

ನಾಲ್ಕು ವರ್ಷಗಳಿಂದ ಬೇಡ್ಕಣಿ ಕಾಲೇಜು ರಸ್ತೆಯಲ್ಲಿ ನಡೆಯುತಿದ್ದ ಪಾಸ್ಟ್ ಫುಡ್ ಅಂಗಡಿಯೊಂದು ಶುಕ್ರವಾರ ಮುಂಜಾನೆಯ ಸಮಯಕ್ಕೆ ಧಗಧಗನೆ ಉರಿದು ಬೂದಿಯಾದ ಪ್ರಕರಣ ಹಲವು ವಿಚಾರಗಳ ಚರ್ಚೆಗೆ ಕಾರಣವಾಗಿದೆ.


ಸರ್ಕಾರಿ ಪದವಿ ಕಾಲೇಜ್ ಸಿದ್ಧಾಪುರದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಿತ್ಯ ಅಲ್ಪೋಪಹಾರ ಒದಗಿಸುತಿದ್ದ ಅಂಗಡಿ ಬೇಡ್ಕಣಿಯ ಶ್ರೀಧರ ನಾಯ್ಕರಿಗೆ ಸಂಬಂಧಿಸಿದೆ. ಈ ಅಂಗಡಿ ಬಗ್ಗೆ ಕೆಲವು ಸ್ಥಳಿಯರ ವಿರೋಧಗಳಿದ್ದ ಬಗ್ಗೆ ಮಾಹಿತಿ ನೀಡುವ ಸ್ಥಳೀಯರು ಈ ಹಿಂದೆ ಇದೇ ಅಂಗಡಿಯಲ್ಲಿ ಕಳ್ಳತನ ನಡೆದಿತ್ತು. ಈಗ ಮಧ್ಯ ರಾತ್ರಿಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ ಎನ್ನುವ ಅಂಶ ನಂಬಲು ಸೂಕ್ತವಲ್ಲ. ಏಕಾಏಕಿ ಸಿಲಿಂಡರ್ ಸ್ಫೋಟವಾಗುವ ಸಾಧ್ಯತೆ ಕಡಿಮೆ ಇರುವುದರಿಂದ ಕೆಲವು ಸ್ಥಳೀಯ ಕಿಡಿಗೇಡಿಗಳು ಈ ಕೃತ್ಯದ ಹಿಂದಿರಬಹುದು ಎಂದು ಸಂಶಯಿಸಿರುವ ಅವರು ಈ ಪ್ರಕರಣದ ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
