ಮೊಮ್ಮಗನನ್ನೇ ಕಿಡ್ನ್ಯಾಪ್‌ ಮಾಡಿದ ಅಜ್ಜ!

ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ.. ಹಣ ವಾಪಸ್​ ಪಡೆಯಲು ಅಜ್ಜನಿಂದಲೇ ಮೊಮ್ಮಗನ ಅಪಹರಣ

ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಕೊಟ್ಟ ಹಣ ವಾಪಸ್ ಪಡೆಯಲು ಮೊಮ್ಮಗನನ್ನು ಅಜ್ಜನೇ ಅಪಹರಣ ಮಾಡಿಸಿದ್ದ ಎನ್ನುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.

ಕಾರವಾರ: ಭಟ್ಕಳದ ಬಾಲಕನ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೊಟ್ಟ ಹಣ ವಾಪಸ್ ಪಡೆಯಲು ಸ್ವತಃ ಅಜ್ಜನೇ ಮೊಮ್ಮಗನನ್ನು ಅಪಹರಣ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದಲ್ಲಿರುವ ಬಾಲಕನ ಅಜ್ಜ ಇನಾಯತುಲ್ಲಾ ಮೊಮ್ಮಗನ ಕಿಡ್ನ್ಯಾಪ್​ಗೆ ಸ್ಕೆಚ್ ಹಾಕಿರುವ ಆರೋಪಿ. ಬಾಲಕನ ತಾಯಿಯ ಸಂಬಂಧಿಯಾಗಿರುವ ಇನಾಯತುಲ್ಲಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ಸೋಮವಾರ ಗೋವಾದ ಕಲ್ಲಂಗುಟ್​​ ಬೀಚ್ ಸಮೀಪ ಬಾಲಕ ಪತ್ತೆಯಾಗಿದ್ದಾನೆ. ಬಾಲಕನ ಜತೆಗಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಬದ್ರಿಯಾ ನಗರದ ನಿವಾಸಿ ಕೋಳಿ ಅಂಗಡಿ ನಡೆಸುತ್ತಿದ್ದ ಅನೀಸ್ ಭಾಷಾ ಬಂಧಿತ ಆರೋಪಿ. ಬಾಲಕನ ಅಜ್ಜನ ಸೂಚನೆಯಂತೆ ಅನೀಸ್ ಭಾಷಾ ತಂಡದೊಂದಿಗೆ ಕಿಡ್ನ್ಯಾಪ್ ಮಾಡಿದ್ದಾನೆ. ಪ್ರಕರಣದ ಇನ್ನೂ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಎಸ್ಪಿ ಡಾ. ಸುಮನ್ ಪೆನ್ನೇಕರ್

ಏನಿದು ಪ್ರಕರಣ ?: ಭಟ್ಕಳದಲ್ಲಿ ಆಗಸ್ಟ್​ 20 ರಂದು ರಾತ್ರಿ ಅಂಗಡಿಗೆ ತೆರಳಿದ್ದ ಎಂಟು ವರ್ಷದ ಬಾಲಕನನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಒಟ್ಟು ನಾಲ್ವರು ಕಾರಿನಲ್ಲಿ ಬಂದು ಬಾಲಕನನ್ನು ಅಪಹರಿಸಿದ್ದರು. ಈ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಮಧ್ಯರಾತ್ರಿ ಪ್ರಕರಣ ದಾಖಲಾಗಿತ್ತು. ಬಾಲಕನ ಹುಡುಕಾಟ ಹಾಗೂ ಆತನನ್ನು ಸುರಕ್ಷಿತವಾಗಿ ಕರೆತರಲು ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಡಾ. ಸುಮನ್ ಪೆನ್ನೇಕರ್ ಮಾತನಾಡಿ, ಬಾಲಕನ ಅಜ್ಜ ಸೇರಿ ಇನ್ನೂ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ತಯಾರಿ ನಡೆಸಿದ್ದಾರೆ. ಬಾಲಕನ ತಂದೆ ಮತ್ತು ಮಾವನ ನಡುವೆ ಹಣಕಾಸಿನ ವ್ಯವಹಾರವಿದ್ದು, ಇದೇ ಅಪಹರಣಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಈ ಹಿಂದೆ ಕೂಡ ಬಾಲಕನ ತಂದೆಗೆ ಬೆದರಿಕೆ ಹಾಕಲಾಗಿತ್ತು. ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ನೀಡಿದರು.

ಅಪಹರಣಕ್ಕೆ ಒಳಗಾದ ಬಾಲಕನನ್ನು ಇಂದು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆತಂದು ಮೆಡಿಕಲ್​ ಚೆಕ್ಅಪ್​ಗೆ ಒಳಪಡಿಸಲಾಯಿತು. ನಂತರ ಬಾಲಕನನ್ನು ಭಟ್ಕಳ ನಗರ ಠಾಣೆಗೆ ಕರೆ ತಂದು, ಡಿವೈಎಸ್ಪಿ ಕೆ ಯು ಬೆಳ್ಳಿಯಪ್ಪ ಅವರ ಮುಂದಾಳತ್ವದಲ್ಲಿ ಕುಟುಂಬದವರಿಗೆ ಒಪ್ಪಿಸಲಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *