾರಕ್ಕೆ ಆಯ್ಕೆಯಾದ ಕು.ಸುಹಾಸ್ ನಾಯ್ಕಗೆ ಜಿಲ್ಲಾಡಳಿತ ಪರವಾಗಿ ತಹಶೀಲ್ದಾರ ಸಂತೋಷ ಕೆ.ಭಂಡಾರಿ ಪ್ರಶಸ್ತಿ ಪ್ರದಾನ ಮಾಡಿದರು. ತಾಲೂಕ ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ ವಿ.ರಾವ್, ಪೊಲೀಸ್ ನಿರೀಕ್ಷರಾದ ಕುಮಾರ.ಲೆ, ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ, ಕ್ಷೇತ್ರ ಶೀಕ್ಷಣಾಧಿಕಾರಿ ಸದಾನಂದ ಸ್ವಾಮಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಓ ಪೂರ್ಣಿಮ ಆರ್.ದೊಡ್ಮನಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಕುಮಾರ ಡಿ.ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಕೋಲಶಿರ್ಸಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋ ತ್ಸವ ಆಚರಣೆೆ
ಸಿದ್ದಾಪುರ; ತಾಲೂಕಿನ ಕೋಲಶಿರ್ಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ ನೇ ಸ್ವಾತಂತ್ರ್ಯೋ ತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಜ್ಯ ವಕೀಲರ ಸಂಘದ ಮಾಜಿ ಅಧ್ಯಕ್ಷ ನಾಡಿನ ಖ್ಯಾತ ವಕೀಲರಾದ ಜಯಕುಮಾರ ಪಾಟೀಲ್ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಆವಾರದಲ್ಲಿ ನೆರವೇರಿಸಿದರು.
ನಂತರ ವಿದ್ಯಾರ್ಥಿಗಳು ಊರಿನಲ್ಲಿ ಪ್ರಭಾತಫೇರಿಯನ್ನು ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದಲ್ಲಿ ಊರಿನ ವೀರ ಯೋಧರಾದ ಮಾಜಿ ಸೈನಿಕರಾದ ನಿರಂಜನ ನಾಯ್ಕ ಮತ್ತು ಅಣ್ಣಪ್ಪ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿ ಸಹಕಾರ ನೀಡಿದ ಧಾನಿಗಳಾದ ಗ್ರಾ.ಪಂ ಉಪಾಧ್ಯಕ್ಷ ಕೆ.ಆರ್.ವಿನಾಯಕ, ಸ್ಥಳೀಯರಾದ ಚಂದ್ರಹಾಸ ಎಂ.ನಾಯ್ಕ, ವಾಸು ನಾಯ್ಕ, ಆನಂದ ಎಚ್.ನಾಯ್ಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕುಮಾರ ನಾಯ್ಕ, ಉಪಾಧ್ಯಕ್ಷೆ ದಿವ್ಯಾ ನಾಯ್ಕ, ಗ್ರಾ.ಪಂ ಸದಸ್ಯ ಜಿ.ಬಿ.ನಾಯ್ಕ, ಮುಖ್ಯ ಶಿಕ್ಷಕಿ ಸುಮನಾ ಶೇಟ್ ವೇದಿಕೆಯಲ್ಲಿದ್ದರು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು , ಶಿಕ್ಷಕರು ಪಾಲ್ಗೊಂಡರು. ಮುಖ್ಯ ಶಿಕ್ಷಕಿ ಸುಮನಾ ಶೇಟ್ ಸ್ವಾಗತಿಸಿದರು.ಶಿಕ್ಷಕಿ ಸವಿತಾ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.ಭಾಗ್ಯಶ್ರೀ ಹೆಗಡೆ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *